ದಿನೇಶ್ ಗುಂಡೂರಾವ್ 
ರಾಜ್ಯ

ಇನ್ನೂ 50 ಡಯಾಲಿಸಿಸ್ ಕೇಂದ್ರ ತೆರೆಯಲು ರಾಜ್ಯ ಸರ್ಕಾರ ಮುಂದು!

ಡಯಾಲಿಸಿಸ್ ಕೇಂದ್ರಗಳಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಹೊಸ ಸೇವಾ ಏಜೆನ್ಸಿಗಳನ್ನು ನೇಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.  ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ , ಹಿಂದಿನ ಏಜೆನ್ಸಿಗಳ ಒಪ್ಪಂದದ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಹೊಸ ಏಜೆನ್ಸಿಗಳನ್ನು ನೇಮಿಸಲು ಸರ್ಕಾರ ಹೊಸ ಟೆಂಡರ್‌ಗಳನ್ನು ಕರೆದಿದೆ ಎಂದರು. 

ಬೆಳಗಾವಿ: ಡಯಾಲಿಸಿಸ್ ಕೇಂದ್ರಗಳಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಹೊಸ ಸೇವಾ ಏಜೆನ್ಸಿಗಳನ್ನು ನೇಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.  

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ , ಹಿಂದಿನ ಏಜೆನ್ಸಿಗಳ ಒಪ್ಪಂದದ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಹೊಸ ಏಜೆನ್ಸಿಗಳನ್ನು ನೇಮಿಸಲು ಸರ್ಕಾರ ಹೊಸ ಟೆಂಡರ್‌ಗಳನ್ನು ಕರೆದಿದೆ ಎಂದರು. 

"ಡಯಾಲಿಸಿಸ್ ಕೇಂದ್ರಗಳ ಸಂಖ್ಯೆಯನ್ನು 169 ರಿಂದ 219 ಕ್ಕೆ ಹೆಚ್ಚಿಸಲಾಗುವುದು. ಡಯಾಲಿಸಿಸ್ ಯಂತ್ರಗಳ ಸಂಖ್ಯೆಯನ್ನು 649 ರಿಂದ 800 ಕ್ಕೆ ಹೆಚ್ಚಿಸಲಾಗುವುದು, 57 ಹೊಸ ತಾಲೂಕುಗಳಲ್ಲಿನ 48 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹೊಸ ಕೇಂದ್ರಗಳು ಬರಲಿವೆ ಎಂದು ಅವರು ಹೇಳಿದರು. 

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ರೋಗಿಗಳು ತಮ್ಮ ಆರೋಗ್ಯ ಕಾರ್ಡ್ ಬಳಸಿ ಡಯಾಲಿಸಿಸ್ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಮಾಡಿದ ಮನವಿಯನ್ನು ಪರಿಗಣಿಸುವುದಾಗಿ ದಿನೇಶ್ ಗುಂಡೂರಾವ್ ಸದನಕ್ಕೆ ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!