ಸಂಗ್ರಹ ಚಿತ್ರ 
ರಾಜ್ಯ

ಮಿಚಾಂಗ್ ಚಂಡಮಾರುತ ಎಫೆಕ್ಟ್: ನಗರದಲ್ಲಿ ಇನ್ನೆರಡು ದಿನ ಚಳಿ ವಾತಾವರಣ

ತಮಿಳುನಾಡು ಮತ್ತು ಆಂಧ್ರಪ್ರದೇಶದ ಮೇಲೆ ಮಿಚಾಂಗ್ ಚಂಡಮಾರುತ ಪರಿಣಾಮ ಬೀರಿದ್ದು, ಇದರ ಎಫೆಕ್ಟ್ ರಾಜ್ಯ ರಾಜಧಾನಿ ಬೆಂಗಳೂರಿನ ಮೇಲೂ ಪರಿಣಾಮ ಬೀರಿದೆ. ಹೀಗಾಗಿಯೇ ಮಳೆಯ ಕೊರತೆ ಕಂಡಿದ್ದ ನಗರದಲ್ಲಿ ಮಳೆ ಜೊತೆಗೆ ತಂಪಿನ ವಾತಾವರಣ ಕಂಡು ಬಂದಿದೆ. 

ಬೆಂಗಳೂರು: ತಮಿಳುನಾಡು ಮತ್ತು ಆಂಧ್ರಪ್ರದೇಶದ ಮೇಲೆ ಮಿಚಾಂಗ್ ಚಂಡಮಾರುತ ಪರಿಣಾಮ ಬೀರಿದ್ದು, ಇದರ ಎಫೆಕ್ಟ್ ರಾಜ್ಯ ರಾಜಧಾನಿ ಬೆಂಗಳೂರಿನ ಮೇಲೂ ಪರಿಣಾಮ ಬೀರಿದೆ. ಹೀಗಾಗಿಯೇ ಮಳೆಯ ಕೊರತೆ ಕಂಡಿದ್ದ ನಗರದಲ್ಲಿ ಮಳೆ ಜೊತೆಗೆ ತಂಪಿನ ವಾತಾವರಣ ಕಂಡು ಬಂದಿದೆ.

ನಿತ್ಯ ಬೆಳಗ್ಗೆ ಮತ್ತು ಸಂಜೆ ನಂತರ ತೀವ್ರ ಚಳಿ ಬೀಸುತ್ತಿದೆ. ಕೆಲವೆಡೆ ಸೋನೆ ಮಳೆ ಬರುವ ಲಕ್ಷಣಗಳು ಕಂಡು ಬರುತ್ತಿವೆ. ಈ ವಾತಾವರಣ ಮಂಗಳವಾರದವರೆಗೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಹೇಳಿದ್ದಾರೆ.

ಬಂಗಾಳಕೊಲ್ಲಿ-ಅಂಡಮಾನ್ ಸಮುದ್ರ ಭಾಗದಲ್ಲಿ ಉಂಟಾಗಿರುವ ಮಿಚಾಂಗ್ ಚಂಡಮಾರುತ ಪ್ರಭಾವದಿಂದಾಗಿ ಬೆಂಗಳೂರಿನಲ್ಲಿ ವಾತಾವರಣ ಬದಲಾಗಿದೆ, ಡಿಸೆಂಬರ್ 6 ರವರೆಗೆ ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ.ಎಂದು ತಿಳಿಸಿದ್ದಾರೆ.

ಮೋಡ ಕವಿದ ವಾತಾವರಣದ ಜೊತೆಗೆ ಮುಂದಿನ 48 ಗಂಟೆಗಳ ಕಾಲ ನಗರದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಮುಂಜಾನೆಯ ಸಮಯದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 24 ಮತ್ತು 19 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತೀಯ ನೌಕಾಪಡೆ ಅತಿಥಿ 'ಐರಿಸ್ ದೇನಾ' ಯುದ್ಧನೌಕೆಯನ್ನು ಅಮೆರಿಕ ಹೊಡೆದುರುಳಿಸಿದೆ: ಇರಾನ್

ಇರಾನ್‌ನೊಂದಿಗಿನ ಯುದ್ಧ: ಇಸ್ರೇಲ್‌ಗೆ ಭಾರಿ ಆರ್ಥಿಕ ನಷ್ಟ, ವಾರಕ್ಕೆ $ 3 ಬಿಲಿಯನ್ ವೆಚ್ಚ!

T20 ವಿಶ್ವಕಪ್ 2026: 'ಇದೊಂದು ನಮ್ಮ ನಿಯಂತ್ರಣದಲ್ಲಿಲ್ಲ..!': ಭಾರತ ಬೌಲಿಂಗ್ ಕೋಚ್ Morne Morkel ಆತಂಕ!

T20 ವಿಶ್ವಕಪ್ 2026, 2ನೇ ಸೆಮಿಫೈನಲ್: ಪಿಚ್ ನೋಡಿ ಖುಷಿ ಪಟ್ಟ ಇಂಗ್ಲೆಂಡ್, ಭಾರತಕ್ಕೆ ಆತಂಕ! ಟಾಸ್ ಗೆದ್ದೋನೆ ಬಾಸ್

'ಇದು ನನ್ನ ಮನದ ಆಸೆ': ಸಿಎಂ ಹುದ್ದೆ ತೊರೆದು ರಾಜ್ಯಸಭೆ ಪ್ರವೇಶ ಖಚಿತಪಡಿಸಿದ Nitish Kumar

SCROLL FOR NEXT