ಕಾಡಾನೆ ದಾಳಿಗೆ ಗುರಿಯಾದ ಅರವಳಿಕೆ ತಜ್ಞ ವೆಂಕಟೇಶ್ 
ರಾಜ್ಯ

ಆಲೂರು: ಅರವಳಿಕೆ ತಜ್ಞನ ಮೇಲೆ ಕಾಡಾನೆ ದಾಳಿ; ಗಂಭೀರ ಗಾಯ!

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹುಲಿಯೂರು ಗ್ರಾಮದಲ್ಲಿ ಕಾಡಾನೆಯೊಂದು ವೈದ್ಯಕೀಯ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದು, ಅರವಳಿಕೆ ತಜ್ಞ ತೀವ್ರವಾಗಿ ಗಾಯಗೊಂಡಿದ್ದಾರೆ. 

ಹಾಸನ: ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹುಲಿಯೂರು ಗ್ರಾಮದಲ್ಲಿ ಕಾಡಾನೆಯೊಂದು ವೈದ್ಯಕೀಯ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದು, ಅರವಳಿಕೆ ತಜ್ಞ ತೀವ್ರವಾಗಿ ಗಾಯಗೊಂಡಿದ್ದಾರೆ. 

ಗಾಯಗೊಂಡಿರುವ ಅರವಳಿಕೆ ತಜ್ಞ ವೆಂಕಟೇಶ್ ಶಾರ್ಪ್ ಶೂಟರ್ ಆಗಿದ್ದು, ಚಿಕಿತ್ಸೆ ನೀಡಲೆಂದು ಹೋದಾಗ, ಆನೆಗೆ ಅರವಳಿಕೆ ನೀಡುವ ಪ್ರಕ್ರಿಯೆ ವೇಳೆ ಈ ಅವಘಡ ಸಂಭವಿಸಿದೆ. 

40 ವರ್ಷದ ಕಾಡಾನೆ ಭೀಮ ವೈದ್ಯಕೀಯ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದು, ಈ ಆನೆ ಮತ್ತೊಂದು ಆನೆಯೊಂದಿಗೆ ಕಾಳಗ ನಡೆಸಿದ್ದ ಹಿನ್ನೆಲೆಯಲ್ಲಿ ಬೆನ್ನಿನ ಮೇಲೆ ಗಾಯಗಳಾಗಿತ್ತು.

ಗ್ರಾಮಸ್ಥರ ದೂರಿನ ಹಿನ್ನೆಲೆಯಲ್ಲಿ ಗಾಯಗೊಂಡಿದ್ದ ಆನೆಗೆ ಚಿಕಿತ್ಸೆ ಕೊಡಿಸುವುದಕ್ಕಾಗಿ ಅರವಳಿಕೆ ನೀಡಲು ಹಾಸನ ಅರಣ್ಯ ವಿಭಾಗ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಂದ ಅನುಮತಿ ಪಡೆದಿತ್ತು. 

ತೀವ್ರವಾಗಿ ಗಾಯಗೊಂಡಿರುವ ವೆಂಕಟೇಶ್ ಅವರ ಸ್ಥಿತಿ ಚಿಂತಾಜನಕವಾಗಿದ್ದು ಹೆಚ್ಐಎಂಎಸ್ ನ ಐಸಿಯುಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆಯೇ ಹಿರಿಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಪರಿಸ್ಥಿತಿ ನಿಯಂತ್ರಿಸಿದ್ದಾರೆ.

50ಕ್ಕೂ ಹೆಚ್ಚು ಕಾಡಾನೆಗಳಿಗೆ ಅರವಳಿಕೆ ನೀಡುವ ಮೂಲಕ ವೆಂಕಟೇಶ್ ಅವರು ತಮ್ಮ ಕ್ಷೇತ್ರದಲ್ಲಿ ಖ್ಯಾತಿ ಪಡೆದಿದ್ದರು. ದಶಕಗಳಿಂದ ದಿನನಿತ್ಯ ವೇತನ ಪಡೆಯುವ ಆಧಾರದಲ್ಲಿ ವೆಂಕಟೇಶ್ ಕಾರ್ಯನಿರ್ವಹಿಸುತ್ತಿದ್ದಾರೆ. ಅರಣ್ಯ ಇಲಾಖೆ ಅವರ ಉದ್ಯೋಗವನ್ನು ಇನ್ನಷ್ಟೇ ಖಾಯಂಗೊಳಿಸಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT