ಪ್ರಾತಿನಿಧಿಕ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಮಳೆಯಿಲ್ಲದೆ ಎರಡು ಎಕರೆ ಈರುಳ್ಳಿ ಬೆಳೆ ನಾಶ, ಮನನೊಂದು ರೈತ ಆತ್ಮಹತ್ಯೆ

ಮಳೆಯಿಲ್ಲದೆ ಈರುಳ್ಳಿ ಬೆಳೆ ಹಾನಿಯಿಂದ ಮನನೊಂದ ರೈತರೊಬ್ಬರು ತಮ್ಮ ಹೊಲದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಚಿಕ್ಕಮಗಳೂರು: ಮಳೆಯಿಲ್ಲದೆ ಈರುಳ್ಳಿ ಬೆಳೆ ಹಾನಿಯಿಂದ ಮನನೊಂದ ರೈತರೊಬ್ಬರು ತಮ್ಮ ಹೊಲದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಮೃತ ರೈತನನ್ನು ಕಡೂರು ತಾಲೂಕಿನ ಗಿರಿಯಾಪುರ ನಿವಾಸಿ ಸತೀಶ್ (49) ಎಂದು ಗುರುತಿಸಲಾಗಿದೆ. ಸತೀಶ್ ತನ್ನ ಎರಡು ಎಕರೆ ಜಮೀನಿನಲ್ಲಿ ಈರುಳ್ಳಿ ಬೆಳೆಯಲು ಸಾಲ ಮಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ, ಮುಂಗಾರು ವೈಫಲ್ಯ ಮತ್ತು ಬರಗಾಲದಂತಹ ಪರಿಸ್ಥಿತಿಯಿಂದಾಗಿ ಬೆಳೆ ಸಂಪೂರ್ಣ ಒಣಗಿ ಹೋಗಿದೆ. ಇದರಿಂದ ಮನನೊಂದ ಸತೀಶ್ ತನ್ನ ಜಮೀನಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಸಂಬಂಧ ಅಜ್ಜಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಬರ ಪರಿಸ್ಥಿತಿಯ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯು ಶೀಘ್ರವೇ ವರದಿ ಸಲ್ಲಿಸಲಿದ್ದು, ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿದ ಬಳಿಕವೇ ಕೇಂದ್ರದ ನೆರವು ಕೋರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ತಿಳಿಸಿದ್ದಾರೆ. 

ಬರ ಘೋಷಣೆಯಾದ ನಂತರ ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ಕೋರಲಾಗುವುದು ಮತ್ತು ನಂತರ ಕೇಂದ್ರದ ತಂಡವು ರಾಜ್ಯದ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT