ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿ ಮೇಲೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ

ಬುಧವಾರ ಇಲ್ಲಿ ಟ್ರೇಡ್ ಲೈಸೆನ್ಸ್ ನೀಡುವ ವಿಚಾರವಾಗಿ ಕಲಬುರಗಿ ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕ ಧನಶೆಟ್ಟಿ ಹೆಡಗಾಪುರಿ ಮೇಲೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ಕಲಬುರಗಿ: ಬುಧವಾರ ಇಲ್ಲಿ ಟ್ರೇಡ್ ಲೈಸೆನ್ಸ್ ನೀಡುವ ವಿಚಾರವಾಗಿ ಕಲಬುರಗಿ ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕ ಧನಶೆಟ್ಟಿ ಹೆಡಗಾಪುರಿ ಮೇಲೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ಪಾಲಿಕೆ ಆವರಣದಲ್ಲಿ ಅಧಿಕಾರಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ರಾತ್ರಿ ಬ್ರಹ್ಮಪುರಿ ಪೊಲೀಸ್ ಠಾಣೆಗೆ ಬಂದಾಗ ದಾಳಿಕೋರರು ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸದಂತೆ ಬೆದರಿಕೆಯೊಡ್ಡಿದ್ದಾರೆ ಆರೋಗ್ಯ ನಿರೀಕ್ಷಕರು ಆರೋಪಿಸಿದ್ದಾರೆ. 
ಪೊಲೀಸರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ದಾಳಿಕೋರರಲ್ಲಿ ಒಬ್ಬಾತ ಪಾಲಿಕೆಯಿಂದ ವ್ಯಾಪಾರ ಪರವಾನಗಿಗಾಗಿ ಅರ್ಜಿ ಸಲ್ಲಿಸಿದ್ದರು ಎಂದು ವರದಿಯಾಗಿದೆ. ಆಗಸ್ಟ್ 18ರಂದು ತೆರವು ಮಾಡಿದ ನಂತರ ತಾನು ಕಡತವನ್ನು ಸಂಬಂಧಿಸಿದ ಇಲಾಖೆಗೆ ವರ್ಗಾಯಿಸಿದ್ದೇನೆ ಎಂದು ಆರೋಗ್ಯ ನಿರೀಕ್ಷಕರು ಹೇಳಿದ್ದಾರೆ. 

ಪಾಲಿಕೆ ಉಪ ಆಯುಕ್ತ (ಅಭಿವೃದ್ಧಿ) ಆರ್ ಪಿ ಜಾಧವ್, ಕುಡಿದ ಅಮಲಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಎದುರೇ ಆರೋಗ್ಯ ನಿರೀಕ್ಷಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾನಗರ ಪಾಲಿಕೆ ಆಯುಕ್ತ ಭುವನೇಶ್ ಪಾಟೀಲ್ ದೇವದಾಸ್, 'ಅವಿನಾಶ್ ಭಾಸ್ಕರ್ ಮತ್ತು ರಾಜು ಎಂಬ ಇಬ್ಬರು ವ್ಯಕ್ತಿಗಳು ಗುರುವಾರ ಸಂಜೆ ಕೆಎಂಪಿ ಕಚೇರಿಗೆ ಬಂದು ಕೆಎಂಪಿಯ ಆಹಾರ ನಿರೀಕ್ಷಕ ಧನಶೆಟ್ಟಿ ಅವರೊಂದಿಗೆ ಅನುಮತಿ ನೀಡುವಂತೆ ಜಗಳವಾಡಿದರು. ಜಗಳ ತಾರಕಕ್ಕೇರಿ ಧನಶೆಟ್ಟಿಯನ್ನು ಕೋಣೆಗೆ ಎಳೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ಕೆಎಂಪಿ ಆಯುಕ್ತರು ತಿಳಿಸಿದ್ದಾರೆ.

ಅವಿನಾಶ್ ಮತ್ತು ಭಾಸ್ಕರ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಧನಶೆಟ್ಟಿಯ ಮಕ್ಕಳನ್ನು ಅಪಹರಿಸುವುದಾಗಿ ಬೆದರಿಕೆ ಹಾಕಿದ್ದಾರೆ. ನಂತರ ಧನಶೆಟ್ಟಿ ಮತ್ತು ಕೆಲವರು ಠಾಣೆಗೆ ದೂರು ನೀಡಲು ತೆರಳಿದ್ದು, ಠಾಣೆಯ ಸುತ್ತಲಿನ ವಾತಾವರಣ ನೋಡಿ ದೂರು ದಾಖಲಿಸದೆ ವಾಪಸ್ಸಾದರು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT