ಸಾಂದರ್ಭಿಕ ಚಿತ್ರ 
ರಾಜ್ಯ

ಪತಿ ಮೇಲೆ ಸೇಡು: ಪೊಲೀಸರಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಮಹಿಳೆಯ ವಿರುದ್ಧ ಎಫ್ಐಆರ್

ಪತಿ ಮೇಲೆ ಸೇಡು ತೀರಿಸಿಕೊಳ್ಳುವ ಸಲುವಾಗಿ ಆತನ ಮೊಬೈಲ್ ಸಂಖ್ಯೆಯಿಂದ ಪೊಲೀಸ್ ಅಧಿಕಾರಿಗೆ ಹುಸಿ ಬೆದರಿಕೆ ಸಂದೇಶ ಕಳುಹಿಸಿದ 32 ವರ್ಷದ ಮಹಿಳೆಯ ವಿರುದ್ಧ ನಗರ ಪೊಲೀಸರು ಗುರುವಾರ ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು: ಪತಿ ಮೇಲೆ ಸೇಡು ತೀರಿಸಿಕೊಳ್ಳುವ ಸಲುವಾಗಿ ಆತನ ಮೊಬೈಲ್ ಸಂಖ್ಯೆಯಿಂದ ಪೊಲೀಸ್ ಅಧಿಕಾರಿಗೆ ಹುಸಿ ಬೆದರಿಕೆ ಸಂದೇಶ ಕಳುಹಿಸಿದ 32 ವರ್ಷದ ಮಹಿಳೆಯ ವಿರುದ್ಧ ನಗರ ಪೊಲೀಸರು ಗುರುವಾರ ಪ್ರಕರಣ ದಾಖಲಿಸಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿ ಮಹಿಳೆ ವಿದ್ಯಾರಾಣಿ ಆನ್‌ಲೈನ್‌ನಲ್ಲಿ ಪರಪುರುಷನ ಜೊತೆ ಸ್ನೇಹ ಬೆಳೆಸಿರುವುದನ್ನು ಕಂಡ ಪತಿ ಕಿರಣ್ ಆಕೆಯ ಮೊಬೈನ್ ಅನ್ನು ಹೊಡೆದು ಹಾಕಿದ್ದರು. ಇದು ಮಹಿಳೆ ಕೆರಳುವಂತೆ ಮಾಡಿತ್ತು. ನಂತರ ಮತ್ತೊಂದು ಮೊಬೈಲ್ ಖರೀದಿಸಿದ್ದ ವಿದ್ಯಾರಾಣಿ ತಾನು ಸಿಕ್ಕಿಬಿದ್ದಿದ್ದಾಗಿ ತನ್ನ ಬಿಹಾರ ಮೂಲದ ಸ್ನೇಹಿತ ರಾಮಪ್ರಸಾದ್ ಗೆ ತಿಳಿಸಿದ್ದಾಳೆ. ಇವರಿಬ್ಬರೂ ಸೇರಿ ಕಿರಣ್ ನನ್ನು ಸಿಲುಕಿಸುವ ಸಂಚು ರೂಪಿಸಿದ್ದಾರೆ ಎಂದು ತಿಳಿದುಬಂದಿದೆ.

ನಂತರ ಮಹಿಳೆ ಕಿರಣ್ ಮೊಬೈಲ್ ನಿಂದ ಡಿಸೆಂಬರ್ 3ರಂದು ಹಿರಿಯ ಪೊಲೀಸ್ ಅಧಿಕಾರಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದು ಅದರಲ್ಲಿ ಸರಣಿ ಆರ್‌ಡಿಎಕ್ಸ್ ಬಾಂಬ್ ಸ್ಫೋಟ ನಡೆಯಲಿದೆ ಎಂದು ಹೇಳಿದ್ದಳು. ಸಂದೇಶ ರವಾನೆಯಾದ ನಂತರ ವಿದ್ಯಾರಾಣಿ ಮೊಬೈಲ್ ನಲ್ಲಿದ್ದ ಸಂದೇಶವನ್ನು ಡಿಲೀಟ್ ಮಾಡಿದ್ದಾಳೆ.

ಮೊಬೈಲ್ ಸಂಖ್ಯೆ ಪರಿಶೀಲಿಸಿದ ಪೊಲೀಸರು ನಂತರ ಕಿರಣ್ ನನ್ನು ವಿಚಾರಣೆಗೆ ಒಳಪಡಿಸಿದ್ದರು. ನಂತರ ಅನುಮಾನಗೊಂಡು ವಿದ್ಯಾರಾಣಿಯನ್ನು ವಿಚಾರಣೆಗೆ ಒಳಪಡಿಸಿದಾಗ ಸತ್ಯ ಹೊರಗೆ ಬಂದಿದೆ. ಗಂಡ ತನ್ನ ಮೊಬೈಲ್ ಅನ್ನು ಒಡೆದಿದ್ದಕ್ಕಾಗಿ ಸೇಡು ತೀರಿಸಿಕೊಳ್ಳಲು ಹೀಗೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಬೆದರಿಕೆ ಸಂದೇಶವನ್ನು ಕಳುಹಿಸಿದ ಆರೋಪದ ಮೇಲೆ ವಿದ್ಯಾರಾಣಿ ಮತ್ತು ಆಕೆಯ ಸಹಚರ ರಾಮಪ್ರಸಾದ್ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT