ಸಂಗಣ್ಣ ಕರಡಿ 
ರಾಜ್ಯ

ನಾನೇನೂ ಹರಿಶ್ಚಂದ್ರನಲ್ಲ, ಜಲಜೀವನ್ ಮಿಷನ್ ಯೋಜನೆ ಅಕ್ರಮದಲ್ಲಿ ನಾನೂ ಕೂಡ ಭಾಗಿ: ಸಂಸದ ಸಂಗಣ್ಣ ಕರಡಿ

ಕೇಂದ್ರದ ಮಹತ್ವಕಾಂಕ್ಷಿ  ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಮರ್ಪಕವಾಗಿಲ್ಲ. ರಾಜಕಾರಣಿಗಳೇ ಈ ಯೋಜನೆಯಲ್ಲಿ ಲೂಟಿ ಹೊಡೆದು, ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಸಂಸದ ಕರಡಿ ಸಂಗಣ್ಣ ಆರೋಪಿಸಿದ್ದಾರೆ.

ಕೊಪ್ಪಳ:ಕೇಂದ್ರದ ಮಹತ್ವಕಾಂಕ್ಷಿ  ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಮರ್ಪಕವಾಗಿಲ್ಲ. ರಾಜಕಾರಣಿಗಳೇ ಈ ಯೋಜನೆಯಲ್ಲಿ ಲೂಟಿ ಹೊಡೆದು, ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಸಂಸದ ಕರಡಿ ಸಂಗಣ್ಣ ಆರೋಪಿಸಿದ್ದಾರೆ.

ಕೊಪ್ಪಳದಲ್ಲಿ ಶುಕ್ರವಾರ ಅಂಚೆ ಕಚೇರಿ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದ ಅವರ, ನಮ್ಮಂಥ ರಾಜಕಾರಣಿಗಳು ಇದರಲ್ಲಿ ಶಾಮೀಲಾಗಿ ಈ ಯೋಜನೆಯನ್ನು ಹಾಳು ಮಾಡಿದ್ದಾರೆ. ಜಿಲ್ಲೆಯ ಯೋಜನೆಯಲ್ಲಿ ಪರಿಷ್ಕೃತ ಅಂದಾಜು ನಡೆದು ಹೊಸ ಡಿಪಿಆರ್ ಮಾಡಲಾಗಿದೆ. ಕಾಮಗಾರಿಯಲ್ಲಿ ನಾನೂ ಸೇರಿ ಅನೇಕ ಜನಪ್ರತಿನಿಧಿಗಳು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಸಂಸದ ಸಂಗಣ್ಣ ಕರಡಿ ಅವರು ತಮ್ಮ ಭ್ರಷ್ಟಾಚಾರವನ್ನು ಬಹಿರಂಗವಾಗಿ ಒಪ್ಪಿಕೊಂಡು ಹೇಳಿಕೆ ನೀಡಿದ್ದಾರೆ.

ಜೆಜೆಎಂ ಕಾಮಗಾರಿಯಲ್ಲಿ ಹಣವನ್ನು ಲೂಟಿ ಹೊಡೆಯಲಾಗುತ್ತಿದೆ. ಜೆಜೆಎಂ ಯೋಜನೆಯ ಕಾಮಗಾರಿಯಲ್ಲಿ ರಿವೈಸ್ ಎಸ್ಟಿಮೇಟ್​​​​ನಿಂದ ಹೊಸ ಡಿಪಿಆರ್ ಮಾಡಿಸುವವರೆಗೂ ಹಣ ಲೂಟಿ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 123 ಕೋಟಿ ರೂ. ಯೋಜನೆಗೆ ಮತ್ತೆ 6 ತಿಂಗಳಲ್ಲಿ 123 ಕೋಟಿ ರೂ. ಪುನಃ ಅನುದಾನ ಕೇಳಲಾಗಿದೆ. ಅಕ್ರಮದಲ್ಲಿ ಸಂಸದರಿಂದ ಹಿಡಿದು ಎಲ್ಲರೂ ಹಣ ದೋಚಿದ್ದಾರೆ. ಇದರಲ್ಲಿ ನಾನೂ ಕೂಡ ಭಾಗಿಯಾಗಿದ್ದೇನೆ ಎಂದರು.

ನಾವೇನೂ ಹರಿಶ್ಚಂದ್ರನಲ್ಲ, ನ್ಯಾಯ ಅನ್ಯಾಯ ನೋಡಬೇಕು. ಅನ್ಯಾಯದಿಂದ ಹಣ ಗಳಿಸಿದವರು ನೆಮ್ಮದಿಯಿಂದ ನಿದ್ದೆ ಮಾಡಲ್ಲ. ದುಡಿದು ತಿನ್ನೋರು ನೆಮ್ಮದಿಯಿಂದ ನಿದ್ದೆ ಮಾಡುತ್ತಾರೆ. ನಾನು ಮಾಡಿದ ತಪ್ಪಿನ ಅರಿವು ನನಗಿದೆ ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT