ಬೆಳಗಾವಿ ಚಳಿಗಾಲ ಅಧಿವೇಶನ. 
ರಾಜ್ಯ

ಮುಂದಿನ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಹೆಚ್ಚು ಅನುದಾನ: 3 ಸಾವಿರ ಕೆಪಿಎಸ್ ಶಾಲೆ, ಸ್ಪೋಕನ್‌ ಇಂಗ್ಲಿಷ್‌ ತರಬೇತಿ

ಈ ಹಿಂದಿನ ಸರ್ಕಾರಗಳು ಉನ್ನತ ಶಿಕ್ಷಣಕ್ಕೆ ಅಲ್ಪಸ್ವಲ್ಪ ಅನುದಾನ ಮೀಸಲಿಟ್ಟಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು, ಮುಂದಿನ ಬಜೆಟ್‌ನಲ್ಲಿ ಅನುದಾನ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿರುವುದಾಗಿ ಸದನಕ್ಕೆ ತಿಳಿಸಿದರು.

ಬೆಳಗಾವಿ: ಈ ಹಿಂದಿನ ಸರ್ಕಾರಗಳು ಉನ್ನತ ಶಿಕ್ಷಣಕ್ಕೆ ಅಲ್ಪಸ್ವಲ್ಪ ಅನುದಾನ ಮೀಸಲಿಟ್ಟಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು, ಮುಂದಿನ ಬಜೆಟ್‌ನಲ್ಲಿ ಅನುದಾನ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿರುವುದಾಗಿ ಸದನಕ್ಕೆ ತಿಳಿಸಿದರು.

ದೇಶದಲ್ಲಿ ಎನ್‌ಇಪಿ ಅನುಷ್ಠಾನದ ಕುರಿತು ಪ್ರತಿಪಕ್ಷ ಬಿಜೆಪಿ ಪ್ರಸ್ತಾಪಿಸಿದ ಚರ್ಚೆಗೆ ಉತ್ತರ ನೀಡಿದ ಉನ್ನತ ಶಿಕ್ಷಣ ಸಚಿವರು, ಉನ್ನತ ಶಿಕ್ಷಣಕ್ಕೆ ಒಟ್ಟು ಬಜೆಟ್‌ನಲ್ಲಿ ಶೇ.3ರಿಂದ ಶೇ.1ರಷ್ಟು ಮಾತ್ರ ಮೀಸಲಿಡಲಾಗಿದೆ ಎಂದರು.

ಈ ಸತ್ಯವನ್ನು ಮನಗಂಡ ನಾನು ಸಚಿವನಾಗಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಅನುದಾನ ಮೀಸಲಿಡುವ ಮಹತ್ವದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಮನವರಿಕೆ ಮಾಡಿಕೊಟ್ಟಿದ್ದೇನೆ. ಮುಂಬರುವ ಬಜೆಟ್‌ನಲ್ಲಿ ಅನುದಾನ ಹೆಚ್ಚಿಸಲು ಸಿಎಂ ಒಪ್ಪಿಗೆ ನೀಡಿದ್ದಾರೆ ಎಂದರು.

ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್‌ ಇಂಗ್ಲಿಷ್‌
ಉತ್ತಮ ಉದ್ಯೋಗಾವಕಾಶಕ್ಕಾಗಿ ಕರ್ನಾಟಕದ ವಿದ್ಯಾರ್ಥಿಗಳು ಇಂಗ್ಲಿಷ್ ಭಾಷೆ ಸುಧಾರಿಸಿಕೊಳ್ಳಬೇಕಾಗಿದೆ ಎಂದು ಹೇಳಿದ ಸಚಿವರು, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ಕಲಿಸಲು ರಾಜ್ಯ ಸರ್ಕಾರ ವಾಧ್ವಾನಿ ಫೌಂಡೇಶನ್ ಎಂಬ NGO ನೊಂದಿಗೆ ಒಪ್ಪಂದ ಮಾಡಿಕೊಳ್ಳಲು ನಿರ್ಧರಿಸಿದೆ ಎಂದು ಹೇಳಿದರು.

ಶೀಘ್ರದಲ್ಲೇ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉದ್ಯೋಗ ಹುಡುಕಲು ಇಂಗ್ಲಿಷ್ ಕಲಿಯಲು ಸಹಾಯ ಮಾಡುವ ಎಂಒಯುಗೆ ಸಹಿ ಹಾಕಲಾಗುವುದು ಎಂದು ಅವರು ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಬದಲಿಗೆ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುವ ನಿರ್ಧಾರವನ್ನು ಸಮರ್ಥಿಸಿಕೊಂಡ ಸಚಿವರು, ಎನ್‌ಇಪಿಯು ಕರ್ನಾಟಕಕ್ಕೆ ಹೊಂದಿಕೆಯಾಗದ, ಕೆಲವು ದೇಶಗಳಲ್ಲಿ ಜಾರಿಗೊಳಿಸಲಾದ ನೀತಿಯ ನಕಲು ಹೊರತು ಬೇರೇನೂ ಅಲ್ಲ ಎಂದು ಹೇಳಿದರು.

“ಕರ್ನಾಟಕದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಮತ್ತು ಉದ್ಯೋಗಗಳನ್ನು ಒದಗಿಸುವಲ್ಲಿ ನಾವು ಇನ್ನೂ ಹಿಂದುಳಿದಿದ್ದೇವೆ. ಇಂಜಿನಿಯರಿಂಗ್ ವಿಭಾಗದ ವಿವಿಧ ವಿಭಾಗಗಳ ಎಲ್ಲಾ ಸೀಟುಗಳನ್ನು ಭರ್ತಿ ಮಾಡಲು ನಮಗೆ ಇನ್ನೂ ಸಾಧ್ಯವಾಗುತ್ತಿಲ್ಲ. ಇಂಜಿನಿಯರಿಂಗ್ ಕಾಲೇಜುಗಳ ವಿವಿಧ ವಿಭಾಗಗಳಲ್ಲಿ ಪ್ರತಿ ವರ್ಷ ಹಲವು ಸೀಟುಗಳು ಖಾಲಿ ಉಳಿಯುತ್ತಿವೆ. ಆದ್ದರಿಂದ, ನಮ್ಮ ಆದ್ಯತೆಯು ಕಾಲೇಜುಗಳಲ್ಲಿ ಮೂಲಸೌಕರ್ಯಗಳನ್ನು ಸುಧಾರಿಸುವುದು ಮಾತ್ರವಲ್ಲದೆ ಉದ್ಯೋಗಾವಕಾಶವನ್ನು ಹೆಚ್ಚಿಸುವುದು  ಎಂದು ಅವರು ಹೇಳಿದರು.

3 ವರ್ಷಗಳಲ್ಲಿ 3000 ಕೆ.ಪಿ.ಎಸ್ ಶಾಲೆ ಆರಂಭ
ಇದೇ ವಿಷಯದ ಕುರಿತು ವಿವರಗಳನ್ನು ಹಂಚಿಕೊಂಡ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಸ್ಕೂಲ್(ಕೆಪಿಎಸ್) ತೆರೆಯಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

ಬಿಹಾರದಲ್ಲಿ ರಾಜಕೀಯ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?

'ದೇಹದ ಮೇಲೆ ಕ್ಯಾಮೆರಾ Zoom': ಪಾಪರಾಜಿಗಳ ವಿರುದ್ಧ ಸಪ್ತಮಿಗೌಡ ಕಿಡಿ; Rukmini Vasanth ಬೆಂಬಲ!

ಇರಾನ್ ಹಡಗಿನ ಮೇಲೆ ದಾಳಿ; 101 ಜನ ನಾಪತ್ತೆ; ಅಮೆರಿಕದೊಂದಿಗೆ 'ಸಂಧಾನ ಇಲ್ಲ', ಯುದ್ಧ ಮುಂದುವರಿಯಲಿದೆ! Video

T20 ವಿಶ್ವಕಪ್ 2026: 'ಚಿಂತೆ ಬೇಡ.. ಭಾರತೀಯ ಅಭಿಮಾನಿಗಳ ಸೈಲೆಂಟ್ ಮಾಡುತ್ತೇವೆ'; Sam Curran ಅತ್ಯುತ್ಸಾಹ!

SCROLL FOR NEXT