ರಾಜ್ಯ

ಚಿತ್ರದುರ್ಗ: ಹೊಳಲ್ಕೆರೆ ಬಳಿ ಬಸ್ ಪಲ್ಟಿಯಾಗಿ ಓರ್ವ ಸಾವು, ಮೂವರ ಸ್ಥಿತಿ ಗಂಭೀರ

Ramyashree GN

ಚಿತ್ರದುರ್ಗ: ದಾವಣಗೆರೆಯಲ್ಲಿ ನಿಶ್ಚಯವಾಗಿದ್ದ ಮದುವೆಗೆ ಜನರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಶನಿವಾರ ಸಂಜೆ ಹೊಳಲ್ಕೆರೆ ತಾಲ್ಲೂಕಿನ ಆವಿನಹಟ್ಟಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಬಸ್ ಹೊಸದುರ್ಗ ತಾಲ್ಲೂಕಿನ ಸೀಗೆಹಟ್ಟಿ ಗ್ರಾಮದಿಂದ ದಾವಣಗೆರೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ 40 ವರ್ಷದ ಮಂಜುನಾಥ್ ಎಂಬುವವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹೊಳಲ್ಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಸದುರ್ಗಾದಿಂದ ಹೊಳಲ್ಕೆರೆ ಕಡೆಗೆ ಹೋಗುತ್ತಿದ್ದ ಬಸ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್ಸಿನ ಕೆಳಗೆ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಮೂರು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಅಪಘಾತ ಸ್ಥಳವು ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುತ್ತದೆ.

SCROLL FOR NEXT