ಮಧು ಬಂಗಾರಪ್ಪ 
ರಾಜ್ಯ

ಮುಂದಿನ ವರ್ಷದಿಂದಲೇ ಶಾಲಾ ಮಕ್ಕಳಿಗೆ ಉಚಿತ ʻಸೈಕಲ್‌ ಭಾಗ್ಯʼ: ಸಚಿವ ಮಧು ಬಂಗಾರಪ್ಪ ಭರವಸೆ

ಮುಂದಿನ ವರ್ಷದಿಂದಲೇ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.

ಬೆಂಗಳೂರು: ಮುಂದಿನ ವರ್ಷದಿಂದಲೇ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆಗೆ ಅವರು ಉತ್ತರಿಸಿದರು. ಶಾಲಾ ಮಕ್ಕಳಿಗೆ ಯಾಕೆ ಸೈಕಲ್ ಕೊಡ್ತಿಲ್ಲ? ಬಿಜೆಪಿ‌ ಸರ್ಕಾರ ಸೈಕಲ್ ನಿಲ್ಲಿಸಿತ್ತು ಒಪ್ಪುತ್ತೇನೆ? ಅದಕ್ಕೆ ಜನ ನಮ್ಮನ್ನ ಇಲ್ಲಿಗೆ ಕೂರಿಸಿದ್ದಾರೆ.

ಆದ್ರೆ ಈ ಸರ್ಕಾರಕ್ಕೆ ಸೈಕಲ್ ಕೊಡಲು ಹಣದ ಕೊರತೆ ಇದೆಯಾ? ಎಂದು ಪ್ರಶ್ನೆ ಮಾಡಿದರು. ಮಕ್ಕಳಿಗೆ ಶೂ, ಸಾಕ್ಸ್, ಸಮವಸ್ತ್ರಕ್ಕೆ 100 ರೂ. ಕೊಡ್ತಿದ್ದಾರೆ. ಖರ್ಚೀಫ್ ಗೆ ಕೊಡುವಷ್ಟು ಹಣ ಕೊಡ್ತಿದ್ದಾರೆ. ಇಷ್ಟು ಹಣ ಶೂ, ಸಾಕ್ಸ್, ಸಮವಸ್ತ್ರಕ್ಕೆ ಸಾಕಾಗುತ್ತದೆಯೇ? ಶೂ, ಸಾಕ್ಸ್ ಹಣ ಹೆಚ್ಚಳ ಮಾಡಬೇಕು ಅಂತ ಒತ್ತಾಯ ಮಾಡಿದರು.

ಇದಕ್ಕೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, 2023-24ನೇ ಸಾಲಿನಲ್ಲಿ 55,43,828 ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ನೀಡಲಾಗಿದೆ. 45,45,749 ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ, ಸಾಕ್ಸ್ ವಿತರಿಸಲಾಗಿದೆ. ವಿದ್ಯಾರ್ಥಿಗಳಿಗೆ ಸೈಕಲ್ ಹಿಂದಿನ ಸರ್ಕಾರ ಕೊಡೋದು ನಿಲ್ಲಿಸಿದೆ. ನಾನು ಈಗಾಗಲೇ ಸಿಎಂ ಜೊತೆಗೆ ಮಾತಾಡಿದ್ದೇನೆ. ಮುಂದಿನ ವರ್ಷದಿಂದಲೇ 8ನೇ ತರಗತಿ ಮಕ್ಕಳಿಗೆ ಸೈಕಲ್ ಕೊಡುವ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ನೀಡಿದರು.

1-8ನೇ ತರಗತಿ ಮಕ್ಕಳಿಗೆ ನೀಡಲಾಗುತ್ತಿದ್ದ ಮೊಟ್ಟೆ, ಚಿಕ್ಕಿಯನ್ನು ನಮ್ಮ ಸರ್ಕಾರ ಬಂದ್ಮೇಲೆ 9 ಮತ್ತು 10ನೇ ತರಗತಿಗೂ ವಿಸ್ತರಿಸಿದ್ದೇವೆ. ಕಳೆದ ಸರ್ಕಾರದ ಅವಧಿಯಲ್ಲಿ ಸಮವಸ್ತ್ರ ಖರೀದಿಯಲ್ಲಿ ಕ್ವಾಲಿಟಿ ಸಮಸ್ಯೆ ಆಗಿದೆ. ಹಾಗಾಗಿ ಒಪನ್ ಟೆಂಡರ್ ಮೂಲಕ ಸಮವಸ್ತ್ರ ಖರೀದಿ ಆಗುತ್ತದೆ. ಈ ವರ್ಷದ ಟೆಂಡರ್ ಪ್ರಕ್ರಿಯೆ ಮುಗಿದು ಹೋಗಿದೆ. ಮುಂದಿನ ವರ್ಷದಿಂದ ಉತ್ತಮ ಕ್ವಾಲಿಟಿ ಸಮವಸ್ತ್ರ ನೀಡಲು ಕ್ರಮವಹಿಸುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಳ್ಳಾರಿ ಫೈರಿಂಗ್: ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಪರಿಹಾರ

ಆಗ Navy Seal.. ಈಗ ಡೆಲ್ಟಾ ಫೋರ್ಸ್: Venezuela ಅಧ್ಯಕ್ಷರ ಹೆಡೆಮುರಿ ಕಟ್ಟಿದ ಅಮೆರಿಕದ ಸೀಕ್ರೆಟ್ ಸೇನೆ! Video

ಕೆಟ್ಟ ದೃಷ್ಟಿಯಿಂದ 'ಮುಸ್ಲಿಂ ಮಹಿಳೆ' ಮುಟ್ಟವವರ ಕೈ ಕತ್ತರಿಸುತ್ತೇನೆ: AIMIM ನಾಯಕನ ಬೆದರಿಕೆ!

ʻರಿಪಬ್ಲಿಕ್ ಆಫ್ ಬಳ್ಳಾರಿʼಗೆ ಮತ್ತೆ ಅವಕಾಶ ನೀಡಲ್ಲ; ರೆಡ್ಡಿ ಕೋಟೆ ನಿರ್ಮಿಸಿಕೊಂಡಿದ್ದಾರೆ, ಅವರನ್ನು ಕೊಲ್ಲಲು ಸಾಧ್ಯವೇ?

ಹಾವೇರಿ: ಸುಂಟರಗಾಳಿಗೆ ಕುಸಿದ ಬೃಹತ್ ಪೆಂಡಾಲ್‌; ಸತೀಶ್ ಜಾರಕಿಹೊಳಿ ಸ್ವಲ್ಪದರಲ್ಲೇ ಪಾರು!

SCROLL FOR NEXT