ಸಂಗ್ರಹ ಚಿತ್ರ 
ರಾಜ್ಯ

ಮದುವೆಗೆ ನಕಾರ: ಪ್ರೇಯಸಿ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ

ತನ್ನನ್ನು ವಿವಾಹವಾಗಲು ಪ್ರೀತಿಸಿದ ಯುವತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕನೊಬ್ಬ ಆಕೆಯ ಮನೆಯಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಕೆಂಗೇರಿಯಲ್ಲಿ ಬುಧವಾರ ನಡೆದಿದೆ.

ಬೆಂಗಳೂರು: ತನ್ನನ್ನು ವಿವಾಹವಾಗಲು ಪ್ರೀತಿಸಿದ ಯುವತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕನೊಬ್ಬ ಆಕೆಯ ಮನೆಯಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಕೆಂಗೇರಿಯಲ್ಲಿ ಬುಧವಾರ ನಡೆದಿದೆ.

ರಾಕೇಶ್ (27) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಬುಧವಾರ ಮಧ್ಯಾಹ್ನ ಯುವತಿಯ ಮನೆಗೆ ಹೋಗಿರುವ ರಾಕೇಶ್ ಜಗಳ ಮಾಡಿದ್ದಾನೆ. ಮಾತಿನ ಚಕಮಕಿ ವೇಳೆ ಆಕೆಯ ಮನೆಯಲ್ಲಿಯೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.

ಕೂಡಲೇ ಯುವನನ್ನು ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟಗಾಯಗಳ ವಾರ್ಡ್‌ಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಗುರುವಾರ ಮೃತಪಟ್ಟಿದ್ದಾನೆ.

ರಾಕೇಶ್ ಈ ಹಿಂದೆ ತನ್ನ ಪೋಷಕರಿಗೆ ವಿಚಾರ ತಿಳಿಸಿ, ಹುಡುಗಿ ಕೇಳುವಂತೆ ಯುವತಿಯ ಮನೆಗೆ ಕಳುಹಿಸಿದ್ದಾನೆ. ಆದರೆ, ಯುವತಿಯ ಮನೆಯವರು ಮದುವೆಗೆ ನಿರಾಕರಿಸಿದ್ದಾರೆ. ಇದಾದ ಬಳಿಕ ಯುವತಿ ರಾಕೇಶ್ ನಿಂದ ದೂರಾಗಲು ಪ್ರಾರಂಭಿಸಿದ್ದಳು. ಇದರಿಂದ ನೊಂದಿದ್ದ ರಾಕೇಶ್ ಬುಧವಾರ ಮಧ್ಯಾಹ್ನ ಆಕೆಯ ಮನೆಗೆ ಹೋಗಿದ್ದಾನೆ. ಈ ವೇಳೆ ಯುವತಿಯ ಮನೆಯವರು ಬೆದರಿಸಿ, ಹಲ್ಲೆ ನಡೆಸಿದ್ದಾರು ಎಂದು ತಿಳಿದುಬಂದಿದೆ. ಈ ಸಂಬಂಧ ಕೆಂಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT