ಸಚಿವ. ಬಿ. ನಾಗೇಂದ್ರ 
ರಾಜ್ಯ

ಪ್ಯಾರೀಸ್ ಒಲಂಪಿಕ್ಸ್: ಅಮೃತ ಕ್ರೀಡಾ ದತ್ತು ಯೋಜನೆಯಡಿ ರಾಜ್ಯದ 75 ಕ್ರೀಡಾಪಟುಗಳ ಆಯ್ಕೆ

ಮುಂದಿನ ವರ್ಷ ಪ್ಯಾರೀಸ್ ನಲ್ಲಿ ನಡೆಯುವ ಒಲಂಪಿಕ್ಸ್ ನಲ್ಲಿ ಪದಕ ವಿಜೇತ ಸಾಮರ್ಥ್ಯವುಳ್ಳ ಪ್ಯಾರಾ ಕ್ರೀಡಾಪಟುಗಳನ್ನೊಳಗೊಂಡಂತೆ 75 ಕ್ರೀಡಾಪಟುಗಳನ್ನು ರಾಜ್ಯದಲ್ಲಿ ಅಮೃತ ಕ್ರೀಡಾ ದತ್ತು ಯೋಜನೆಯಡಿ ಆಯ್ಕೆ ಮಾಡಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ವಿಧಾನಪರಿಷತ್ತಿನಲ್ಲಿಂದು ತಿಳಿಸಿದರು.

ಬೆಳಗಾವಿ: ಮುಂದಿನ ವರ್ಷ ಪ್ಯಾರೀಸ್ ನಲ್ಲಿ ನಡೆಯುವ ಒಲಂಪಿಕ್ಸ್ ನಲ್ಲಿ ಪದಕ ವಿಜೇತ ಸಾಮರ್ಥ್ಯವುಳ್ಳ ಪ್ಯಾರಾ ಕ್ರೀಡಾಪಟುಗಳನ್ನೊಳಗೊಂಡಂತೆ 75 ಕ್ರೀಡಾಪಟುಗಳನ್ನು ರಾಜ್ಯದಲ್ಲಿ ಅಮೃತ ಕ್ರೀಡಾ ದತ್ತು ಯೋಜನೆಯಡಿ ಆಯ್ಕೆ ಮಾಡಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ವಿಧಾನಪರಿಷತ್ತಿನಲ್ಲಿಂದು ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಸ್.ರುದ್ರೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ಯಾರೀಸ್‌ನಲ್ಲಿ ನಡೆಯುವ ಒಲಂಪಿಕ್ಸ್ ನಲ್ಲಿ ಭಾಗವಹಿಸಲು ಸಹಾಯವಾಗುವಂತೆ ರಾಜ್ಯದ ಕ್ರೀಡಾಪಟುಗಳಿಗೆ 2021-22 ನೇ ಸಾಲಿನಿಂದ ಅಮೃತ ಕ್ರೀಡಾ ದತ್ತು ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಒಲಂಪಿಕ್ಸ್ ಸೇರಿದಂತೆ ಅಂತಾರಾಷ್ಟಿಯ ಮಟ್ಟದಲ್ಲಿ ಸಾಧನೆ ಮಾಡುವ ಸಾಮರ್ಥ್ಯ ಹೊಂದಿರುವ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ, ಪೋಷಿಸಿ , ಸಾಧನೆಗೆ ಅಗತ್ಯವಾದ ಬೆಂಬಲ ವ್ಯವಸ್ಥೆ ನೀಡುವುದು ಈ ಯೋಜನೆಯ ಗುರಿಯಾಗಿದೆ ಎಂದರು. 

ಈ ಯೋಜನೆಯ ಫಲಾನುಭವಿಗಳಿಗೆ ತರಬೇತಿಗಾಗಿ,ಕ್ರೀಡಾ ವಿಜ್ಞಾನದ ಬೆಂಬಲ, ಪೌಷ್ಟಿಕ ಆಹಾರಕ್ಕಾಗಿ, ತರಬೇತಿಗೆ ಅಗತ್ಯವಿರುವ ಕ್ರೀಡಾ ಕಿಟ್ ಖರೀದಿಸಲು, ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ದೈನಂದಿನ ಅಗತ್ಯಗಾಗಿ ಮತ್ತು ಇತರೆ ವೆಚ್ಚಗಳಿಗಾಗಿ ತಲಾ ರೂ. 10 ಲಕ್ಷ ವಾರ್ಷಿಕ ಗರಿಷ್ಠ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT