ದಸರಾ ಆನೆ ಅರ್ಜುನ 
ರಾಜ್ಯ

ನನ್ನ ಆನೆಯನ್ನ ಬದುಕಿಸಿಕೊಡಿ, ಇಲ್ಲವೇ ಅರ್ಜುನನ ಜೊತೆ ನಮ್ಮನ್ನೂ ಮಣ್ಣು ಮಾಡಿ: ಮಾವುತನ ಗೋಳಾಟ

ಅರ್ಜುನನ ಸೊಂಡಿಲನ್ನು ತಬ್ಬಿಕೊಂಡು ನನ್ನ ಆನೆಯನ್ನು ಬದುಕಿಸಿಕೊಡಿ. ನನ್ನ ಆನೆಯನ್ನು ಮೈಸೂರಿಗೆ ಕಳುಹಿಸಿಕೊಡಿ. ಇಲ್ಲವೇ ನನ್ನನ್ನು ಹಾಗೂ ನನ್ನ ಕುಟುಂಬವನ್ನು ಅರ್ಜುನನ ಜೊತೆ ಮಣ್ಣು ಮಾಡಿ ಎಂದು ಗೋಳಾಡಿದ್ದಾರೆ.

ಹಾಸನ: ನಿನ್ನೆ ಕಾಡಾನೆ ಕಾರ್ಯಾಚರಣೆ ವೇಳೆ ಕಾದಾಟದಲ್ಲಿ ಮೃತಪಟ್ಟ ಅರ್ಜುನ ಆನೆಯನ್ನ ನೆನೆದು ಮಾವುತ ವಿನು ಕಣ್ಣೀರಿಟ್ಟಿದ್ದಾರೆ. ಅಂತಿಮ ದರ್ಶನದ ವೇಳೆ ಮಾವುತ ವಿನು ಅರ್ಜುನ ಆನೆಯನ್ನ ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದು, ನನ್ನ ಆನೆಯನ್ನ ಬದುಕಿಸಿಕೊಡಿ. ಇಲ್ಲದಿದ್ದರೇ ನನ್ನನ್ನೂ ಅರ್ಜುನನ ಜೊತೆ ಮಣ್ಣು ಮಾಡಿ ಎಂದು ಗೋಳಾಡಿದ್ದಾರೆ.

ಅರ್ಜುನನ ಸೊಂಡಿಲನ್ನು ತಬ್ಬಿಕೊಂಡು ನನ್ನ ಆನೆಯನ್ನು ಬದುಕಿಸಿಕೊಡಿ. ನನ್ನ ಆನೆಯನ್ನು ಮೈಸೂರಿಗೆ ಕಳುಹಿಸಿಕೊಡಿ. ಇಲ್ಲವೇ ನನ್ನನ್ನು ಹಾಗೂ ನನ್ನ ಕುಟುಂಬವನ್ನು ಅರ್ಜುನನ ಜೊತೆ ಮಣ್ಣು ಮಾಡಿ. ಅರ್ಜುನ ಸತ್ತಿಲ್ಲ ಎಂದು ನನ್ನ ಹೆಂಡತಿ ಮಕ್ಕಳಿಗೆ ಹೇಳಿದ್ದೇನೆ. ಅರ್ಜುನನನ್ನು ನನ್ನ ಜೊತೆ ಕಳುಹಿಸಿಕೊಡಿ ಎಂದು ಮಾವುತ ಅರ್ಜುನನ ಎದುರು ರೋಧಿಸಿದ್ದಾರೆ.

ವಿನು ಅವರು ಅರ್ಜುನನ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದರು. ಇದೀಗ ಅರ್ಜುನನ ಸಾವಿನ ನೋವನ್ನು ಅರಗಿಸಿಕೊಳ್ಳಲಾಗದೆ ರೋಧಿಸುತ್ತಿದ್ದಾರೆ. ಮಂಗಳವಾರ ಅರ್ಜುನನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದಿದ್ದರು. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ಇಂದು ಚೇತರಿಸಿಕೊಂಡು ಬಂದಿದ್ದ ವಿನು ಅವರು ತನ್ನ ಪ್ರೀತಿಯ ಅರ್ಜುನನ್ನು ಕಂಡು ಬಿಕ್ಕಳಿಸಿ ಬಿಕ್ಕಳಿಸಿ ಅತ್ತಿದ್ದಾರೆ.

ಇತ್ತ ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟ ಅಂಬಾರಿ ಹೊತ್ತ ಅರ್ಜುನನ ಅಂತಿಮ ದರ್ಶನಕ್ಕೆ ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ. ಮೈಸೂರಿನಿಂದ ಬಂದು ಜನ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಮೃತ ಅರ್ಜುನನ ಕಳೇಬರಕ್ಕೆ ಹಾರ ಹಾಕಿ ನಮನ ಸಲ್ಲಿಸುತ್ತಿದ್ದಾರೆ. ಯಸಳೂರು ವಲಯದ ದಬ್ಬಳ್ಳಿಕಟ್ಟೆ ಸಮೀಪ KFDC ನೆಡು ತೋಪಿನಲ್ಲಿ ಸರಕಾರಿ ಗೌರವದೊಂದಿಗೆ ಅರ್ಜುನನ  ಅಂತ್ಯಸಂಸ್ಕಾರ ನೆರವೇರಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT