ಸಂಗ್ರಹ ಚಿತ್ರ 
ರಾಜ್ಯ

ಸುರಕ್ಷಿತ ಪಾದಚಾರಿ ಮಾರ್ಗ: ಬಿಬಿಎಂಪಿಯಿಂದ 2 ದಿನಗಳ 'ನಮ್ಮ ರಸ್ತೆ' ಎಕ್ಸಿಬಿಷನ್

ನಗರದ ಪಾದಚಾರಿ ಮಾರ್ಗಗಳನ್ನು ಸುರಕ್ಷಿತಗೊಳಿಸಲು ಉದ್ದೇಶದಿಂದ ಬಿಬಿಎಂಪಿ ಎರಡು ದಿನಗಳ 'ನಮ್ಮ ರಸ್ತೆ' ಎಕ್ಸಿಬಿಷನ್' ನಡೆಸುತ್ತಿದೆ.

ಬೆಂಗಳೂರು: ನಗರದ ಪಾದಚಾರಿ ಮಾರ್ಗಗಳನ್ನು ಸುರಕ್ಷಿತಗೊಳಿಸಲು ಉದ್ದೇಶದಿಂದ ಬಿಬಿಎಂಪಿ ಎರಡು ದಿನಗಳ 'ನಮ್ಮ ರಸ್ತೆ' ಎಕ್ಸಿಬಿಷನ್' ನಡೆಸುತ್ತಿದೆ.

ಈ ಕುರಿತು ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಪಾದಚಾರಿ ಮಾರ್ಗಗಳನ್ನು ಸುರಕ್ಷಿತವಾಗಿಸುವುದು ಇದರ ಉದ್ದೇಶವಾಗಿದೆ. ನಮ್ಮ ರಸ್ತೆ ಎಕ್ಸಿಬಿಷನ್'ನಲ್ಲಿ ಈ ಕುರಿತು ಚರ್ಚೆಗಳನ್ನು ನಡೆಸಲಾಗುತ್ತದೆ. ಇಲ್ಲಿ ಚರ್ಚಿಸಿ ಉತ್ತಮ ಸಲಹೆ ಹಾಗೂ ಪರಿಕಲ್ಪನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.

"ಪಾಲಿಕೆಯು ವರ್ಲ್ಡ್ ರಿಸೋರ್ಸ್ ಇನ್‌ಸ್ಟಿಟ್ಯೂಟ್ (ಡಬ್ಲ್ಯುಆರ್‌ಐ) ಮತ್ತು ಇನ್ನೊಂದು ಖಾಸಗಿ ಏಜೆನ್ಸಿಯೊಂದಿಗೆ ಶುಕ್ರವಾರ ಮತ್ತು ಶನಿವಾರ ಬಿಬಿಎಂಪಿ ಪ್ರಧಾನ ಕಚೇರಿ ಆವರಣದಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ವಿಡಿಯೋ ಸಂದೇಶವನ್ನು ಹಂಚಿಕೊಂಡ ಬಿಬಿಎಂಪಿ ಇಂಜಿನಿಯರ್-ಇನ್-ಚೀಫ್ ಬಿಎಸ್ ಪ್ರಹಲ್ಲಾದ್ ಅವರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸುರಕ್ಷಿತ ಪಾದಚಾರಿ ಮಾರ್ಗಳ ಯೋಜನೆಗಳ ಕುರಿತು ಸಲಹೆಗಳನ್ನು ನೀಡಬೇಕೆಂದು ಮನವಿ ಮಾಡಿದರು.

ವಾಹನ-ಬಳಕೆದಾರರಿಗಷ್ಟೇ ಸುರಕ್ಷಿತ ರಸ್ತೆಗಳನ್ನು ಮಾಡುವುದಲ್ಲ, ಪಾದಚಾರಿಗಳಿಗೂ ಮಾಡಬೇಕಿದೆ. ಆದ್ದರಿಂದ ಬೆಂಗಳೂರಿನ ಸುರಕ್ಷಿತ ಪಾದಚಾರಿ ಕುರಿತು ಎಕ್ಸಿಬಿಷನ್ ನಡೆಸಲಾಗುತ್ತಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT