ಈರಣ್ಣ ಗೌಡ ಪೊಲೀಸ್ ಪಾಟೀಲ್ 
ರಾಜ್ಯ

ಕಲಬುರಗಿಯಲ್ಲಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ

ಕಲಬುರಗಿ ನಗರದಲ್ಲಿ ಗುರುವಾರ ನ್ಯಾಯಾಲಯಕ್ಕೆ ತೆರಳುತ್ತಿದ್ದ ವಕೀಲರೊಬ್ಬರನ್ನು ಹಾಡಹಗಲೇ ದುಷ್ಕರ್ಮಿಗಳಿಬ್ಬರು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲಬುರಗಿ: ಕಲಬುರಗಿ ನಗರದಲ್ಲಿ ಗುರುವಾರ ನ್ಯಾಯಾಲಯಕ್ಕೆ ತೆರಳುತ್ತಿದ್ದ ವಕೀಲರೊಬ್ಬರನ್ನು ಹಾಡಹಗಲೇ ದುಷ್ಕರ್ಮಿಗಳಿಬ್ಬರು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲಬುರಗಿ ನಗರದ ಸಾಯಿ ಮಂದಿರ್ ಬಳಿ ಈ ಭೀಕರ ಕೊಲೆ ನಡೆದಿದೆ. ಕೊಲೆಯಾದ ವಕೀಲರನ್ನು ಉದನೂರ ಗ್ರಾಮದ ನಿವಾಸಿ ಜಿಲ್ಲಾ ನ್ಯಾಯಾಲಯದ ವಕೀಲ ಈರಣ್ಣ ಗೌಡ ಪೊಲೀಸ್ ಪಾಟೀಲ್(40) ಎಂದು ಗುರುತಿಸಲಾಗಿದೆ.

ಹಂತಕರು ಮಚ್ಚಿನೊಂದಿಗೆ ವಕೀಲನನ್ನು ಬೆನ್ನಟ್ಟಿ ಬರುತ್ತಿದಾಗ ಅವರಿಂದ ತಪ್ಪಿಸಿಕೊಳ್ಳಲು ವಕೀಲ ಈರಣ್ಣ ಗೌಡ ಪೊಲೀಸ್ ಪಾಟೀಲ್ ಅವರು ಶ್ರೀ ಗಂಗಾ ವಿಹಾರ್ ಅಪಾರ್ಟ್ಮೆಂಟ್ ಒಳಗೆ ಓಡಿದ್ದಾರೆ. ಅಲ್ಲಿ ತನ್ನ ರಕ್ಷಣೆಗಾಗಿ ರಿವಾಲ್ವರ್‌ ತೆಗೆಯುತ್ತಿದ್ದ ವಕೀಲನ ಮೇಲೆ ಹಂತಕರು ಮಚ್ಚು ಬೀಸಿ ಹಲ್ಲೆ ಮಾಡಿದ್ದಾರೆ. ಆ ಬಳಿಕ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ.

ಮಚ್ ಹಿಡಿದು ಅಟ್ಟಾಡಿಸಿಕೊಂಡು ಬರುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪೋಲೀಸರ ಪ್ರಕಾರ, ಹಂತಕರು, ವಕೀಲರನ್ನು ಸುಮಾರು ಅರ್ಧ ಕಿಲೋಮೀಟರ್ ವರೆಗೆ ಬೆನ್ನಟ್ಟಿದ ನಂತರ ಅವನರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ, ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾರೆ.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಹಳೆ ದ್ವೇಷವೇ ಕೊಲೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಸಂಬಂಧ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT