ಸಿದ್ದರಾಮಯ್ಯ 
ರಾಜ್ಯ

ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರ ತೆಗೆಯುವ ಕುರಿತು ಸ್ಪೀಕರ್ ನಿರ್ಧರಿಸುತ್ತಾರೆ: ಸಿಎಂ ಸಿದ್ದರಾಮಯ್ಯ

ಇಲ್ಲಿನ ಸುವರ್ಣ ವಿಧಾನಸೌಧದ ವಿಧಾನಸಭೆಯ ಸಭಾಂಗಣದಲ್ಲಿ ಅನಾವರಣಗೊಂಡಿರುವ ವಿನಾಯಕ ದಾಮೋದರ ಸಾವರ್ಕರ್ ಅವರ ಭಾವಚಿತ್ರವನ್ನು ತೆಗೆಯುವ ಬಗ್ಗೆ ಸ್ಪೀಕರ್ ನಿರ್ಧರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಭಾವಚಿತ್ರವನ್ನು ಅಳವಡಿಸಲಾಗಿತ್ತು.

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದ ವಿಧಾನಸಭೆಯ ಸಭಾಂಗಣದಲ್ಲಿ ಅನಾವರಣಗೊಂಡಿರುವ ವಿನಾಯಕ ದಾಮೋದರ ಸಾವರ್ಕರ್ ಅವರ ಭಾವಚಿತ್ರವನ್ನು ತೆಗೆಯುವ ಬಗ್ಗೆ ಸ್ಪೀಕರ್ ನಿರ್ಧರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಭಾವಚಿತ್ರವನ್ನು ಅಳವಡಿಸಲಾಗಿತ್ತು.

2022ರ ಡಿಸೆಂಬರ್‌ನಲ್ಲಿ ಸಾವರ್ಕರ್ ಅವರ ಭಾವಚಿತ್ರದ ಅನಾವರಣವು ಆಗಿನ ವಿರೋಧ ಪಕ್ಷವಾದ ಕಾಂಗ್ರೆಸ್‌ನಿಂದ ಟೀಕೆಗೆ ಗುರಿಯಾಗಿತ್ತು. ಇದು ಏಕಪಕ್ಷೀಯ ನಿರ್ಧಾರ ಎಂದು ಆರೋಪಿಸಿತ್ತು.

ಸಾವರ್ಕರ್ ಅವರ ಭಾವಚಿತ್ರವನ್ನು ತೆಗೆದುಹಾಕಲಾಗುತ್ತದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, 'ಇದು ಸ್ಪೀಕರ್‌ಗೆ (ನಿರ್ಧರಿಸಲು) ಬಿಡಲಾಗಿದೆ' ಎಂದರು.

ವಿಧಾನಸಭೆಯ ಸಭಾಂಗಣದಲ್ಲಿ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಭಾವಚಿತ್ರ ಅಳವಡಿಸುವ ಪ್ರಸ್ತಾವನೆಯನ್ನು ಚರ್ಚಿಸಲಾಗುವುದು ಎಂದು ಸ್ಪೀಕರ್ ಯುಟಿ ಖಾದರ್ ಭಾನುವಾರ ಹೇಳಿದ್ದಾರೆ.

ಕಳೆದ ವರ್ಷ ಬೆಳಗಾವಿಯಲ್ಲಿ ರಾಜ್ಯ ವಿಧಾನಮಂಡಲದ 10 ದಿನಗಳ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ, ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್, ಬಿಆರ್ ಅಂಬೇಡ್ಕರ್, ಬಸವೇಶ್ವರ, ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭಬಾಯಿ ಪಟೇಲ್ ಮತ್ತು ಸಾವರ್ಕರ್ ಅವರ ಭಾವಚಿತ್ರಗಳನ್ನು ಅಂದಿನ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯ ಸಭಾಂಗಣದಲ್ಲಿ ಅನಾವರಣಗೊಳಿಸಿದ್ದರು. 

ಆಗ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರು ಕುವೆಂಪು, ನಾರಾಯಣ ಗುರು, ಶಿಶುನಾಳ ಷರೀಫ್, ನೆಹರು ಮತ್ತು ಬಾಬು ಜಗಜೀವನ್ ರಾಮ್ ಅವರಂತಹ ರಾಷ್ಟ್ರ ಮತ್ತು ರಾಜ್ಯದ ಹಲವಾರು ಪ್ರಮುಖರ ಚಿತ್ರಗಳನ್ನು ಹಿಡಿದು 'ಸುವರ್ಣ ವಿಧಾನ ಸೌಧ'ದ ಹೊರಗೆ ಪ್ರತಿಭಟನೆ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT