ಸ್ಕ್ಯಾನಿಂಗ್ ಕೇಂದ್ರ ಸೀಲ್ ಮಾಡಿದ ಅಧಿಕಾರಿಗಳು 
ರಾಜ್ಯ

ಭ್ರೂಣಹತ್ಯೆ ಜಾಲ: ವೈದ್ಯಕೀಯ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಕರ್ನಾಟಕ ಸರ್ಕಾರ ಕಠಿಣ ಕ್ರಮ

ಮಂಡ್ಯ ಜಿಲ್ಲೆಯ ದೂರದ ಗ್ರಾಮದಲ್ಲಿರುವ ಆಲೆಮನೆಯೊಂದರಲ್ಲಿ ಸ್ಥಾಪಿಸಲಾಗಿದ್ದ ಘಟಕದಲ್ಲಿ ಹೆಣ್ಣು ಭ್ರೂಣಗಳ ಪತ್ತೆ ಮತ್ತು ಅವುಗಳ ನಾಶ ಜಾಲ ಬಯಲಾದ ಹಿನ್ನೆಲೆಯಲ್ಲಿ ಆರೋಗ್ಯ ಅಧಿಕಾರಿಗಳು ಬುಧವಾರ ವೈದ್ಯಕೀಯ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ದಾಳಿ ನಡೆಸಿದ್ದಾರೆ.

ಮಂಡ್ಯ: ಮಂಡ್ಯ ಜಿಲ್ಲೆಯ ದೂರದ ಗ್ರಾಮದಲ್ಲಿರುವ ಆಲೆಮನೆಯೊಂದರಲ್ಲಿ ಸ್ಥಾಪಿಸಲಾಗಿದ್ದ ಘಟಕದಲ್ಲಿ ಹೆಣ್ಣು ಭ್ರೂಣಗಳ ಪತ್ತೆ ಮತ್ತು ಅವುಗಳ ನಾಶ ಜಾಲ ಬಯಲಾದ ಹಿನ್ನೆಲೆಯಲ್ಲಿ ಆರೋಗ್ಯ ಅಧಿಕಾರಿಗಳು ಬುಧವಾರ ವೈದ್ಯಕೀಯ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ದಾಳಿ ನಡೆಸಿದ್ದಾರೆ.

ಮಂಡ್ಯ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ವೆಂಕಟಸ್ವಾಮಿ, ಪಾಂಡವಪುರ ಉಪವಿಭಾಗದ ಸಹಾಯಕ ಆಯುಕ್ತ ನಂದೀಶ್‌ ನೇತೃತ್ವದಲ್ಲಿ ದಾಳಿ ನಡೆದಿದ್ದು, ಈ ವೇಳೆ ಅವರು ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸದ ಸ್ಕ್ಯಾನಿಂಗ್ ಕೇಂದ್ರಗಳನ್ನು ಸೀಲ್ ಮಾಡಿದರು. ದಾಖಲೆಗಳು ನವೀಕರಣಗೊಳ್ಳದ ಕೇಂದ್ರಗಳಿಗೆ ನೋಟಿಸ್ ನೀಡಿದ್ದಾರೆ.

900 ಕ್ಕೂ ಹೆಚ್ಚು ಹೆಣ್ಣು ಭ್ರೂಣಹತ್ಯೆ ನಡೆಸಿದ ಆರೋಪದ ಮೇಲೆ ವೈದ್ಯರು, ದಾದಿಯರು ಮತ್ತು ಏಜೆಂಟರು ಸೇರಿದಂತೆ 10 ಜನರನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಈ ಗ್ಯಾಂಗ್ ಗರ್ಭಿಣಿಯರನ್ನು ಸಂಪರ್ಕಿಸಿ ಲಿಂಗ ನಿರ್ಣಯ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವೊಲಿಸುತ್ತಿದ್ದರು, ಇದಕ್ಕಾಗಿ 20,000 ರಿಂದ 25,000 ರೂ.ವರೆಗೆ ವಸೂಲಿ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಂಡ್ಯ ಸಮೀಪದ ಕಬ್ಬಿನ ತೋಟದಲ್ಲಿದ್ದ ಆಲೆ ಮನೆಯಲ್ಲಿ ಈ ಗ್ಯಾಂಗ್ ಪರೀಕ್ಷೆಗಳನ್ನು ನಡೆಸುತ್ತಿದ್ದರು. ಅಲ್ಲಿ ಅಗತ್ಯವಿರುವ ಎಲ್ಲಾ ಉಪಕರಣಗಳನ್ನು ಇರಿಸಲಾಗಿತ್ತು, "ಪರೀಕ್ಷೆಯಲ್ಲಿ ಹೆಣ್ಣು ಮಗು ಪತ್ತೆಯಾದರೆ, ಅವರು ಅದನ್ನು ಗರ್ಭಪಾತ ಮಾಡಲು ಬಯಸುತ್ತೀರಾ ಎಂದು ಅವರು ಆ ಮಹಿಳೆಯರನ್ನು ಕೇಳುತ್ತಿದ್ದರು. ಮಹಿಳೆಯರು ಒಪ್ಪಿಗೆ ಸೂಚಿಸಿದ ಬಳಿಕ ತಂಡವು ಸುಮಾರು 50 ಸಾವಿರ ರೂ. ಪಡೆದು ಗರ್ಭಪಾತ ಮಾಡುತ್ತಿದ್ದರು. ಈ ಗ್ಯಾಂಗ್ ಕನಿಷ್ಠ 900 ಹೆಣ್ಣು ಭ್ರೂಣ ಹತ್ಯೆಗಳನ್ನು ನಡೆಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೇ ವೇಳೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರಿಗೆ ಮಾತನಾಡಿದ ಅವರು, ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್