ಸಚಿವ ಬೈರತಿ ಸುರೇಶ್‌ 
ರಾಜ್ಯ

ರಾಜ್ಯದಲ್ಲಿ ತ್ಯಾಜ್ಯ ರಾಶಿ ತೆರವುಗೊಳಿಸಲು ನಗರಾಭಿವೃದ್ಧಿ ಇಲಾಖೆಯಿಂದ ಕ್ರಮ: ಬೈರತಿ ಸುರೇಶ್

ನಗರಾಭಿವೃದ್ಧಿ ಇಲಾಖೆಯು ರಾಜ್ಯದಲ್ಲಿ ತ್ಯಾಜ್ಯ ರಾಶಿಯನ್ನು ತೆರವುಗೊಳಿಸಲು ಕ್ರಮಕೈಗೊಳ್ಳಲಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಶುಕ್ರವಾರ ವಿಧಾನಸಭೆಗೆ ತಿಳಿಸಿದ್ದಾರೆ.

ಬೆಳಗಾವಿ: ನಗರಾಭಿವೃದ್ಧಿ ಇಲಾಖೆಯು ರಾಜ್ಯದಲ್ಲಿ ತ್ಯಾಜ್ಯ ರಾಶಿಯನ್ನು ತೆರವುಗೊಳಿಸಲು ಕ್ರಮಕೈಗೊಳ್ಳಲಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಶುಕ್ರವಾರ ವಿಧಾನಸಭೆಗೆ ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ತುಮಕೂರು ನಗರ ಬಿಜೆಪಿ ಶಾಸಕ ಜಿ ಬಿ ಜ್ಯೋತಿ ಗಣೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತ್ಯಾಜ್ಯ ರಾಶಿಯನ್ನು ತೆರವುಗೊಳಿಸಲು ನಮ್ಮ ಇಲಾಖೆ ಕ್ರಮ ಕೈಗೊಳ್ಳಲಿದೆ. ಇಲಾಖೆಯು 'ಸ್ವಚ್ಛ ಭಾರತ್ ಮಿಷನ್'ನ ಎರಡನೇ ಹಂತದ ಅಡಿಯಲ್ಲಿ 2,058 ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ ಎಂದರು.

ಈ ವೇಳೆ ಮಧ್ಯಪ್ರವೇಶಿಸಿದ ಸಕ್ಕರೆ ಸಚಿವ ಶಿವಾನಂದ ಪಾಟೀಲ್, ತಮ್ಮ ಕ್ಷೇತ್ರ ಬಸವನ ಬಾಗೇವಾಡಿಯಲ್ಲಿ 11 ವರ್ಷಗಳಿಂದ ತ್ಯಾಜ್ಯ ರಾಶಿ ಬಿದ್ದಿದ್ದು, ಪ್ರತಿ ಟನ್‌ಗೆ 700-900 ರೂ.ಗೆ ತೆಗೆದುಕೊಳ್ಳುವವರು ಇಲ್ಲ ಎಂದರು.

ದರಗಳು ಏಕರೂಪವಾಗಿರಬೇಕು ಮತ್ತು ಬೆಂಗಳೂರಿಗೆ ಒಂದು ದರ ಮತ್ತು ಬೇರೆಡೆ ಮತ್ತೊಂದು ದರ ಇರಬಾರದು ಎಂದು ಸುರೇಶ್ ಅವರಿಗೆ ಸಲಹೆ ನೀಡಿದರು. ಸುರೇಶ್ ಅವರು ಈ ಕುರಿತು ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಮಾತನಾಡಿ, ತಯಾರಿಸಿದ ಮರಳು ಅಥವಾ ಎಂ-ಸ್ಯಾಂಡ್ ಪರಿಚಯಿಸಿದ ನಂತರ ದೊಡ್ಡ ನಗರಗಳಲ್ಲಿ ನೈಸರ್ಗಿಕ ಮರಳಿನ ಬೇಡಿಕೆ ಕುಸಿದಿದೆ ಎಂದರು.

ಮಂಗಳೂರು ನಗರ(ದಕ್ಷಿಣ) ಬಿಜೆಪಿ ಶಾಸಕ ಡಿ ವೇದವ್ಯಾಸ್ ಕಾಮತ್ ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಎಂ-ಸ್ಯಾಂಡ್ ಮನೆ ನಿರ್ಮಾಣಕ್ಕೆ ಅನರ್ಹವಾಗಿದೆ ಮತ್ತು ಅದನ್ನು ರಸ್ತೆ ಮಾಡಲು ಬಳಸಬಹುದು ಎಂದು ವಾದಿಸಿದರು.

ಕಾಮತ್, ಬೆಂಗಳೂರಿನಂತಹ ಸ್ಥಳಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಎಂ-ಸ್ಯಾಂಡ್ ಬಳಸಲಾಗುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT