ಯುಟಿ ಖಾದರ್ 
ರಾಜ್ಯ

ಸದನಕ್ಕೆ ಬೇಗ ಬರುವ ಶಾಸಕರಿಗೆ ವಿಶೇಷ ಟೀ ಕಪ್ ಉಡುಗೊರೆ, ತಡವಾಗಿ ಬಂದವರಿಗೂ ಪ್ರಶಸ್ತಿ: ಯುಟಿ ಖಾದರ್

ವಿಧಾನಸಭಾ ಕಲಾಪದಲ್ಲಿ ಭಾಗವಹಿಸಲು ಶಾಸಕರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಪೀಕರ್ ಯುಟಿ ಖಾದರ್ ಅವರು ಹೊಸ ಕ್ರಮವೊಂದನ್ನು ಘೋಷಿಸಿದ್ದಾರೆ. ಈ ಮೂಲಕ ಸದನಕ್ಕೆ ಬೇಗ ಬರುವ ಶಾಸಕರಿಗೆ ಇನ್ಮುಂದೆ ವಿಶೇಷ ಉಡುಗೊರೆ ಸಿಗಲಿದೆ.

ಬೆಳಗಾವಿ: ವಿಧಾನಸಭಾ ಕಲಾಪದಲ್ಲಿ ಭಾಗವಹಿಸಲು ಶಾಸಕರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಪೀಕರ್ ಯುಟಿ ಖಾದರ್ ಅವರು ಹೊಸ ಕ್ರಮವೊಂದನ್ನು ಘೋಷಿಸಿದ್ದಾರೆ. ಈ ಮೂಲಕ ಸದನಕ್ಕೆ ಬೇಗ ಬರುವ ಶಾಸಕರಿಗೆ ಇನ್ಮುಂದೆ ವಿಶೇಷ ಉಡುಗೊರೆ ಸಿಗಲಿದೆ. ಅಲ್ಲದೆ, ತಡವಾಗಿ ಅಥವಾ ಗೈರಾದ ಸದಸ್ಯರಿಗೆ ಕೂಡ ಪ್ರಶಸ್ತಿ ನೀಡಲಾಗುತ್ತದೆ ಎಂದರು.

ನಾಳೆಯಿಂದ ಅಧಿವೇಶನ ಆರಂಭಗೊಳ್ಳಲಿರುವ ಹಿನ್ನೆಲೆ ಸುವರ್ಣ ವಿಧಾನಸೌಧದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್ ಹಾಗೂ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಜಂಟಿ ಸುದ್ದಿಗೋಷ್ಠಿ ನಡೆಸಿದರು.

ಈ ಕುರಿತು ಭಾನುವಾರ ಮಾತನಾಡಿದ ಖಾದರ್, ಕೋರಂ ಬೆಲ್ ಒತ್ತುವ ಮೊದಲು ವಿಧಾನಸಭೆ ಸಭಾಂಗಣಕ್ಕೆ ಪ್ರವೇಶಿಸುವ ಶಾಸಕರಿಗೆ ರಾಜ್ಯ ಮತ್ತು ರಾಷ್ಟ್ರದ ಲಾಂಛನಗಳೊಂದಿಗೆ ವಿನ್ಯಾಸಗೊಳಿಸಲಾದ ಟೀ ಕಪ್ ಮತ್ತು ಸಾಸರ್‌ಗಳನ್ನು ನೀಡಲಾಗುತ್ತದೆ. ಅತಿ ಹೆಚ್ಚು ಗೈರು ಆದವರಿಗೆ ಬೇಗ ಬರುವಂತೆ ಪ್ರಶಸ್ತಿ ನೀಡುತ್ತೇವೆ ಎಂದು ಹೇಳಿದರು.

ವಿಧಾನಸಭೆಯ ಹಾಜರಾತಿಯನ್ನು ಚುರುಕುಗೊಳಿಸಲು ನಾವು ಪ್ರಯತ್ನಿಸಬೇಕು. ಈ ಬಾರಿ ಅಧಿವೇಶನಕ್ಕೆ ಶಿಸ್ತುಬದ್ಧವಾಗಿ ಹಾಜರಾಗುವವರಿಗೆ ಪ್ರತಿನಿತ್ಯ ಟೀ ಕಪ್ ಮತ್ತು ಸಾಸರ್ ನೀಡಲಾಗುವುದು ಎಂದು ಖಾದರ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT