ಬ್ಲ್ಯಾಕ್ ಮ್ಯಾಜಿಕ್ 
ರಾಜ್ಯ

ಧಾರವಾಡ: ಕರ್ನಾಟಕ ವಿವಿ ಸಹಾಯಕ ಪ್ರಾಧ್ಯಾಪಕಿ ಚೇಂಬರ್​ನಲ್ಲಿ ವಾಮಾಚಾರ!

ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅವರ ಚೇಂಬರ್‌ನಲ್ಲಿ ವಾಮಾಚಾರ ಮಾಡಿರುವುದಾಗಿ ಹೇಳಲಾಗಿದ್ದು, ಅದಕ್ಕೆ ಸಂಬಂಧಿಸಿದ ಕುರುಹುಗಳು ಪತ್ತೆಯಾಗಿವೆ.

ಧಾರವಾಡ: ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅವರ ಚೇಂಬರ್‌ನಲ್ಲಿ ವಾಮಾಚಾರ ಮಾಡಿರುವುದಾಗಿ ಹೇಳಲಾಗಿದ್ದು, ಅದಕ್ಕೆ ಸಂಬಂಧಿಸಿದ ಕುರುಹುಗಳು ಪತ್ತೆಯಾಗಿವೆ.

ಪ್ರಾಚೀನ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾಗಿರುವ ಡಾ.ರಮಾ ಗುಂಡೂರಾವ್‌ ಅವರ ಚೇಂಬರ್‌ನಲ್ಲಿ ವಾಮಾಚಾರ ಮಾಡಿದ್ದು ಪತ್ತೆಯಾಗಿದೆ. ರಮಾ ಅವರು ಕೆಲವು ದಿನದ ಹಿಂದೆ ರಜೆಯಲ್ಲಿ ತೆರಳಿದ್ದರು. ಶುಕ್ರವಾರ ಅವರು ಮರಳಿ ಬಂದು ತಮ್ಮ ಕೊಠಡಿಯ ಬಾಗಿಲು ತೆಗೆದಾಗ ವಾಮಾಚಾರ ಮಾಡಿರುವುದು ಬೆಳಕಿಗೆ ಬಂದಿದೆ. ಕೊಠಡಿಯ ಕೀ ಅವರ ಬಳಿಯೇ ಇದ್ದು ಈ ವಸ್ತುಗಳನ್ನು ಕಿಟಕಿಯ ಮೂಲಕ ಒಳಗೆ ಎಸೆಯಲಾಗಿದೆ.

ಅಲ್ಲಿರುವ ಮೇಜಿನ ಮೇಲೆ ಕಪ್ಪು ಬಣ್ಣದ ಮಾಟದ ಗೊಂಬೆ, ಮೂರು ನಿಂಬೆ ಹಣ್ಣು ಎಸೆಯಲಾಗಿದೆ. ಜತೆಗೆ ಅರಿಷಿಣ-ಕುಂಕುಮ ಹಾಕಲಾಗಿದೆ. ಕಿಟಕಿ ಮೂಲಕ ಈ ವಸ್ತುಗಳನ್ನು ಎಸೆಯಲಾಗಿದೆ. ಎರಡು ದಿನಗಳ ಹಿಂದೆ ವಾಮಾಚಾರ ಮಾಡಿರುವ ಅನುಮಾನ ಅಲ್ಲಿರುವ ವಸ್ತುಗಳನ್ನು ನೋಡಿದಾಗ ಬರುತ್ತದೆ.

ಬಾಗಿಲು ತೆರೆಯುತ್ತಿದ್ದಂತೆಯೇ ಒಳಗಡೆ ವಾಮಾಚಾರ ಸಂಬಂಧಿತ ವಸ್ತುಗಳನ್ನು ನೋಡಿದ ಡಾ. ರಮಾ ಅವರು ಬೆಚ್ಚಿ ಬಿದ್ದು ಹೊರಗೋಡಿ ಬಂದಿದ್ದಾರೆ. ಮತ್ತು ಕುಲಪತಿಗಳಿಗೆ ದೂರು ನೀಡಿದ್ದಾರೆ.

ಈ ಘಟನೆಯಲ್ಲಿ ವಿಭಾಗದ ಪ್ರಾಧ್ಯಾಪಕರೊಬ್ಬರ ಮೇಲೆ ಸಂಶಯ ವ್ಯಕ್ತಪಡಿಸಲಾಗುತ್ತಿದೆ. ರಮಾ ಅವರ ಅಳಿಯ ಇದೇ ವಿಭಾಗದಲ್ಲಿ ಉಪನ್ಯಾಸಕರಾಗಿದ್ದಾರೆ. ಈ ಚೇಂಬರನ್ನು ಅವರಿಗೆ ಬಿಟ್ಟುಕೊಡಬೇಕು ಎಂಬ ವಿಚಾರದಲ್ಲಿ ರಮ್ಯಾ ಮತ್ತು ಆ ಉಪನ್ಯಾಸಕರ ನಡುವೆ ಜಗಳ ನಡೆದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT