ಎಟಿಎಂನಲ್ಲಿ ಕಳ್ಳರು (ಸಾಂದರ್ಭಿಕ ಚಿತ್ರ) 
ರಾಜ್ಯ

ನೆಲಮಂಗಲ ATM ಗೆ ಕನ್ನ; ಗ್ಯಾಸ್ ಕಟರ್ ಬಳಸಿ ಎಟಿಎಂ ತೆರೆಯುವ ವೇಳೆ ಅಪಾರ ಪ್ರಮಾಣದ ಹಣ ಸುಟ್ಟು ಕರಕಲು!

ಎಟಿಎಂಗೆ ಕನ್ನ ಹಾಕಿದ್ದ ಕದೀಮರು ಎಟಿಎಂ ತೆರೆಯಲು ಗ್ಯಾಸ್  ಕಟರ್ ಬಳಸಿದ ಪರಿಣಾಮ ಅದರ ಬೆಂಕಿಗೆ ಎಟಿಎಂ ಮಶೀನ್ ನಲ್ಲಿದ್ದ ಅಪಾರ ಪ್ರಮಾಣದ ಹಣ ಸುಟ್ಟು ಕರಕಲಾಗಿದೆ.

ಬೆಂಗಳೂರು: ಎಟಿಎಂಗೆ ಕನ್ನ ಹಾಕಿದ್ದ ಕದೀಮರು ಎಟಿಎಂ ತೆರೆಯಲು ಗ್ಯಾಸ್  ಕಟರ್ ಬಳಸಿದ ಪರಿಣಾಮ ಅದರ ಬೆಂಕಿಗೆ ಎಟಿಎಂ ಮಶೀನ್ ನಲ್ಲಿದ್ದ ಅಪಾರ ಪ್ರಮಾಣದ ಹಣ ಸುಟ್ಟು ಕರಕಲಾಗಿದೆ.

ಬೆಂಗಳೂರು ನಗರದ ಹೊರವಲಯದ ನೆಲಮಂಗಲದಲ್ಲಿ ಗುರುವಾರ ಗ್ಯಾಸ್‌ ಕಟ್ಟರ್‌ ಬಳಸಿ ಕಳ್ಳರ ತಂಡವೊಂದು ಸ್ವಯಂಚಾಲಿತ ಟೆಲ್ಲರ್‌ ಮೆಷಿನ್‌ (ಎಟಿಎಂ) ಒಡೆದು ತೆರೆಯಲು ಯತ್ನಿಸಿದ ಬಳಿಕ ಅದರಲ್ಲಿ ಸಂಗ್ರಹಿಸಿಟ್ಟಿದ್ದ ಹಲವು ಕರೆನ್ಸಿ ನೋಟುಗಳು ಸುಟ್ಟು ಬೂದಿಯಾದವು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ, ಮುಂಬೈನಿಂದ ಬ್ಯಾಂಕ್ ಅಧಿಕಾರಿಗಳು ಎಟಿಎಂ ಅಳವಡಿಸಿರುವ ಕಟ್ಟಡದ ಮಾಲೀಕರಿಗೆ ಕರೆ ಮಾಡಿ ಪರಿಶೀಲಿಸಿದರು. ಕಟ್ಟಡದ ಮಾಲೀಕರು ಸ್ಥಳಕ್ಕೆ ಧಾವಿಸುತ್ತಿದ್ದಂತೆ ಕಳ್ಳರು ತಮ್ಮ ಸಲಕರಣೆಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಈ ದೃಶ್ಯಾವಳಿಯಲ್ಲಿ ಇಬ್ಬರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ.

ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT