ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜ್ಯ

ಪೊಲೀಸ್-ವಕೀಲರ ಸಂಘರ್ಷ: ಮಧ್ಯಸ್ಥಿಕೆ ವಹಿಸುವಂತೆ ಸಿಎಂಗೆ ಬೊಮ್ಮಾಯಿ ಆಗ್ರಹ

ಚಿಕ್ಕಮಗಳೂರು ಜಿಲ್ಲೆಯಲ್ಲಿ ವಕೀಲರೊಬ್ಬರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರು ಮತ್ತು ಪೊಲೀಸ್ ಸಿಬ್ಬಂದಿ ನಿರಂತರ ಧರಣಿ ನಡೆಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರಕರಣ ಸಂಬಂಧ ಮಧ್ಯಸ್ಥಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ.

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ವಕೀಲರೊಬ್ಬರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರು ಮತ್ತು ಪೊಲೀಸ್ ಸಿಬ್ಬಂದಿ ನಿರಂತರ ಧರಣಿ ನಡೆಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರಕರಣ ಸಂಬಂಧ ಮಧ್ಯಸ್ಥಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಟ್ವೀಟ್ ಮಾಡಿರುವ ಅವರು, ಚಿಕ್ಕಮಗಳೂರಿನಲ್ಲಿ ಪೋಲಿಸರೇ ಪ್ರತಿಭಟನೆ ಮಾಡುತ್ತಿದ್ದು, ವಕೀಲರೂ ಪೊಲೀಸರ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ವಕೀಲರು ಮತ್ತು ಪೊಲೀಸರ ನಡುವೆ ಸಂಘರ್ಷ ಆಗುತ್ತಿರುವುದು ಒಂದು ಆತಂಕಕಾರಿ ಬೆಳವಣಿಗೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಗೃಹ ಇಲಾಖೆಯ ಮೇಲೆ ಸರ್ಕಾರದ ಮತ್ತು ಅಧಿಕಾರಿಗಳ ನಿಯಂತ್ರಣ ತಪ್ಪಿದೆ‌ ಎಂದು ಹೇಳಿದ್ದಾರೆ.

ಗೃಹ ಇಲಾಖೆಯು ಈ ರೀತಿ ಅಶಿಸ್ತು ತೋರುತ್ತಿರುವುದು ಒಂದು ಗಂಭೀರವಾದ ವಿಚಾರ, ಸರ್ಕಾರ ಈ ಕೂಡಲೇ ಇದನ್ನು ಸರಿಪಡಿಸದಿದ್ದರೆ ರಾಜ್ಯದಲ್ಲಿ  ಉಂಟಾಗುವ ಅರಾಜಕತೆಗೆ ಕಾರಣವಾಗುತ್ತೆ‌. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೂಡಲೇ ಮಧ್ಯ ಪ್ರವೇಶಿಸಿ ಕಾನೂನು ಎಲ್ಲರೂ ಪಾಲಿಸಬೇಕು ಅನ್ನುವ ವಾತಾವರಣ ಮೂಡಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸುತ್ತೇನೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT