ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ಇಂಟರ್​ಪೋಲ್ ನೆರವು ಪಡೆಯಲು ಪೊಲೀಸರು ಮುಂದು!

ಬೆಂಗಳೂರು ಸುತ್ತಮುತ್ತಲಿನ 48 ಶಾಲೆಗಳಿಗೆ ಬಂದಿದ್ದ ಬಾಂಬ್ ಬೆದರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ನಗರದ ಪೊಲೀಸರು ಸಿಬಿಐನ ಇಂಟರ್‌ಪೋಲ್ ವಿಭಾಗದ ನೆರವು ಪಡೆಯಲು ನಿರ್ಧರಿಸಿದೆ.

ಬೆಂಗಳೂರು: ಬೆಂಗಳೂರು ಸುತ್ತಮುತ್ತಲಿನ 48 ಶಾಲೆಗಳಿಗೆ ಬಂದಿದ್ದ ಬಾಂಬ್ ಬೆದರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ನಗರದ ಪೊಲೀಸರು ಸಿಬಿಐನ ಇಂಟರ್‌ಪೋಲ್ ವಿಭಾಗದ ನೆರವು ಪಡೆಯಲು ನಿರ್ಧರಿಸಿದೆ.

ಬೆದರಿಕೆ ಇಮೇಲ್‌ಗಳನ್ನು ವಿದೇಶದಿಂದ ಕಳುಹಿಸಿರುವ ಶಂಕೆಗಳು ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ತಾಂತ್ರಿಕ ನೆರವು ಕೋರಿ ಸಿಬಿಐನ ಇಂಟರ್‌ಪೋಲ್ ವಿಭಾಗದ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆಂದು ತಿಳಿದುಬಂದಿದೆ.

ಬೆದರಿಕೆ ಮೇಲ್ ಗಳನ್ನು ಕಳುಹಿಸಿದ್ದವರು ಯಾರು, ಎಲ್ಲಿಂದ ಕಳುಹಿಸಿದ್ದಾರೆಂಬುದರ ಪತ್ತೆ ಮಾಡಲು ಪ್ರಯತ್ನಗಳ ನಡೆಸಲಾಗುತ್ತಿದೆ. ಈಗಾಗಲೇ ಇಂಟರ್‌ಪೋಲ್ ವಿಭಾಗದ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದ್ದು, ಅವರೊಂದಿಗೆ ಸಂಪರ್ಕದಲ್ಲಿರಲಾಗಿದೆ. ತನಿಖೆ ಕುರಿತು ವಿಸ್ತೃತ ಸಭೆಯನ್ನು ಸೋಮವಾರ ನಡೆಸಲಾಗುವುದು. ಇದೇ ವೇಲೆ ಕಳೆದ ವರ್ಷ ದಾಖಲಾಗಿರುವ ಕೆಲವು ಪ್ರಕರಣಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ವಿದೇಶಗಳಲ್ಲಿಯೂ ಇಂತಹ ಬೆದರಿಕೆ ಪತ್ರಗಳು ಪತ್ತೆಯಾಗಿವೆ. ಆದರೆ, ಇಲ್ಲಿನ ಶಾಲೆಗಳಿಗೆ ಬಂದಿರುವ ಬೆದರಿಕೆ ಇಮೇಲ್, ವಿದೇಶದಲ್ಲಿ ಬಂದಿರುವ ಬೆದರಿಕೆಗಳ ಇಮೇಲ್ ಗಳ ಐಡಿಗಳಲ್ಲಿ ವ್ಯತ್ಯಾಸವಿದೆ. ಆರೋಪಿಗಳು ವಿಪಿಎನ್ ಹಾಗೂ ಪ್ರಾಕ್ಸಿ ಸರ್ವರ್ ಗಳನ್ನು ಬಳಸಿದ್ದು, ಮೂಲ ಪತ್ತೆ ಮಾಡಲು ತಾಂತ್ರಿಕ ಸವಾಲುಗಳು ಎದುರಾಗಿವೆ. ಅಗತ್ಯಬಿದ್ದರೆ ಮೂಲ ಪತ್ತೆಗೆ ವಿದೇಶಗಳನ್ನೂ ಸಂಪರ್ಕಿಸಲಾಗುವುದು ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಹೇಳಿದ್ದಾರೆ.

ಡಿಸೆಂಬರ್ 1 ರಂದು ಬೆಂಗಳೂರಿನ 48 ಶಾಲೆಗಳು ಮತ್ತು ನೆರೆಯ ತಾಲೂಕುಗಳ 20 ಶಾಲೆಗಳಿಗೆ ಬೆದರಿಕೆ ಇಮೇಲ್‌ಗಳು ಬಂದಿದ್ದವು. ಪೊಲೀಸರು ತಪಾಸಣೆ ನಡೆಸಿದಾಗ ಯಾವುದೇ ಸ್ಫೋಟಕಗಳು ಪತ್ತೆಯಾಗಿರಲಿಲ್ಲ. ಆರೋಪಿಗಳು beeble.com ನ ವಿವಿಧ ಇಮೇಲ್ ಐಡಿಗಳಿಂದ ಬೆದರಿಕೆ ರವಾನಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT