ಸಿಎಂ ಸಿದ್ದರಾಮಯ್ಯ 
ರಾಜ್ಯ

ನೆಲಮಂಗಲದವರೆಗೆ ಮೆಟ್ರೋ ಸಂರ್ಪಕ ವಿಸ್ತರಿಸುವ ಪ್ರಸ್ತಾವನೆಯನ್ನು ಪರಿಶೀಲಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ನೆಲಮಂಗಲದವರೆಗೆ ಮೆಟ್ರೋ ಸಂರ್ಪಕ ವಿಸ್ತರಿಸುವ ಕುರಿತ ಪ್ರಸ್ತಾವನೆಯನ್ನು ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

ಬೆಂಗಳೂರು: ನೆಲಮಂಗಲದವರೆಗೆ ಮೆಟ್ರೋ ಸಂರ್ಪಕ ವಿಸ್ತರಿಸುವ ಕುರಿತ ಪ್ರಸ್ತಾವನೆಯನ್ನು ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

ಬೀರೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ವತಿಯಿಂದ ಶ್ರೀ ಬೀರೇಶ್ವರ ಸಮುದಾಯ ಭವನ ಮತ್ತು ಪ್ರಾರ್ಥನಾ ಮಂದಿರ ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ನೆಲಮಂಗಲ ಪಟ್ಟಣಕ್ಕೆ ಕುಡಿಯುವ ನೀರಿನ ಬೇಡಿಕೆ ಇದೆ. ನೆಲಮಂಗಲ ಸುತ್ತಮುತ್ತಲ ಪ್ರದೇಶಗಳ ಕೆರೆಗಳನ್ನು ತುಂಬುವ ವೃಷಭಾವತಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. ಈ ಯೋಜನೆಯಿಂದ ನೀರಿನ ಅಂತರ್ಜಲ ಮಟ್ಟ ಹೆಚ್ಚಲಿದೆ. ಮೆಟ್ರೋ ಸಂಪರ್ಕವನ್ನು ನೆಲಮಂಗಲದವರೆಗೂ ವಿಸ್ತರಿಸುವ ಯೋಜನೆ ಸರ್ಕಾರ ಪರಿಶೀಲಿಸಲಿದೆ. ನೆಲಮಂಗಲದ ಒಳಚರಂಡಿ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಹೇಳಿದರು.

ಇದೇ ವೇಳೆ ಬೆಂಗಳೂರು ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸಲು ಮುಂದಿನ ವರ್ಷಗಳಲ್ಲಿ  ಎತ್ತಿನಹೊಳೆ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿಯಾಗಿ ಎಲ್ಲ ಧರ್ಮದ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ತುಂಬುವುದು ನಮ್ಮ ಗುರಿಯಾಗಿದೆ.  ಬಡವರಿಗೆ ಅಕ್ಕಿ, ಉಚಿತ ವಿದ್ಯುತ್, ಶಕ್ತಿ ಯೋಜನೆ,ಗೃಹಲಕ್ಷ್ಮಿ ಯೋಜನೆಗಳು ಯಾವುದೇ ಜಾತಿಧರ್ಮಕ್ಕೆ ಸೀಮಿತವಾಗಿಲ್ಲ. 1.14 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಜನರ ಕೈಗೆ ಬರುವ ದುಡ್ಡು, ಅವರ ಇತರೆ ಅವಶ್ಯಕತೆಗಳನ್ನು ಪೂರೈಸಿ, ಆರ್ಥಿಕತೆ ಹೆಚ್ಚುತ್ತದೆ. ಕೇವಲ ಶ್ರೀಮಂತರಲ್ಲದೇ, ಬಡವರು ಊಟಮಾಡುವಂತಾಗಬೇಕು, ಕರ್ನಾಟಕ ಹಸಿವುಮುಕ್ತ ರಾಜ್ಯವಾಗಬೇಕು. 1.30 ಕೋಟಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆಗಳಿಂದ ಲಾಭವಾಗಿದೆ. ಸಮಾಜ ನಿಂತ ನೀರಾಗದೆ ಬದಲಾವಣೆಯಾಗಬೇಕು. ಸಮಾಜಕ್ಕೆ ಚಲನೆ ದೊರೆತಾಗ ಆರ್ಥಿಕತೆ ಚುರುಕಾಗುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT