ಸಾಂದರ್ಭಿಕ ಚಿತ್ರ 
ರಾಜ್ಯ

2022-2023ರಲ್ಲಿ ರಾಜ್ಯದಲ್ಲಿ 18,461 ಮಕ್ಕಳು ಶಾಲೆಯಿಂದ ಹೊರಗೆ...

ಕಳೆದ ಆರು ವರ್ಷಗಳಲ್ಲಿ ರಾಜ್ಯದಲ್ಲಿ 71,945 ವಿದ್ಯಾರ್ಥಿಗಳು ಶಾಲೆ ಬಿಟ್ಟಿದ್ದಾರೆ ಎಂದು ಪ್ರಾಥಮಿಕ ಶಾಲಾ ಮತ್ತು ಸಾಕ್ಷರತಾ ಇಲಾಖೆಯ ಅಂಕಿ ಅಂಶಗಳು ತಿಳಿಸಿವೆ.

ಬೆಂಗಳೂರು: ಕಳೆದ ಆರು ವರ್ಷಗಳಲ್ಲಿ ರಾಜ್ಯದಲ್ಲಿ 71,945 ವಿದ್ಯಾರ್ಥಿಗಳು ಶಾಲೆ ಬಿಟ್ಟಿದ್ದಾರೆ ಎಂದು ಪ್ರಾಥಮಿಕ ಶಾಲಾ ಮತ್ತು ಸಾಕ್ಷರತಾ ಇಲಾಖೆಯ ಅಂಕಿ ಅಂಶಗಳು ತಿಳಿಸಿವೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿವಿಧ ಕಾರ್ಯಕ್ರಮಗಳು ಮತ್ತು ಶಿಕ್ಷಣ ಹಕ್ಕು (ಆರ್‌ಟಿಇ) ನೀತಿಯ ಅನುಷ್ಠಾನದ ಹೊರತಾಗಿಯೂ, ದೇಶದಲ್ಲಿ ಅತಿ ಹೆಚ್ಚು ಶಾಲೆ ಬಿಟ್ಟವರ ಸಂಖ್ಯೆಯಲ್ಲಿ ರಾಜ್ಯ 7ನೇ ಸ್ಥಾನದಲ್ಲಿದೆ. 

ಶಿಕ್ಷಣ ಇಲಾಖೆಯಡಿ ಸಮಗ್ರ ಶಿಕ್ಷಣ ಕರ್ನಾಟಕ (SSK) ಒದಗಿಸಿದ ಮಾಹಿತಿಯ ಪ್ರಕಾರ, 2022-2023ರಲ್ಲಿ 18,461 ಮಕ್ಕಳು ಶಾಲೆ ಬಿಟ್ಟಿದ್ದಾರೆ. ಆರ್‌ಟಿಇ ಕಾಯ್ದೆಯಡಿ ಕಡ್ಡಾಯವಾಗಿರುವ 6-14 ವರ್ಷದೊಳಗಿನವರಲ್ಲಿ  ಶೈಕ್ಷಣಿಕ ವರ್ಷದಲ್ಲಿ ಅತಿ ಹೆಚ್ಚು 13,267 ಮಕ್ಕಳಿದ್ದಾರೆ.  ಅವರು ಶಾಲೆಯಿಂದ ಹೊರಗುಳಿದ ಅಥವಾ ಶಾಲೆಗೆ ದಾಖಲಾಗದ ಮಕ್ಕಳನ್ನು ಒಳಗೊಂಡಿರುತ್ತಾರೆ. ಉಳಿದಂತೆ 5,194 ವಿದ್ಯಾರ್ಥಿಗಳು 9,10 ಮತ್ತು ಪಿಯು ತರಗತಿಯ ವಿದ್ಯಾರ್ಥಿಗಳಾಗಿದ್ದಾರೆ. 

  

ಈ ಕುರಿತು ಮಾಹಿತಿ ನೀಡಿದ ಎಸ್‌ಎಸ್‌ಕೆಯ ರಾಜ್ಯ ಯೋಜನಾ ಅಧಿಕಾರಿ ಶ್ರೀಕಾಂತ್, ಜನವರಿಯಲ್ಲಿ  ಶಿಕ್ಷಕರ ನೆರವು ಮತ್ತು ಆಡಳಿತದಲ್ಲಿ ಲಭ್ಯವಿರುವ ಸಂಖ್ಯೆಗಳ ಮೂಲಕ ಈ ಅಧ್ಯಯನ ನಡೆಸಲಾಗಿದ್ದು, ಶಿಕ್ಷಕರ ಜೊತೆಗೆ, ಅಧಿಕಾರಿಗಳು ಇಟ್ಟಿಗೆ ಕಾರ್ಖಾನೆಗಳು, ಹೋಟೆಲ್‌ಗಳು, ಕೊಳೆಗೇರಿಗಳು ಮತ್ತು ಮಕ್ಕಳು ಸಾಮಾನ್ಯವಾಗಿ ಕೆಲಸ ಮಾಡುವ ಇತರ ಪ್ರದೇಶಗಳಿಗೆ ಭೇಟಿ ನೀಡಿದ್ದು, ಮಾಹಿತಿ ಸಂಗ್ರಹಿಸಿರುವುದಾಗಿ ತಿಳಿಸಿದ್ದಾರೆ.

'ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಕ್ಕಳನ್ನು ಮರಳಿ ಶಾಲೆಗೆ ಕಳುಹಿಸುವ ಕುರಿತು ಸರಕಾರ ಕೈಗೊಂಡ ಉಪಕ್ರಮಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಾಥಮಿಕ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ, ಒಮ್ಮೆ ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿರುವ ಮಾಹಿತಿ ಸಿಕ್ಕರೆ ಅವರ ಪೋಷಕರಿಗೆ ನೋಟಿಸ್‌ಗಳನ್ನು ನೀಡಲಾಗುತ್ತದೆ ಮತ್ತು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರಾಗಲು ಒಂದು ತಿಂಗಳ ಗಡುವು ನೀಡಲಾಗಿದೆ ಎಂದು ಹೇಳಿದರು. 

  

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರತಿ ತಿಂಗಳ 1 ಮತ್ತು 15 ರಂದು ಬ್ಲಾಕ್ ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದ ಸಚಿವರು, ಮಕ್ಕಳು ಮತ್ತು ವಲಸೆ ಕುಟುಂಬಗಳಿಗೆ ಮತ್ತು ಶಿಕ್ಷಕರಿಗೆ ವಿಶೇಷ ತರಬೇತಿ ಕಾರ್ಯಕ್ರಮಗಳಿಗಾಗಿ 2021-2022ರ ಅವಧಿಯಲ್ಲಿ  208.08 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.

ವಿದ್ಯಾರ್ಥಿಗಳನ್ನು ಮುಖ್ಯವಾಹಿನಿಗೆ ಸೇರಿಸಲು ಶಿಕ್ಷಕರಿಗೂ ತರಬೇತಿ ನೀಡಬೇಕು ಎಂದು ಯುಎನ್‌ಐಸಿಎಫ್‌ನ ಶಿಕ್ಷಣ ತಜ್ಞ ಶೇಷಗಿರಿ ಕೆ.ಎಂ.ರಾವ್ ಹೇಳಿದ್ದಾರೆ. ಚೈಲ್ಡ್ ರೈಟ್ಸ್ ಟ್ರಸ್ಟ್ (ಸಿಆರ್‌ಟಿ) ನಿರ್ದೇಶಕ ನಾಗಸಿಂಹ ರಾವ್ ಮಾತನಾಡಿ, ಕೋವಿಡ್ ನಂತರದ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಸಮಾಲೋಚನೆ ಮಾಡಬೇಕು."ವರ್ಷದ ಕೊನೆಯಲ್ಲಿ ಸಮೀಕ್ಷೆಗಳನ್ನು ನಡೆಸಬೇಕು ಎಂದು ತಿಳಿಸಿದ್ದಾರೆ. ಶಾಲೆಗಳಿಂದ ಮಕ್ಕಳು ಹೊರಗುಳಿಯುವುದನ್ನು ನಿಲ್ಲಿಸುವುದು ಮಾತ್ರವಲ್ಲ, ಶಿಕ್ಷಕರನ್ನು ನೇಮಿಸಿ ಅವರಿಗೆ ತರಬೇತಿ ನೀಡಬೇಕು ಎಂದು ಶಿಕ್ಷಣ ತಜ್ಞ ಕೆಇ ರಾಧಾಕೃಷ್ಣ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT