ಸಂಗ್ರಹ ಚಿತ್ರ 
ರಾಜ್ಯ

ಕುಂಟುತ್ತಿದೆಯೇ ಡಿಜಿಟಲ್ ಕ್ರಾಂತಿ: ರಾಜ್ಯದ ಈ ಗ್ರಾಮದಲ್ಲಿ ನೆಟ್ ವರ್ಕ್ ಸೌಲಭ್ಯವೇ ಇಲ್ಲ!

ಕೈಗೆಟಕುವ ದರದಲ್ಲಿ ಇಂಟರ್ನೆಟ್ ಸೌಕರ್ಯ, ಅಗ್ಗದ ಹ್ಯಾಂಡ್‌ಸೆಟ್‌ಗಳು, ಅಗ್ಗವಾಗಿರುವ ಕಂಪ್ಯೂಟರ್... ಈ ಎಲ್ಲಾ ಡಿಜಿಟಲ್ ಕ್ರಾಂತಿ ನಡೆದಿದ್ದು ಕೇವಲ ನಗರ ಪ್ರದೇಶದಲ್ಲಿ ಮಾತ್ರವೇ?...

ಬೆಂಗಳೂರು: ಕೈಗೆಟಕುವ ದರದಲ್ಲಿ ಇಂಟರ್ನೆಟ್ ಸೌಕರ್ಯ, ಅಗ್ಗದ ಹ್ಯಾಂಡ್‌ಸೆಟ್‌ಗಳು, ಅಗ್ಗವಾಗಿರುವ ಕಂಪ್ಯೂಟರ್... ಈ ಎಲ್ಲಾ ಡಿಜಿಟಲ್ ಕ್ರಾಂತಿ ನಡೆದಿದ್ದು ಕೇವಲ ನಗರ ಪ್ರದೇಶದಲ್ಲಿ ಮಾತ್ರವೇ?...

ಕುಂದಾಪುರ ತಾಲೂಕಿನ ಅಜ್ರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಳಬೇರು ಗ್ರಾಮಕ್ಕೆ ಇನ್ನೂ ನೆಟ್ ಸಂಪರ್ಕ ಸೌಲಭ್ಯವೇ ಸಿಕ್ಕಿಲ್ಲ. ಗ್ರಾಮ ಪಶ್ಚಿಮ ಘಟ್ಟಗಳ ಮಧ್ಯೆ ಇರುವುದೇ ಇದಕ್ಕೆ ಕಾರಣವೆಂದೂ ಹೇಳಲಾಗುತ್ತಿದೆ.

ಗ್ರಾಮದ ನಿವಾಸಿ ಸುರೇಂದ್ರ ಮಾತನಾಡಿ, ಫೋನ್'ನಲ್ಲಿ ಮಾತನಾಡಬೇಕೆಂದರೆ ಗ್ರಾಮದ ಜನರು ಸುಮಾರು ಎರಡು ಕಿ.ಮೀ. ದೂರ ಹೋಗಬೇಕಾಗಿದ. ಇನ್ನು ಇಂಟರ್ನೆಟ್ ಸೇವೆ ಪಡೆಯಬೇಕೆಂದರೆ ಇನ್ನೂ ದೂರ ಹೋಗಬೇಕಾಗುತ್ತಿದೆ ಎಂದು ಹೇಳಿದ್ದಾರೆ.

ಯಳಬೇರು ಗ್ರಾಮದಿಂದ ನಾಲ್ಕು ಕಿ.ಮೀ ದೂರದಲ್ಲಿರುವ ಅಜ್ರಿಗೆ ಹೋದರೆ ಮಾತ್ರ ಇಂಟರ್ ನೆಟ್ ಸೇವೆ ಸಿಗುತ್ತದೆ. ಉತ್ತಮ ಸಂಪರ್ಕ ಬೇಕೆಂದರೆ ಸಿದ್ದಾಪುರಕ್ಕೆ ಹೋಗಬೇಕು.

ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಕ್ಷೇತ್ರಕ್ಕೆ ಬರುವುದರಿಂದ ಬೈಂದೂರು ಮತ್ತು ಸುತ್ತಮುತ್ತ ಪ್ರದೇಶಗಳಿಗೆ ಇಂಟರ್ನೆಟ್ ಸಂಪರ್ಕವನ್ನು ಒದಗಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೆ, ಯಳಬೇರು ಗ್ರಾಮದಲ್ಲಿ ಇನ್ನೂ ಈ ಸೇವೆಗಳು ಲಭ್ಯವಾಗುವಂತೆ ಮಾಡಿಲ್ಲ. ಗ್ರಾಮಕ್ಕೆ ಬಿಎಸ್‌ಎನ್‌ಎಲ್‌ನ ಟವರ್‌ ಮಂಜೂರು ಮಾಡಲಾಗಿದೆ. ಆದರೂ ಇನ್ನೂ ಸ್ಫಾಪನೆಗೊಂಡಿಲ್ಲ ಎಂದು ತಿಳಿದುಬಂದಿದೆ.

ಯಳಬೇರುವಿನಲ್ಲಿ ಸುಮಾರು 70 ಮನೆಗಳಿವೆ. ಗ್ರಾಮದ ವಿದ್ಯಾರ್ಥಿಗಳು ಸಿದ್ದಾಪುರ, ಕುಂದಾಪುರ, ಶಂಕರನಾರಾಯಣ ಮತ್ತು ಕೋಟೇಶ್ವರ ಪಟ್ಟಣಗಳ ಶಾಲಾ-ಕಾಲೇಜುಗಳಿಗೆ ವಿದ್ಯಾಭ್ಯಾಸಕ್ಕಾಗಿ ಹೋಗುತ್ತಾರೆಂದು ಗ್ರಾಮದ ನಿವಾಸಿಗಳು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿ.ವೈ.ರಾಘವೇಂದ್ರ ಅವರು, ಬೈಂದೂರು ತಾಲೂಕಿನಲ್ಲಿ 25 ಸ್ಥಳಗಳಿಗೆ 4ಜಿ ಟವರ್ ಮಂಜೂರಾಗಿದೆ. ಟವರ್‌ಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಯಳಬೇರುವಿನಲ್ಲಿ ಸೂಕ್ತ ನಿವೇಶನದ ಕೊರತೆಯಿಂದ ಟವರ್ ನಿರ್ಮಿಸಲು ಸಾಧ್ಯವಾಗಿಲ್ಲ. ಸಂಪರ್ಕ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT