ಎಟಿಎಂನಲ್ಲಿ ಕಳ್ಳರು (ಸಾಂದರ್ಭಿಕ ಚಿತ್ರ) 
ರಾಜ್ಯ

ನೆಲಮಂಗಲ ATM ಗೆ ಕನ್ನ; ಗ್ಯಾಸ್ ಕಟರ್ ಬಳಸಿ ಎಟಿಎಂ ತೆರೆಯುವ ವೇಳೆ ಅಪಾರ ಪ್ರಮಾಣದ ಹಣ ಸುಟ್ಟು ಕರಕಲು!

ಎಟಿಎಂಗೆ ಕನ್ನ ಹಾಕಿದ್ದ ಕದೀಮರು ಎಟಿಎಂ ತೆರೆಯಲು ಗ್ಯಾಸ್  ಕಟರ್ ಬಳಸಿದ ಪರಿಣಾಮ ಅದರ ಬೆಂಕಿಗೆ ಎಟಿಎಂ ಮಶೀನ್ ನಲ್ಲಿದ್ದ ಅಪಾರ ಪ್ರಮಾಣದ ಹಣ ಸುಟ್ಟು ಕರಕಲಾಗಿದೆ.

ಬೆಂಗಳೂರು: ಎಟಿಎಂಗೆ ಕನ್ನ ಹಾಕಿದ್ದ ಕದೀಮರು ಎಟಿಎಂ ತೆರೆಯಲು ಗ್ಯಾಸ್  ಕಟರ್ ಬಳಸಿದ ಪರಿಣಾಮ ಅದರ ಬೆಂಕಿಗೆ ಎಟಿಎಂ ಮಶೀನ್ ನಲ್ಲಿದ್ದ ಅಪಾರ ಪ್ರಮಾಣದ ಹಣ ಸುಟ್ಟು ಕರಕಲಾಗಿದೆ.

ಬೆಂಗಳೂರು ನಗರದ ಹೊರವಲಯದ ನೆಲಮಂಗಲದಲ್ಲಿ ಗುರುವಾರ ಗ್ಯಾಸ್‌ ಕಟ್ಟರ್‌ ಬಳಸಿ ಕಳ್ಳರ ತಂಡವೊಂದು ಸ್ವಯಂಚಾಲಿತ ಟೆಲ್ಲರ್‌ ಮೆಷಿನ್‌ (ಎಟಿಎಂ) ಒಡೆದು ತೆರೆಯಲು ಯತ್ನಿಸಿದ ಬಳಿಕ ಅದರಲ್ಲಿ ಸಂಗ್ರಹಿಸಿಟ್ಟಿದ್ದ ಹಲವು ಕರೆನ್ಸಿ ನೋಟುಗಳು ಸುಟ್ಟು ಬೂದಿಯಾದವು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ, ಮುಂಬೈನಿಂದ ಬ್ಯಾಂಕ್ ಅಧಿಕಾರಿಗಳು ಎಟಿಎಂ ಅಳವಡಿಸಿರುವ ಕಟ್ಟಡದ ಮಾಲೀಕರಿಗೆ ಕರೆ ಮಾಡಿ ಪರಿಶೀಲಿಸಿದರು. ಕಟ್ಟಡದ ಮಾಲೀಕರು ಸ್ಥಳಕ್ಕೆ ಧಾವಿಸುತ್ತಿದ್ದಂತೆ ಕಳ್ಳರು ತಮ್ಮ ಸಲಕರಣೆಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಈ ದೃಶ್ಯಾವಳಿಯಲ್ಲಿ ಇಬ್ಬರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ.

ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

'Digital arrest' ವಂಚನೆ ತಡೆಗೆ ಸಿಮ್ ಕಾರ್ಡ್ ವಿತರಣೆ ಬಿಗಿಗೊಳಿಸಲಿದೆ ಸರ್ಕಾರ; ಇನ್ಮುಂದೆ ಖರೀದಿಗೆ ನಿರ್ಬಂಧ, ರಿಯಲ್ ಟೈಮ್ ವೆರಿಫಿಕೇಷನ್ ಕಡ್ಡಾಯ!