ಸಂಗ್ರಹ ಚಿತ್ರ 
ರಾಜ್ಯ

ಮಿಚಾಂಗ್ ಚಂಡಮಾರುತ ಎಫೆಕ್ಟ್: ನಗರದಲ್ಲಿ ಇನ್ನೆರಡು ದಿನ ಚಳಿ ವಾತಾವರಣ

ತಮಿಳುನಾಡು ಮತ್ತು ಆಂಧ್ರಪ್ರದೇಶದ ಮೇಲೆ ಮಿಚಾಂಗ್ ಚಂಡಮಾರುತ ಪರಿಣಾಮ ಬೀರಿದ್ದು, ಇದರ ಎಫೆಕ್ಟ್ ರಾಜ್ಯ ರಾಜಧಾನಿ ಬೆಂಗಳೂರಿನ ಮೇಲೂ ಪರಿಣಾಮ ಬೀರಿದೆ. ಹೀಗಾಗಿಯೇ ಮಳೆಯ ಕೊರತೆ ಕಂಡಿದ್ದ ನಗರದಲ್ಲಿ ಮಳೆ ಜೊತೆಗೆ ತಂಪಿನ ವಾತಾವರಣ ಕಂಡು ಬಂದಿದೆ. 

ಬೆಂಗಳೂರು: ತಮಿಳುನಾಡು ಮತ್ತು ಆಂಧ್ರಪ್ರದೇಶದ ಮೇಲೆ ಮಿಚಾಂಗ್ ಚಂಡಮಾರುತ ಪರಿಣಾಮ ಬೀರಿದ್ದು, ಇದರ ಎಫೆಕ್ಟ್ ರಾಜ್ಯ ರಾಜಧಾನಿ ಬೆಂಗಳೂರಿನ ಮೇಲೂ ಪರಿಣಾಮ ಬೀರಿದೆ. ಹೀಗಾಗಿಯೇ ಮಳೆಯ ಕೊರತೆ ಕಂಡಿದ್ದ ನಗರದಲ್ಲಿ ಮಳೆ ಜೊತೆಗೆ ತಂಪಿನ ವಾತಾವರಣ ಕಂಡು ಬಂದಿದೆ.

ನಿತ್ಯ ಬೆಳಗ್ಗೆ ಮತ್ತು ಸಂಜೆ ನಂತರ ತೀವ್ರ ಚಳಿ ಬೀಸುತ್ತಿದೆ. ಕೆಲವೆಡೆ ಸೋನೆ ಮಳೆ ಬರುವ ಲಕ್ಷಣಗಳು ಕಂಡು ಬರುತ್ತಿವೆ. ಈ ವಾತಾವರಣ ಮಂಗಳವಾರದವರೆಗೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಹೇಳಿದ್ದಾರೆ.

ಬಂಗಾಳಕೊಲ್ಲಿ-ಅಂಡಮಾನ್ ಸಮುದ್ರ ಭಾಗದಲ್ಲಿ ಉಂಟಾಗಿರುವ ಮಿಚಾಂಗ್ ಚಂಡಮಾರುತ ಪ್ರಭಾವದಿಂದಾಗಿ ಬೆಂಗಳೂರಿನಲ್ಲಿ ವಾತಾವರಣ ಬದಲಾಗಿದೆ, ಡಿಸೆಂಬರ್ 6 ರವರೆಗೆ ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ.ಎಂದು ತಿಳಿಸಿದ್ದಾರೆ.

ಮೋಡ ಕವಿದ ವಾತಾವರಣದ ಜೊತೆಗೆ ಮುಂದಿನ 48 ಗಂಟೆಗಳ ಕಾಲ ನಗರದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಮುಂಜಾನೆಯ ಸಮಯದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 24 ಮತ್ತು 19 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್