ವಂದೇ ಭಾರತ್ ಎಕ್ಸ್‌ಪ್ರೆಸ್ 
ರಾಜ್ಯ

ವಂದೇ ಭಾರತ್ ರೈಲುನ್ನು ಕಲಬುರಗಿಗೆ ವಿಸ್ತರಿಸಿ: ಬಿಜೆಪಿ ಸಂಸದ ಉಮೇಶ ಜಾಧವ್

ಮುಂಬೈ-ಸೊಲ್ಲಾಪುರ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಕಲಬುರಗಿವರೆಗೆ ವಿಸ್ತರಿಸಬೇಕು ಎಂದು ಕಲಬುರಗಿ ಸಂಸದ ಡಾ.ಉಮೇಶ ಜಾಧವ್ ಅವರು ಸೋಮವಾರ ಒತ್ತಾಯಿಸಿದ್ದಾರೆ.

ಕಲಬುರಗಿ: ಮುಂಬೈ-ಸೊಲ್ಲಾಪುರ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಕಲಬುರಗಿವರೆಗೆ ವಿಸ್ತರಿಸಬೇಕು ಎಂದು ಕಲಬುರಗಿ ಸಂಸದ ಡಾ.ಉಮೇಶ ಜಾಧವ್ ಅವರು ಸೋಮವಾರ ಒತ್ತಾಯಿಸಿದ್ದಾರೆ.

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಲೋಕಸಭೆಯಲ್ಲಿ ಮೊದಲ ದಿನವೇ ವಿಷಯ ಪ್ರಸ್ತಾಪಿಸಿದ ಡಾ.ಜಾಧವ್ ಅವರು, ಮುಂಬೈ-ಸೊಲ್ಲಾಪುರ ನಡುವಿನ ಒಂದೇ ಭಾರತ ರೈಲನ್ನು ಕಲಬುರಗಿಗೆ ವಿಸ್ತರಿಸಬೇಕು. ಅದನ್ನು ಮುಂಬೈ-ಸೋಲಾಪುರ-ಕಲಬುರಗಿ ನಡುವೆ ಓಡಿಸಬೇಕು ಎಂದರು,

ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶದ 6 ಜಿಲ್ಲೆಗಳ ವಲಯ ಕೇಂದ್ರವಾಗಿದೆ ಎಂದು ಸ್ಪೀಕರ್ ಗಮನಕ್ಕೆ ತಂದರು. ಮುಂಬೈಗೆ ಪ್ರತಿದಿನ 10,000 ಕ್ಕೂ ಹೆಚ್ಚು ಜನರು ಪ್ರಯಾಣಿಸುವುದರಿಂದ ವಂದೇ ಭಾರತ್ ರೈಲನ್ನು ಕಲಬುರಗಿಯವರೆಗೆ ವಿಸ್ತರಿಸಿದರೆ ಈ ಪ್ರದೇಶದ ಆರ್ಥಿಕತೆಗೆ ಉತ್ತೇಜನ ದೊರೆಯಲಿದೆ ಎಂದು ಡಾ ಜಾಧವ್ ಒತ್ತಾಯಿಸಿದರು.

ಕಲಬುರಗಿ ಕರ್ನಾಟಕದ 4ನೇ ದೊಡ್ಡ ನಗರವಾಗಿದ್ದರೂ ಕಲಬುರಗಿಯಿಂದ ಬೆಂಗಳೂರಿಗೆ ಮೀಸಲಾದ ಯಾವುದೇ ರೈಲು ಇಲ್ಲ ಎಂದು ಸದನಕ್ಕೆ ತಿಳಿಸಿದರು. ಕಲಬುರಗಿಯಿಂದ ಬೆಂಗಳೂರಿಗೆ ಅತಿ ಹೆಚಿನ ಸಂಖ್ಯೆಯಲ್ಲಿ ಜನ ಪ್ರಯಾಣಿಸುತ್ತಾರೆ. ಅಸ್ತಿತ್ವದಲ್ಲಿರುವ ಎಲ್ಲಾ ರೈಲುಗಳು ಯಾವಾಗಲೂ ತುಂಬಿರುತ್ತವೆ ಮತ್ತು ಸಾಮಾನ್ಯ ಜನರಿಗೆ ದೃಢೀಕೃತ ಬರ್ತ್‌ಗಳನ್ನು ಪಡೆಯಲು ಕಷ್ಟವಾಗುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT