ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಪ್ರತ್ಯೇಕ ಅಪಘಾತದಲ್ಲಿ ಮೂವರ ದುರ್ಮರಣ

ನಗರದಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.

ಬೆಂಗಳೂರು: ನಗರದಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.

ಅತಿ ವೇಗದ ಚಾಲನೆಯಿಂದ 29 ವರ್ಷದ ಯುವಕನೋರ್ವ ಎಲೆಕ್ಟ್ರಾನಿಕ್ ಸಿಟಿ 1 ನೇ ಹಂತದ ಬಳಿ ಸಾವನ್ನಪ್ಪಿದ್ದಾನೆ.

ಮೃತ ಯುವಕನನ್ನು ವೆಂಕಟೇಶ್ ಎಂದು ಗುರ್ತಿಸಲಾಗಿದೆ. ಮೃತ ವೆಂಕಟೇಶ್ ತನ್ನ ಸ್ನೇಹಿತರನ್ನು ಭೇಟಿ ಮಾಡಿ ಲಗ್ಗೆರೆಯಲ್ಲಿರುವ ತನ್ನ ನಿವಾಸಕ್ಕೆ ಹಿಂದಿರುಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ಅಜಾಗರೂಕತೆಯಿಂದ ವಾಹನ ಚಲಾಯಿಸುತ್ತಿದ್ದ ವೆಂಕಟೇಶ್ ವೇಗವನ್ನು ನಿಯಂತ್ರಿಸಲು ಸಾಧ್ಯವಾಗದೆ ಎಲೆಕ್ಟ್ರಾನಿಕ್ ಸಿಟಿ 1 ನೇ ಹಂತದ ಬಳಿ ಡಿವೈಡರ್'ಗೆ ರಭಸದಿಂದ ಡಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ.

ಮತ್ತೊಂದು ಘಟನೆ ತಲಘಟ್ಟಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಖಾಸಗಿ ಶಾಲಾ ಬಸ್ ಚಾಲಕ ಮೃತಪಟ್ಟಿದ್ದಾನೆ.

ಮೃತ ವ್ಯಕ್ತಿಯನ್ನು ಬಸವರಾಜ್ ಎಂದು ಗುರ್ತಿಸಲಾಗಿದೆ. ಶನಿವಾರ ರಾತ್ರಿ 7.30ಕ್ಕೆ ಅಂಜನಾಪುರ ರಸ್ತೆಯ ಬಳಿ ಘಟನೆ ಸಂಭವಿಸಿದೆ.

ಮೃತ ಬಸವರಾಜ್ ಅವರು ವಾಹನದ ಮೇಲಿನ ಸಮತೋಲನ ಕಳೆದುಕೊಂಡು ರಸ್ತೆಗೆ ಬಿದ್ದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ರಾಜರಾಜೇಶ್ವರಿ ನಗರದ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಹೆಚ್ಚಿನ ಚಿಕಿತ್ಸೆಗಾಗಿ ನಂತರ ನಿಮ್ಹಾನ್ಸ್ ಗೆ ಸ್ಥಳಾಂತರಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಉತ್ತರ ವಿಭಾಗದಲ್ಲಿ ವರದಿಯಾದ ಮತ್ತೊಂದು ಅಪಘಾತದಲ್ಲಿ, 24 ವರ್ಷದ ಯುವಕ ಮೃತಪಟ್ಟಿದ್ದಾನೆ. ತನ್ನ ದ್ವಿಚಕ್ರ ವಾಹನದ ಹಿಂಭಾಗಕ್ಕೆ ಲಾರಿ ಡಿಕ್ಕಿ ಹೊಡೆದ ಹೊಡೆದ ಪರಿಣಾಮ ಯುವಕ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ.

ಮೃತ ಯುವಕನನ್ನು ಅಭಿಷೇಕ್ ಎಂದು ಗುರ್ತಿಸಲಾಗಿದೆ. ಈತ ತನ್ನ ಸ್ನೇಹಿತನೊಂದಿಗೆ ಓಲಾ ಕ್ಯಾಬ್‌ನಲ್ಲಿ ಕೆಲಸ ಮಾಡುತ್ತಿದ್ದ. ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದಾಗ ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಳ್ಳಾರಿ ರಸ್ತೆಯಲ್ಲಿ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಸಂಬಂಧ ದೇವನಹಳ್ಳಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT