ಸಾಂದರ್ಭಿಕ ಚಿತ್ರ 
ರಾಜ್ಯ

ನಂದಿಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು ಆರಂಭಿಸಲು ನೈರುತ್ಯ ರೈಲ್ವೆ ನಿರ್ಧಾರ

ಚಿಕ್ಕಬಳ್ಳಾಪುರ ತಾಲೂಕಿನಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ  ಡಿಸೆಂಬರ್ 11 ರಿಂದ ಎಲೆಕ್ಟ್ರಿಕ್ ರೈಲು ಆರಂಭಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ.  

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ  ಡಿಸೆಂಬರ್ 11 ರಿಂದ ಎಲೆಕ್ಟ್ರಿಕ್ ರೈಲು ಆರಂಭಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ.  

ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾನ ನಿಲ್ದಾಣ ಮಾರ್ಗದಲ್ಲಿ MEMU ರೈಲುಗಳ ಕಾರ್ಯಾಚರಣೆಯನ್ನು ವಿಸ್ತರಿಸಲು ನೈಋತ್ಯ ರೈಲ್ವೆ ತೀರ್ಮಾನಿಸಿದೆ. 

ರೈಲಿನ ವಿವರ ಇಂತಿದೆ:  ಬೆಂಗಳೂರು ಕಂಟೋನ್ಮೆಂಟ್-ಚಿಕ್ಕಬಳ್ಳಾಪುರ-ಕಂಟೋನ್ಮೆಂಟ್ ರೈಲಿನ ಸಂಖ್ಯೆ  6531/06532, ಬೆಂಗಳೂರು, ಕಂಟೋನ್ಮೆಂಟ್-ಚಿಕ್ಕಬಳ್ಳಾಪುರ ರೈಲಿನ ಸಂಖ್ಯೆ 06535/06583 ಮತ್ತು ಯಶವಂತಪುರ-ಚಿಕ್ಕಬಳ್ಳಾಪುರ-ಯಶವಂತಪುರ ರೈಲಿನ ಸಂಖ್ಯೆ 06593/06594.

ಯಲಹಂಕ-ಚಿಕ್ಕಬಳ್ಳಾಪುರ ಮಾರ್ಗದ ವಿದ್ಯುದ್ದೀಕರಣವು ಮಾರ್ಚ್ 2022 ರಲ್ಲಿ ಪೂರ್ಣಗೊಂಡಿದೆ. ಆದರೆ, ವಿವಿಧ ಕಾರಣಗಳಿಂದ ವಿದ್ಯುತ್ ರೈಲುಗಳ ಅಳವಡಿಕೆ ವಿಳಂಬವಾಗಿದೆ. ಪ್ರಸ್ತುತ, ನಂದಿ ನಿಲ್ದಾಣದಲ್ಲಿ  ಬೆಂಗಳೂರು-ಕೋಲಾರ-ಕಂಟೋನ್ಮೆಂಟ್ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು-ಕೋಲಾರ-KSR ಬೆಂಗಳೂರು ನಡುವೆ ಡೇಮೊ ರೈಲು ಸಂಚರಿಸುತ್ತಿವೆ. 

ಚಿಕ್ಕಬಳ್ಳಾಪುರಕ್ಕೆ ಸೇವೆಗಳನ್ನು ವಿಸ್ತರಿಸುವುದರಿಂದ ವಿದ್ಯಾರ್ಥಿಗಳು, ರೈತರು ಮತ್ತು 112 ಅಡಿ ಎತ್ತರದ ಆದಿಯೋಗಿ ಪ್ರತಿಮೆಯನ್ನು ನೋಡಲು ಬಯಸುವ ಪ್ರವಾಸಿಗರಿಗೆ ಅನುಕೂಲವಾಗುತ್ತದೆ ಎಂಬುದನ್ನು ನೈರುತ್ಯ ರೈಲ್ವೆ ಗಮನಿಸಿದೆ. ಆದರೆ ಈ ರೈಲುಗಳು ಬೆಟ್ಟಹಲಸೂರು, ದೊಡ್ಡಜಾಲ, ಚನ್ನಸಂದ್ರದಂತಹ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುವುದಿಲ್ಲ. 

ನಂದಿ ನಿಲುಗಡೆ ಕಾಮಗಾರಿ ಎರಡು ತಿಂಗಳೊಳಗೆ ಪೂರ್ಣಗೊಳ್ಳಲಿದೆ. ಒಮ್ಮೆ ಮುಗಿದ ನಂತರ, ನಂದಿ ಬೆಟ್ಟದಲ್ಲಿ ಸೂರ್ಯೋದಯವನ್ನು ವೀಕ್ಷಿಸಲು ಅನುಕೂಲವಾಗುವಂತೆ ಪ್ರವಾಸಿಗರಿಗೆ ಬೆಳಗ್ಗೆಯಿಂದಲೇ ರೈಲ್ವೆ ಸೇವೆ ಆರಂಭವಾಗಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು: ಡಿಎಂಕೆಗೆ 'SIR'ಹೊಡೆತ: ಕರಡು ಮತದಾರರ ಪಟ್ಟಿಯಿಂದ 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್!

ಬೇಡಿಕೆ ಈಡೇರಿದೆ, ನನ್ನ-ಸಿಎಂ ನಡುವೆ ಒಪ್ಪಂದವಾಗಿದೆ, ಹೈಕಮಾಂಡ್ ಅವರ ಪರ ಇರೋದ್ರಿಂದಲೇ ಅವರು ಸಿಎಂ: ಡಿ.ಕೆ ಶಿವಕುಮಾರ್

ಅಮಿತ್ ಶಾ 'ನಾಲಾಯಕ್ ಹೋಮ್ ಮಿನಿಸ್ಟರ್' ಎಂದ ಪ್ರಿಯಾಂಕ್ ಖರ್ಗೆ! ಕ್ಷಮೆಗೆ ಪಟ್ಟು, ಬಿಜೆಪಿ ಪ್ರತಿಭಟನೆ

ವಿಧಾನಪರಿಷತ್: ವಿಪಕ್ಷಗಳ ಪ್ರತಿಭಟನೆ ನಡುವೆ 'ದ್ವೇಷ ಭಾಷಣ' ಮಸೂದೆಗೆ ಮೇಲ್ಮನೆ ಅಂಗೀಕಾರ!

ಸಂಸತ್ ಅಧಿವೇಶನ: ಟೀ ಪಾರ್ಟಿಯಲ್ಲಿ ಪ್ರಧಾನಿ, ರಾಜನಾಥ್ ಸಿಂಗ್ ಎದುರು "ಗಿಡಮೂಲಿಕೆ ರಹಸ್ಯ" ಬಿಚ್ಚಿಟ್ಟ ಪ್ರಿಯಾಂಕ ಗಾಂಧಿ; ಮೋದಿ ಪ್ರಿತಿಕ್ರಿಯೆ ಏನು?

SCROLL FOR NEXT