ಬಾಂಬ್ ಇಮೇಲ್ ಬಂದ ಸುದ್ದಿ ಕೇಳಿ ಆತಂಕಗೊಂಡು ಶಾಲೆ ಬಳಿ ಓಡೋಡಿ ಬಂದ ಪೋಷಕರು 
ರಾಜ್ಯ

ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಗೃಹ ಸಚಿವ ಡಾ ಜಿ ಪರಮೇಶ್ವರ್

ನಗರದ ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಮಾಡಿರುವ ಕೃತ್ಯದ ಹಿಂದೆ ಯಾರೇ ತಪ್ಪು ಮಾಡಿದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರು: ನಗರದ ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಮಾಡಿರುವ ಕೃತ್ಯದ ಹಿಂದೆ ಯಾರೇ ತಪ್ಪು ಮಾಡಿದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 15ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಇಮೇಲ್ ಬಂದಿರುವ ಘಟನೆ ಬಗ್ಗೆ ಪರಿಶೀಲನೆ ತನಿಖೆ ಮಾಡಿಸುತ್ತೇವೆ, ನಾವು ಮಕ್ಕಳ ವಿಚಾರದಲ್ಲಿ ನಿರ್ಲಕ್ಷ್ಯ ಮಾಡುವಂತಿಲ್ಲ, ಮಕ್ಕಳು ಆತಂಕದಲ್ಲಿ ಶಾಲೆಗೆ ಹೋಗುವಂತಾಗಬಾರದು, ಈ ಪ್ರಕರಣದಲ್ಲಿ ಸರಿಯಾದ ತನಿಖೆ ಮಾಡಿ ಯಾರೇ ತಪ್ಪು ಮಾಡಿದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇಂತಹ ಸಮಾಜಘಾತುಕ ಕುಕೃತ್ಯದಲ್ಲಿ ತೊಡಗಿರುವವರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ, ಈ ವಿಷಯದಲ್ಲಿ ರಾಜಿ ಮಾಡುವುದಿಲ್ಲ. ನಾವು ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ ಎಂದರು.

ಈ ಘಟನೆ ಬಗ್ಗೆ ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್, ಬೆಂಗಳೂರು ನಗರದ ಕೆಲವು ಶಾಲೆಗಳಿಗೆ ಬೆದರಿಕೆ ಇಮೇಲ್ ಬಂದಿದೆ. ಈ ಬಗ್ಗೆ ನಮಗೆ ಮಾಹಿತಿ ಬಂದ ಕೂಡಲೇ ಕ್ರಮ ಕೈಗೊಳ್ಳಲಾಗಿದೆ. ಈ ಎಲ್ಲಾ ಶಾಲೆಗಳಿಗೆ ನಮ್ಮ ಬಾಂಬ್ ನಿಷ್ಕ್ರಿಯ ದಳ ಹೋಗಿ ತಪಾಸಣೆ ನಡೆಸಿದೆ. ಈ ಹಿಂದೆಯೂ ಸಹ ಈ ರೀತಿ ಬೆದರಿಕೆ ಕರೆ ಬಂದಿತ್ತು. ಬಹುಶಃ ಇದು ಸುಳ್ಳು ಬಾಂಬ್ ಬೆದರಿಕೆ ಅನ್ನಿಸುತ್ತಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ: ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಆಗಂತುಕರು ಬಾಂಬ್ ಬೆದರಿಕೆ ಹಾಕಿದ್ದಾರೆ. ಇ-ಮೇಲ್ ಮೂಲಕ ನಗರದ ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ ಸೇರಿದಂತೆ 7 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದಾರೆ. ಸದಾಶಿವನಗರದ ನೀವ್ ಅಕಾಡೆಮಿ, ಯಲಹಂಕದ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT