ಸ್ಪೀಕರ್ ಯುಟಿ.ಖಾದರ್ 
ರಾಜ್ಯ

ವಿಧಾನಸಭೆಯಿಂದ ಸಾವರ್ಕರ್ ಫೋಟೋ ತೆಗೆಯುವ ಯಾವುದೇ ಪ್ರಸ್ತಾವನೆ ಬಂದಿಲ್ಲ: ಸ್ಪೀಕರ್ ಯುಟಿ.ಖಾದರ್

ವಿಧಾನಸಭೆಯ ಸಭಾಂಗಣದಲ್ಲಿನ ಸಾವರ್ಕರ್ ಭಾವಚಿತ್ರ ತೆರವು ಮಾಡುವ ಸಂಬಂಧ ಯಾವುದೇ ಪ್ರಸ್ತಾವ ಬಂದಿಲ್ಲ ಎಂದು ಸ್ಪೀಕರ್ ಯು.ಟಿ.‌ ಖಾದರ್ ಅವರು ಗುರುವಾರ ಹೇಳಿದರು.

ಬೆಳಗಾವಿ: ವಿಧಾನಸಭೆಯ ಸಭಾಂಗಣದಲ್ಲಿನ ಸಾವರ್ಕರ್ ಭಾವಚಿತ್ರ ತೆರವು ಮಾಡುವ ಸಂಬಂಧ ಯಾವುದೇ ಪ್ರಸ್ತಾವ ಬಂದಿಲ್ಲ ಎಂದು ಸ್ಪೀಕರ್ ಯು.ಟಿ.‌ ಖಾದರ್ ಅವರು ಗುರುವಾರ ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, "ಸಾವರ್ಕರ್ ಭಾವಚಿತ್ರ ತೆರವುಗೊಳಿಸಲು ಪ್ರಸ್ತಾವ ಬಂದರೆ ಆಗ ಪರಿಶೀಲನೆ ನಡೆಸಬಹುದು. ಆದರೆ, ಎಲ್ಲೋ ಬಾಲ್ ಬರುತ್ತೇ ಎಂದು ಈಗಲೇ ಬ್ಯಾಟ್ ಬೀಸಿದರೆ ಆಗುತ್ತಾ? ಸಂವಿಧಾನ ಬದ್ಧವಾಗಿ ಏನು ಮಾಡಬೇಕು ಅದನ್ನು ಮಾಡುತ್ತೇನೆ" ಎಂದು ಹೇಳಿದರು.

"ನನಗೆ ಸಚಿವರೂ, ಪ್ರತಿಪಕ್ಷದವರೂ ಎಂಬ ಬೇಧವಿಲ್ಲ. ಎಲ್ಲರೂ ಒಂದೇ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರವರ ಹೇಳಿಕೆ ನೀಡಲು ಎಲ್ಲರಿಗೂ ಅವಕಾಶವಿದೆ. ಯಾವುದೇ ವಿಚಾರವಿದ್ದರೂ ಸಂವಿಧಾನ ಬದ್ಧವಾಗಿ ಕರ್ತವ್ಯ ನಿರ್ವಹಿಸುತ್ತೇನೆ" ಎಂದು ತಿಳಿಸಿದರು.

ವಿಧಾನಸಭೆ ಸಭಾಂಗಣದ ಒಳಗೆ ಮೇಲ್ಭಾಗದಲ್ಲಿ ಬಸವಣ್ಣನ ಪೋಟೋ, ಕೆಳಗೆ ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್, ಡಾ.ಬಿ.ಆರ್.ಅಂಬೇಡ್ಕರ್, ಮಹಾತ್ಮ ಗಾಂಧಿ, ವಲ್ಲಭಭಾಯಿ ಪಟೇಲ್ ಭಾವಚಿತ್ರಗಳ ಜೊತೆಗೆ ಸಾವರ್ಕರ್ ಭಾವಚಿತ್ರವನ್ನು 2022ರ ಡಿಸೆಂಬರ್ 19ರಂದು ಅಂದಿನ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದಲ್ಲಿ ಬಿಜೆಪಿ ಸರಕಾರ ಅನಾವರಣಗೊಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!