ಸಾಂಕೇತಿಕ ಚಿತ್ರ 
ರಾಜ್ಯ

ಮಡಿಕೇರಿ: ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ವೈದ್ಯ ಸತೀಶ್ ಕಾರಿನಲ್ಲಿ ಶವವಾಗಿ ಪತ್ತೆ

ಮೈಸೂರಿನ ಕೊಣಸೂರು ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ವೈದ್ಯನಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಸತೀಶ್ ಅವರು ಶುಕ್ರವಾರ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 

ಮಡಿಕೇರಿ: ಮೈಸೂರಿನ ಕೊಣಸೂರು ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ವೈದ್ಯನಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಸತೀಶ್ ಅವರು ಶುಕ್ರವಾರ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 

ಕುಶಾಲನಗರ ತಾಲ್ಲೂಕಿನ ಆನೆಕಾಡು ಗ್ರಾಮದ ಬಳಿ, ರಾಷ್ಟ್ರೀಯ ಹೆದ್ದಾರಿ ಬಳಿ ನಿಂತಿದ್ದ ಕಾರಿನಲ್ಲಿ ವೈದ್ಯ ಸತೀಶ್ ಅವರು ಶವವಾಗಿ ಪತ್ತೆಯಾಗಿದ್ದಾರೆ. 

ಸತೀಶ್(47) ಅವರು ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ನಿವಾಸಿಯಾಗಿದ್ದು, ಇತ್ತೀಚಿಗೆ ಬೆಳಕಿಗೆ ಬಂದ 900 ಭ್ರೂಣ ಹತ್ಯೆ ಪ್ರಕರಣದಲ್ಲಿ ಅವರ ಹೆಸರು ಸಹ ಕೇಳಿಬಂದಿತ್ತು. 

ಬಂಧಿತ ಆರೋಪಿಗಳು ವಿಚಾರಣೆ ವೇಳೆ ಸತೀಶ್ ಅವರ ಹೆಸರು ಹೇಳಿದ್ದರು ಎನ್ನಲಾಗಿದೆ. ಅಲ್ಲದೆ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವೈದ್ಯ ಸತೀಶ್ ಅವರು ತಲೆಮರೆಸಿಕೊಂಡಿದ್ದರು. ರಾಜ್ಯ ಸರ್ಕಾರ ಈಗ ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು, ಸಿಕ್ಕಿಬಿಳುವ ಭಯದಿಂದ ವೈದ್ಯ ಸತೀಶ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ವೈದ್ಯನ ಸಾವು ಹಲವು ಅನುಮಾನಕ್ಕೆ ಕಾರಣವಾಗಿದ್ದು, ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bengal polls: ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ರಾಜಕಾರಣಿಗಳಿಗೆ ಸೆಕ್ಯೂರಿಟಿ ವಾಪಸ್, ಚುನಾವಣಾ ಆಯೋಗ ನಿರ್ದೇಶನ!

ಅಮೆರಿಕದ ಬಲಿಷ್ಠ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ವಿಮಾನದಿಂದ ಧುಮುಕಿದ ಪೈಲಟ್‌ ಗಾಗಿ ಶೋಧ; ಬಹುಮಾನ ಘೋಷಣೆ

Iran War: Hormuz ಕುರಿತು ಬಹ್ರೇನ್ ನೇತೃತ್ವದಲ್ಲಿ ಕರಡು ನಿರ್ಣಯ; UNSC ಮತದಾನ ನಾಳೆ!

ಏನಾಗ್ತಿದೆ ಅಮೇರಿಕಾದಲ್ಲಿ?: ಸೇನಾ ಮುಖ್ಯಸ್ಥರನ್ನು ಕಿತ್ತೆಸೆದ ಬೆನ್ನಲ್ಲೇ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಗೆ Fraud Czar ಪಟ್ಟ ಕಟ್ಟಿದ ಟ್ರಂಪ್!

ಚುನಾವಣೆಗೂ ಮುನ್ನವೇ TVK ವಿಜಯ್‌ಗೆ ಸಂಕಷ್ಟ? ಎರಡು ಕಡೆ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತ ಸಾಧ್ಯತೆ!

SCROLL FOR NEXT