ಚಲುವರಾಯಸ್ವಾಮಿ ಸಾಂದರ್ಭಿಕ ಚಿತ್ರ 
ರಾಜ್ಯ

ಮುಂಗಾರು ಹಂಗಾಮಿನ ಬೆಳೆಹಾನಿ ಪರಿಹಾರ: ನಾಳೆ ಅಥವಾ ನಾಳಿದ್ದು ಮಾರ್ಗಸೂಚಿ ಬಿಡುಗಡೆ

ಮುಂಗಾರು ಹಂಗಾಮಿ ಭೆಳೆ ಹಾನಿ ಪರಿಹಾರ ಸಂಬಂಧಿಸಿದಂತೆ ನಾಳೆ ಅಥವಾ ನಾಳಿದ್ದು ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಧಾನಪರಿಷತ್ತಿನಲ್ಲಿಂದು ಹೇಳಿದರು.

ಬೆಳಗಾವಿ: ಮುಂಗಾರು ಹಂಗಾಮಿ ಭೆಳೆ ಹಾನಿ ಪರಿಹಾರ ಸಂಬಂಧಿಸಿದಂತೆ ನಾಳೆ ಅಥವಾ ನಾಳಿದ್ದು ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಧಾನಪರಿಷತ್ತಿನಲ್ಲಿಂದು ಹೇಳಿದರು.

ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಶರಣಗೌಡ ಬಯ್ಯಪುರ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರೈತರಿಗೆ ಅವರ ಜಮೀನಿಗೆ ಅನುಗುಣವಾಗಿ 2 ಸಾವಿರ ರೂಪಾಯಿವರೆಗೆ ಬೆಳೆ ಪರಿಹಾರ ಹಣವನ್ನು  ಡಿಬಿಟಿ ಮೂಲಕ ನೇರವಾಗಿ ಜಮೆ ಮಾಡಲಾಗುವುದು. ಈ ಸಂಬಂಧ ಮಾರ್ಗಸೂಚಿ ನಾಳೆ ಅಥವಾ ನಾಳಿದ್ದು ಬಿಡುಗಡೆ ಮಾಡುತ್ತೇವೆ ಎಂದರು.

2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಭತ್ತ, ರಾಗಿ, ಜೋಳ, ಮುಸುಕಿನ ಜೋಳ, ಸಜ್ಜೆ, ತೃಣಧಾನ್ಯಗಳು, ತೊಗರಿ, ಹೆಸರು, ಉದ್ದು, ಹುರುಳಿ, ಅವರೆ, ಅಲಸಂದೆ, ಕಡಲೆ, ಸಾಸಿವೆ, ಸೂರ್ಯಕಾಂತಿ. ಸೋಯಾ ಅವರೆ, ಹತ್ತಿ,ಕಬ್ಬು ಹಾಗೂ ತಂಬಾಕು ಬೆಳೆಗಳು ಹಾಳಾಗಿವೆ.

ಹಾನಿಯಾದ ಬೆಳೆ ಹಾನಿ ಪರಿಹಾರಕ್ಕಾಗಿ ಎನ್ ಡಿಆರ್ ಎಫ್ ನಿಯಮದಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಆರ್ಥಿಕ ನೆರವನ್ನು ನಿರೀಕ್ಷಿಸಲಾಗಿದೆ ಎಂದೂ ಅವರು ಸದನಕ್ಕೆ ತಿಳಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗುಜರಾತ್ ಜನರು ಅನಕ್ಷರಸ್ಥರು.. ಮೋದಿ, ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸಿದ್ದಾರೆ: Mallikarjun Kharge

ಅಂತ್ಯ ಸನ್ನಿಹಿತ?: ಇರಾನ್ ನತ್ತ ಮುಖ ಮಾಡಿದ ಅಮೆರಿಕದ ಅತ್ಯಂತ ವಿಧ್ವಂಸಕ ಕ್ಷಿಪಣಿ

IPL 2026: ಚಿನ್ನಸ್ವಾಮಿಯಲ್ಲಿ ಸಿಕ್ಸರ್​ಗಳ ಮಳೆ; CSK ವಿರುದ್ಧ ದಾಖಲೆಯ 250 ರನ್ ಪೇರಿಸಿದ RCB

IPL 2026: ರೋಹಿತ್ ಶರ್ಮಾ ದಾಖಲೆ ಧೂಳಿಪಟ ಮಾಡಿದ Virat Kohli; ಮತ್ತೆ ನಂಬರ್ 1 ಪಟ್ಟ!

IPL 2026: ಕೊನೆಗೂ ಗೆದ್ರಲ್ಲಪ್ಪಾ..; SRH ವಿರುದ್ಧ LSG ಭರ್ಜರಿ ಜಯ; ಮೈದಾನದಲ್ಲೇ Rishabh Pant ಬಿಗಿದಪ್ಪಿದ Sanjiv Goenka

SCROLL FOR NEXT