ಲೀಲಾವತಿ ಅವರ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ 
ರಾಜ್ಯ

ಹಾಸಿಗೆ ಹಿಡಿದ ಹಿರಿಯ ನಟಿ ಲೀಲಾವತಿ, ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ: ಸಿಎಂ ಸಿದ್ದರಾಮಯ್ಯ

ಕನ್ನಡದ ಜನಪ್ರಿಯ ಹಿರಿಯ ನಟಿ ಲೀಲಾವತಿ ವಯೋ ಸಹಜ ಕಾಯಿಲೆಗಳಿಂದ ಹಾಸಿಗೆ ಹಿಡಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಸೋಲದೇವನಹಳ್ಳಿಯಲ್ಲಿ ಇರುವ ಹಿರಿಯ ನಟಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು.

ಬೆಂಗಳೂರು: ಕನ್ನಡದ ಜನಪ್ರಿಯ ಹಿರಿಯ ನಟಿ ಲೀಲಾವತಿ ವಯೋ ಸಹಜ ಕಾಯಿಲೆಗಳಿಂದ ಹಾಸಿಗೆ ಹಿಡಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಸೋಲದೇವನಹಳ್ಳಿಯಲ್ಲಿ ಇರುವ ಹಿರಿಯ ನಟಿ  ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಲೀಲಾವತಿ ಅವರ ಚಿಕಿತ್ಸೆಯ ಅಗತ್ಯ ಕಂಡುಬಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದರು. 

ಲೀಲಾವತಿ ಅವರು ಆರೋಗ್ಯವಂತರಾಗಿದ್ದಾಗ ಜಮೀನು ವಿಚಾರವಾಗಿ ಸಮಸ್ಯೆ ಬಗೆಹರಿಸಿಕೊಳ್ಳಲು ಭೇಟಿಯಾಗುತ್ತಿದ್ದರು. ಈಗ ವಯೋಸಹಜವಾಗಿ ಕಾಯಿಲೆಗಳಿಂದ ಹಾಸಿಗೆ ಹಿಡಿದಿದ್ದಾರೆ. ಅವರು ಒಬ್ಬ ನೈಜ ಪ್ರತಿಭೆಯ ಕಲಾವಿದೆ. ಅವರ ಮಗ ವಿನೋದ್ ರಾಜ್ ಕೂಡ ತಾಯಿಯನ್ನು ಕಾಳಜಿಯಿಂದ ಆರೈಕೆ ಮಾಡುತ್ತಿದ್ದಾರೆ. ಸರ್ಕಾರದಿಂದ ಏನೇ ಸಹಾಯದ ಅಗತ್ಯವಿದ್ದರು ಅದನ್ನು ಒದಗಿಸಲಾಗುವುದು ಎಂದು ಹೇಳಿದರು. 

ಇದೇ ವೇಳೆ ಪ್ರತಿಕ್ರಿಯಿಸಿದ ವಿನೋದ್ ರಾಜ್, ಸಿದ್ದರಾಮಯ್ಯ ಅವರ ತಾಯಿ ಆರೋಗ್ಯದ ಬಗ್ಗೆ ಪ್ರೀತಿಯಿಂದ ವಿಚಾರಿಸಿದ್ದಾರೆ ಎಂದು ತಿಳಿಸಿದರು. ಅಲ್ಲದೇ, ಅರಣ್ಯಾಧಿಕಾರಿಯಿಂದ ತೊಂದರೆ ವಿಚಾರವನ್ನು ಸಿಎಂ ಗಮನಕ್ಕೆ ತಂದಿದ್ದೇನೆ. ನಮ್ಮದು ಕಂದಾಯ ಭೂಮಿ ಎಂದು ಸೆಟಲ್ಮೆಂಟ್ ಆಗಿತ್ತು. ರೈತರನ್ನು ಅಲೆದಾಡಿಸೋದು ಆಗಬಾರದು. ಕೆಲವರು ರೈತರ ಜಾಗ ಭೂಕಬಳಿಕೆ ಮಾಡ್ತಿದ್ದಾರೆ. ಬಡವರನ್ನ ಕಣ್ಣೀರು ಹಾಕಿಸಬೇಡಿ ಎಂದುಕಣ್ಣೀರಿಟ್ಟರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಪುಣೆಯಲ್ಲಿ ಘೋರ ಕೃತ್ಯ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಯುವಕನ ಬಂಧನ!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!