ಸಂಗ್ರಹ ಚಿತ್ರ 
ರಾಜ್ಯ

ಮತ್ತಷ್ಟು ಗೋಶಾಲೆ ತೆರೆಯಲು ಸರ್ಕಾರ ಸಿದ್ಧ: ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್

ರಾಜ್ಯದಲ್ಲಿ ಮೇವಿನ ಕೊರತೆಯಿಲ್ಲ. ಅಗತ್ಯಬಿದ್ದರೆ ಮತ್ತಷ್ಟು ಗೋಶಾಲೆ ತೆರೆಯಲು ಸರ್ಕಾರ ಸಿದ್ಧವಿದೆ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರು ಶುಕ್ರವಾರ ಹೇಳಿದರು.

ಮೈಸೂರು: ರಾಜ್ಯದಲ್ಲಿ ಮೇವಿನ ಕೊರತೆಯಿಲ್ಲ. ಅಗತ್ಯಬಿದ್ದರೆ ಮತ್ತಷ್ಟು ಗೋಶಾಲೆ ತೆರೆಯಲು ಸರ್ಕಾರ ಸಿದ್ಧವಿದೆ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರು ಶುಕ್ರವಾರ ಹೇಳಿದರು.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಜಾನುವಾರುಗಳ ಸಾಕಾಣೆಗೆ ಪ್ರಸ್ತುತ ಅಸ್ತಿತ್ವದಲ್ಲಿರುವ ಗೋಶಾಲೆಗಳು ಸಾಕಾಗುತ್ತವೆ. ಅದರೆ, ಅಗತ್ಯಬಿದ್ದರೆ ಮತ್ತಷ್ಟು ಗೋಶಾಲೆಗಳ ತೆರೆಯಲು ಸರ್ಕಾರ ಹಿಂಜರಿಯುವುದಿಲ್ಲ ಎಂದು ಹೇಳಿದರು

ರಾಜ್ಯದಲ್ಲಿ ಮುಂದಿನ ನಾಲ್ಕು ತಿಂಗಳಿಗೆ ಸಾಕಾಗುವಷ್ಟು ದಾಸ್ತಾನು ಇರುವುದರಿಂದ ಮೇವಿನ ಕೊರತೆ ಇಲ್ಲ. ನೆರೆ ರಾಜ್ಯಗಳಿಗೆ ಮೇವು ಸಾಗಣೆ ಮಾಡುವುದನ್ನು ಸರ್ಕಾರ ನಿಷೇಧಿಸಿದ್ದು, ನೀರು ಅಥವಾ ನೀರಾವರಿ ಪಂಪ್‌ಸೆಟ್‌ಗಳಿರುವ ರೈತರಿಗೆ ಮೇವು ಬೆಳೆಯಲು ಉತ್ತೇಜನ ನೀಡಲು ಸರ್ಕಾರ ಬೀಜಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಪಶುವೈದ್ಯಕೀಯ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂಧಿಗಳ ಕೊರತೆ ಇದೆ ಎಂದು ಒಪ್ಪಿಕೊಂಡ ಸಚಿವರು, ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಸರ್ಕಾರ ನಿರ್ಧರಿಸಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT