ಪ್ರಾತಿನಿಧಿಕ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಮಳೆಯಿಲ್ಲದೆ ಎರಡು ಎಕರೆ ಈರುಳ್ಳಿ ಬೆಳೆ ನಾಶ, ಮನನೊಂದು ರೈತ ಆತ್ಮಹತ್ಯೆ

ಮಳೆಯಿಲ್ಲದೆ ಈರುಳ್ಳಿ ಬೆಳೆ ಹಾನಿಯಿಂದ ಮನನೊಂದ ರೈತರೊಬ್ಬರು ತಮ್ಮ ಹೊಲದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಚಿಕ್ಕಮಗಳೂರು: ಮಳೆಯಿಲ್ಲದೆ ಈರುಳ್ಳಿ ಬೆಳೆ ಹಾನಿಯಿಂದ ಮನನೊಂದ ರೈತರೊಬ್ಬರು ತಮ್ಮ ಹೊಲದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಮೃತ ರೈತನನ್ನು ಕಡೂರು ತಾಲೂಕಿನ ಗಿರಿಯಾಪುರ ನಿವಾಸಿ ಸತೀಶ್ (49) ಎಂದು ಗುರುತಿಸಲಾಗಿದೆ. ಸತೀಶ್ ತನ್ನ ಎರಡು ಎಕರೆ ಜಮೀನಿನಲ್ಲಿ ಈರುಳ್ಳಿ ಬೆಳೆಯಲು ಸಾಲ ಮಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ, ಮುಂಗಾರು ವೈಫಲ್ಯ ಮತ್ತು ಬರಗಾಲದಂತಹ ಪರಿಸ್ಥಿತಿಯಿಂದಾಗಿ ಬೆಳೆ ಸಂಪೂರ್ಣ ಒಣಗಿ ಹೋಗಿದೆ. ಇದರಿಂದ ಮನನೊಂದ ಸತೀಶ್ ತನ್ನ ಜಮೀನಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಸಂಬಂಧ ಅಜ್ಜಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಬರ ಪರಿಸ್ಥಿತಿಯ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯು ಶೀಘ್ರವೇ ವರದಿ ಸಲ್ಲಿಸಲಿದ್ದು, ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿದ ಬಳಿಕವೇ ಕೇಂದ್ರದ ನೆರವು ಕೋರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ತಿಳಿಸಿದ್ದಾರೆ. 

ಬರ ಘೋಷಣೆಯಾದ ನಂತರ ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ಕೋರಲಾಗುವುದು ಮತ್ತು ನಂತರ ಕೇಂದ್ರದ ತಂಡವು ರಾಜ್ಯದ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

SCROLL FOR NEXT