ಕಾಡಾನೆ ದಾಳಿಗೆ ಗುರಿಯಾದ ಅರವಳಿಕೆ ತಜ್ಞ ವೆಂಕಟೇಶ್ 
ರಾಜ್ಯ

ಆಲೂರು: ಅರವಳಿಕೆ ತಜ್ಞನ ಮೇಲೆ ಕಾಡಾನೆ ದಾಳಿ; ಗಂಭೀರ ಗಾಯ!

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹುಲಿಯೂರು ಗ್ರಾಮದಲ್ಲಿ ಕಾಡಾನೆಯೊಂದು ವೈದ್ಯಕೀಯ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದು, ಅರವಳಿಕೆ ತಜ್ಞ ತೀವ್ರವಾಗಿ ಗಾಯಗೊಂಡಿದ್ದಾರೆ. 

ಹಾಸನ: ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹುಲಿಯೂರು ಗ್ರಾಮದಲ್ಲಿ ಕಾಡಾನೆಯೊಂದು ವೈದ್ಯಕೀಯ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದು, ಅರವಳಿಕೆ ತಜ್ಞ ತೀವ್ರವಾಗಿ ಗಾಯಗೊಂಡಿದ್ದಾರೆ. 

ಗಾಯಗೊಂಡಿರುವ ಅರವಳಿಕೆ ತಜ್ಞ ವೆಂಕಟೇಶ್ ಶಾರ್ಪ್ ಶೂಟರ್ ಆಗಿದ್ದು, ಚಿಕಿತ್ಸೆ ನೀಡಲೆಂದು ಹೋದಾಗ, ಆನೆಗೆ ಅರವಳಿಕೆ ನೀಡುವ ಪ್ರಕ್ರಿಯೆ ವೇಳೆ ಈ ಅವಘಡ ಸಂಭವಿಸಿದೆ. 

40 ವರ್ಷದ ಕಾಡಾನೆ ಭೀಮ ವೈದ್ಯಕೀಯ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದು, ಈ ಆನೆ ಮತ್ತೊಂದು ಆನೆಯೊಂದಿಗೆ ಕಾಳಗ ನಡೆಸಿದ್ದ ಹಿನ್ನೆಲೆಯಲ್ಲಿ ಬೆನ್ನಿನ ಮೇಲೆ ಗಾಯಗಳಾಗಿತ್ತು.

ಗ್ರಾಮಸ್ಥರ ದೂರಿನ ಹಿನ್ನೆಲೆಯಲ್ಲಿ ಗಾಯಗೊಂಡಿದ್ದ ಆನೆಗೆ ಚಿಕಿತ್ಸೆ ಕೊಡಿಸುವುದಕ್ಕಾಗಿ ಅರವಳಿಕೆ ನೀಡಲು ಹಾಸನ ಅರಣ್ಯ ವಿಭಾಗ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಂದ ಅನುಮತಿ ಪಡೆದಿತ್ತು. 

ತೀವ್ರವಾಗಿ ಗಾಯಗೊಂಡಿರುವ ವೆಂಕಟೇಶ್ ಅವರ ಸ್ಥಿತಿ ಚಿಂತಾಜನಕವಾಗಿದ್ದು ಹೆಚ್ಐಎಂಎಸ್ ನ ಐಸಿಯುಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆಯೇ ಹಿರಿಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಪರಿಸ್ಥಿತಿ ನಿಯಂತ್ರಿಸಿದ್ದಾರೆ.

50ಕ್ಕೂ ಹೆಚ್ಚು ಕಾಡಾನೆಗಳಿಗೆ ಅರವಳಿಕೆ ನೀಡುವ ಮೂಲಕ ವೆಂಕಟೇಶ್ ಅವರು ತಮ್ಮ ಕ್ಷೇತ್ರದಲ್ಲಿ ಖ್ಯಾತಿ ಪಡೆದಿದ್ದರು. ದಶಕಗಳಿಂದ ದಿನನಿತ್ಯ ವೇತನ ಪಡೆಯುವ ಆಧಾರದಲ್ಲಿ ವೆಂಕಟೇಶ್ ಕಾರ್ಯನಿರ್ವಹಿಸುತ್ತಿದ್ದಾರೆ. ಅರಣ್ಯ ಇಲಾಖೆ ಅವರ ಉದ್ಯೋಗವನ್ನು ಇನ್ನಷ್ಟೇ ಖಾಯಂಗೊಳಿಸಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT