ಸಿಎಂ ಸಿದ್ದರಾಮಯ್ಯ 
ರಾಜ್ಯ

798 ಕೋಟಿ ರೂ. ಐಜಿಎಸ್‌ಟಿ ಕಡಿತದ ಬಗ್ಗೆ ವಿವರಣೆ ನೀಡಿ: ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ

798 ಕೋಟಿ ರೂ. ಐಜಿಎಸ್‌ಟಿ ಕಡಿತದ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಆಗ್ರಹಿಸಿದ್ದಾರೆ.

ಬೆಂಗಳೂರು: 798 ಕೋಟಿ ರೂ. ಐಜಿಎಸ್‌ಟಿ ಕಡಿತದ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಆಗ್ರಹಿಸಿದ್ದಾರೆ.

ಈ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಶುಕ್ರವಾರ ಪತ್ರ ಬರೆದಿರುವ ಅವರು, ‘ರಾಜ್ಯಕ್ಕೆ ಮುಂಗಡವಾಗಿ ಪಾವತಿಸಿದ್ದ ಐಜಿಎಸ್‌ಟಿಯಲ್ಲಿ ಹಿಂಬಾಕಿ ಇದೆ ಎಂಬ ಕಾರಣ ನೀಡಿ 2022ರ ಡಿಸೆಂಬರ್‌ 26ರಂದು ರೂ.798.03 ಕೋಟಿಯನ್ನು ಮರುಹೊಂದಾಣಿಕೆ ಮಾಡಿಕೊಳ್ಳಲಾಗಿತ್ತು. ಈ ರೀತಿ ರಾಜ್ಯಕ್ಕೆ ಸಂದಾಯವಾಗಬೇಕಾದ ತೆರಿಗೆ ಪಾಲನ್ನು ಬಾಕಿ ಹೆಸರಿನಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದರಿಂದ ರಾಜ್ಯಗಳು ಆರ್ಥಿಕವಾಗಿ ಸಮಸ್ಯೆಗೆ ಸಿಲುಕುತ್ತವೆ ಎಂದು ಹೇಳಿದ್ದಾರೆ.

ರೂ.34,000 ಕೋಟಿಗಳಷ್ಟು ಮೊತ್ತದ ಐಜಿಎಸ್‌ಟಿ ಹಿಂಬಾಕಿ ಇದೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಇಷ್ಟೊಂದು ದೊಡ್ಡ ಮೊತ್ತದ ಹಿಂಬಾಕಿ ಉಳಿಯಲು ಕಾರಣಗಳೇನು? ಈ ರೀತಿ ಬೃಹತ್‌ ಮೊತ್ತದ ಹಿಂಬಾಕಿಯು ರಾಜ್ಯ ಸರ್ಕಾರಗಳ ಹಣಕಾಸು ನಿರ್ವಹಣೆಯ ಮೇಲೆ ಬೀರಬಹುದಾದ ಪರಿಣಾಮಗಳ ಕುರಿತು ಕಳವಳ ಮೂಡಿದೆ ಎಂದು ತಿಳಿಸಿದ್ದಾರೆ.'

ಐಜಿಎಸ್‌ಟಿ ಹಿಂಬಾಕಿಯ ಕುರಿತು ಸ್ಪಷ್ಟವಾಗಿ ಅರ್ಥೈಸಿಕೊಳ್ಳಬೇಕಿದೆ. ಈ ಕಾರಣದಿಂದ ಈಗ ಇರುವ ಒಟ್ಟು ಹಿಂಬಾಕಿ ಮತ್ತು ಅದನ್ನು ರಾಜ್ಯಗಳ ಮಧ್ಯೆ ಹಂಚಿಕೆ ಮಾಡುವಲ್ಲಿ ಅನುಸರಿಸುತ್ತಿರುವ ಸೂತ್ರದ ಕುರಿತು ಪಾರದರ್ಶಕವಾಗಿ ಮಾಹಿತಿ ಹಂಚಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

‘ಹಿಂಬಾಕಿಯನ್ನು ಒಂದೇ ಕಂತಿನಲ್ಲಿ ಕಡಿತ ಮಾಡಿಕೊಳ್ಳುವುದರಿಂದ ಆರ್ಥಿಕ ಸಮಸ್ಯೆಗಳು ಉದ್ಭವವಾಗುತ್ತವೆ. ಆದ್ದರಿಂದ ಹಿಂಬಾಕಿಯನ್ನು ಕಂತುಗಳಲ್ಲಿ ಮರುಭರಿಸಲು ಅವಕಾಶ ಕಲ್ಪಿಸಬೇಕು. ರಾಜ್ಯ ಸರ್ಕಾರಗಳ ಆರ್ಥಿಕ ಸ್ಥಿತಿ ಮೇಲೆ ತಕ್ಷಣ ಪರಿಣಾಮಗಳಾಗದಂತೆ ತಡೆಯಲು ಹಿಂಬಾಕಿಯನ್ನು ಹತ್ತು ಕಂತುಗಳಲ್ಲಿ ಕಡಿತ ಮಾಡುವ ಪದ್ಧತಿ ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ಈ ಸಮಸ್ಯೆಗಳನ್ನು ಪರಿಹರಿಸಲು ಪಾರದರ್ಶಕ ಮತ್ತು ಸಂಘಟಿತ ಪ್ರಯತ್ನ ನಡೆಸುವುದರಿಂದ ಆರ್ಥಿಕ ವ್ಯವಸ್ಥೆಯನ್ನು ಸುರಕ್ಷಿತವಾಗಿಡಬಹುದು ಎಂಬುದು ನಮ್ಮ ನಂಬಿಕೆ. ಈ ವಿಚಾರದಲ್ಲಿ ತಕ್ಷಣ ಮಧ್ಯ ಪ್ರವೇಶ ಮಾಡಬೇಕು’ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT