ಸಿಎಂ ಸಿದ್ದರಾಮಯ್ಯ 
ರಾಜ್ಯ

ಹುಬ್ಬಳ್ಳಿ: ಹಜರತ್ ಬಾದ್ ಶಾ ಪೀರಾನ್ ದರ್ಗಾ ಅಭಿವೃದ್ಧಿಗೆ ಅಗತ್ಯ ಅನುದಾನ- ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿಯ ಹಜರತ್ ಬಾದಶಾ ಪೀರ್ ದರ್ಗಾ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಭರವಸೆ ನೀಡಿದರು.

ಹುಬ್ಬಳ್ಳಿ: ಹುಬ್ಬಳ್ಳಿಯ ಹಜರತ್ ಬಾದಶಾ ಪೀರ್ ದರ್ಗಾ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಭರವಸೆ ನೀಡಿದರು.

ಹುಬ್ಬಳ್ಳಿಯ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಆವರಣದಲ್ಲಿ ನಡೆದ ಬೃಹತ್ ಔಲಾದೇ ಗೌಸೆ ಅಜಮ್ (ಮೆಹಬೂಬೇ ಸುಭಾನೇ ಮಕ್ಕಳ ಸಮಾವೇಷ) ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ''ಸಮಾಜದಲ್ಲಿ ವೈವಿದ್ಯತೆ ಇದೆ. ಸಹಿಷ್ಣುತೆ ಮತ್ತು ಸಹಬಾಳ್ವೆಯ ಸಂಸ್ಕಾರವನ್ನು ಪಾಲಿಸಿದರೆ, ಸಮಾಜದಲ್ಲಿ ಅಶಾಂತಿ ಮತ್ತು ಅಪನಂಬಿಕೆಯ ವಾತಾವರಣ ಇಲ್ಲವಾಗುತ್ತದೆ'' ಎಂದು ಹೇಳಿದರು.

ಹುಟ್ಟುವಾಗ ವಿಶ್ವ ಮಾನವರಾಗಿರುವ ಎಲ್ಲರೂ ಕೊನೆಯವರೆಗೂ ವಿಶ್ವ ಮಾನವರಾಗಿಯೇ ಉಳಿಯಬೇಕು. ಸಯ್ಯದ್ ತಾಜುದ್ದೀನ್ ಖಾದ್ರಿ ಅವರು ತಮ್ಮ ತಂದೆಯಂತೆಯೇ, ಸೂಫಿ ಧರ್ಮದ ಆಶಯದಂತೆ ವಿಶ್ವ ಮಾನವರನ್ನು ಸೃಷ್ಟಿಸುವ ಮಹೋನ್ನತ ಕಾರ್ಯವನ್ನು ನಡೆಸುತ್ತಿದ್ದಾರೆ. ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಬಾಂಧವ್ಯದ ವಾತಾವರಣ ಸೃಷ್ಟಿಸುತ್ತಿರುವ ಖಾದ್ರಿ ಮತ್ತು ಇಂತಹ ಸೂಫಿ ಸಂತರಿಗೆ ಕೋಟಿ, ಕೋಟಿ ನಮನ'' ಎಂದು ತಿಳಿಸಿದರು.

ವೈಚಾರಿಕತೆ ಮತ್ತು ಪ್ರತಿಯೊಬ್ಬರನ್ನೂ ಮಾನವೀಯಗೊಳಿಸುವ ಶಿಕ್ಷಣ ಇಂದಿನ ಅಗತ್ಯ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು, ಇವ ನಮ್ಮವ ಇವ ನಮ್ಮವ ಎನ್ನುವ ಅತ್ಯುನ್ನತ ಮಾನವೀಯ ಮೌಲ್ಯವನ್ನು ಸಾರುತ್ತಾ, ಸರ್ವ ಜಾತಿ ಜನಾಂಗದವರು ಸಮನಾಗಿ ಅಕ್ಕ ಪಕ್ಕ ಕೂರುವ ಅನುಭವ ಮಂಟಪವನ್ನು ನಿರ್ಮಿಸಿದರು. ಈ ಎರಡು ದಿನಗಳ ಸಮಾವೇಶದಲ್ಲಿ ಸೂಫಿಗಳ ಆಶಯವನ್ನು ಇನ್ನಷ್ಟು ಹೆಚ್ಚು ಪ್ರಚಾರ ಮಾಡುವಂತಾಗಲಿ ಎಂದು ಆಶಿಸಿದರು.

ಅತ್ಯುನ್ನತ ಮಾನವೀಯ ಮೌಲ್ಯ ಸಾರಿದ ಸೂಫಿ ಸಂತ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಲಾಗುವುದು'' ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT