ಸಂಗ್ರಹ ಚಿತ್ರ 
ರಾಜ್ಯ

ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ: ಸ್ಥಳಕ್ಕೆ ಪೊಲೀಸರ ದೌಡು, ತನಿಖೆ ಚುರುಕು

ಬೆಂಗಳೂರಿನ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂದು ನಿಗೂಢ ತಾಣದಿಂದ ಈಮೇಲ್‌ ಮಾಡಿ ಭಾರಿ ಆತಂಕಕ್ಕೆ ಕಾರಣವಾದ ಘಟನೆ ಬೆನ್ನಲ್ಲೇ ಇದೀಗ ರಾಜ್ಯದ ಶಕ್ತಿ ಕೇಂದ್ರಗಳಲ್ಲಿ ಒಂದಾದ ರಾಜ ಭವನಕ್ಕೂ ಬಾಂಬ್‌ ಬೆದರಿಕೆ ಕರೆ ಬಂದಿದೆ.

ಬೆಂಗಳೂರು: ಬೆಂಗಳೂರಿನ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂದು ನಿಗೂಢ ತಾಣದಿಂದ ಈಮೇಲ್‌ ಮಾಡಿ ಭಾರಿ ಆತಂಕಕ್ಕೆ ಕಾರಣವಾದ ಘಟನೆ ಬೆನ್ನಲ್ಲೇ ಇದೀಗ ರಾಜ್ಯದ ಶಕ್ತಿ ಕೇಂದ್ರಗಳಲ್ಲಿ ಒಂದಾದ ರಾಜ ಭವನಕ್ಕೂ ಬಾಂಬ್‌ ಬೆದರಿಕೆ ಕರೆ ಬಂದಿದೆ.

ರಾಜಭವನದಲ್ಲಿ ಬಾಂಬ್ ಇಡಲಾಗಿದೆ ಎಂದು ಸೋಮವಾರ ರಾತ್ರಿ ಕರೆ ಮಾಡಿ ತಿಳಿಸಲಾಗಿದೆ. ರಾತ್ರಿ 11.30ರ ಸುಮಾರಿಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ವ್ಯಕ್ತಿಯೊಬ್ಬ ಹೇಳಿದ್ದಾನೆಂದು ತಿಳಿದುಬಂದಿದೆ.

ಬೆದರಿಕೆ ಕರೆ ಬಂದ ಕೂಡಲೇ ಸಮೀಪದ ಪೊಲೀಸ್‌ ಠಾಣೆಗೆ ಮಾಹಿತಿ ನೀಡಲಾಗಿದ್ದು, ಕೂಡಲೇ ಪೊಲೀಸರು ಬಾಂಬ್‌ ಸ್ಕ್ವಾಡ್‌ ಮತ್ತು ಡಾಗ್‌ ಸ್ಕ್ವಾಡ್‌ನೊಂದಿಗೆ ಅಲ್ಲಿಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ರಾಜಭವನಕ್ಕೆ ಹೋಗಿ ಪರಿಶೀಲನೆ ನಡೆಸಿದ ಪೊಲೀಸರಿಗೆ ಸದ್ಯಕ್ಕೆ ಯಾವುದೇ ಅನುಮಾನಾಸ್ಪದ ವಸ್ತುಗಳು ಸಿಕ್ಕಿಲ್ಲ. ಆದರೆ, ಸ್ಥಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ರಾಜಭವನ ಸ್ಥಳ ವಿಶಾಲವಾದ ಜಾಗವಾಗಿದ್ದು, ಯಾವ ಭಾಗದಲ್ಲಿ ಇಡಲಾಗಿದೆ ಎಂಬ ಮಾಹಿತಿಯನ್ನು ವ್ಯಕ್ತಿ ನೀಡಿಲ್ಲ. ಈ ನಡುವೆ, ರಾಜಭವನಕ್ಕೆ ಯಾವ ನಂಬರ್‌ನಿಂದ ಕರೆ ಮಾಡಲಾಗಿದೆ. ಕರೆ ಮಾಡಿದ ವ್ಯಕ್ತಿ ಯಾರು ಎಂಬ ವಿಚಾರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಶಂಕಿತ ವ್ಯಕ್ತಿ ವಶಕ್ಕೆ
ಈ ನಡುವೆ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಂಕಿತನನ್ನು ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಪೊಲೀಸರು ವಶಕ್ಕೆ ಪಡೆದುಕೊಂಡಿರುವ ವ್ಯಕ್ತಿ ಯಾರು? ಆತನ ಹಿನ್ನೆಲೆ ಏನು ಎಂಬುದರ ಮಾಹಿತಿ ತಿಳಿದು ಬಂದಿಲ್ಲ. ಸದ್ಯ ವಶದಲ್ಲಿರೋ ವ್ಯಕ್ತಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಬೆದರಿಕೆ ಕರೆ ಬೆನ್ನಲ್ಲೇ ರಾಜಭವನದ ಬಳಿ ಭದ್ರತಾ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ರಾಜಭವನದಲ್ಲಿ ಕೆಲಸ ಮಾಡುವ ಸಿಬ್ಬಂದಿಯನ್ನು ಪರಿಶೀಲನೆ ನಡೆಸಿ ಒಳಗಡೆ ಕಳುಹಿಸಲಾಗುತ್ತಿದೆ.

ಇತ್ತೀಚೆಗಷ್ಟೇ ಇದೇ ರೀತಿಯ ಬಾಂಬ್ ಬೆದರಿಕೆ ಕರೆ ಬೆಂಗಳೂರಿನಾದ್ಯಂತ ಸುಮಾರು 44 ಶಾಲೆಗಳಿಗೆ ಅನಾಮಧೇಯ ಇಮೇಲ್‌ಗಳ ಮೂಲಕ ಬಂದಿತ್ತು. ಈ ಘಟನೆ ನಡೆದು 10 ದಿನಗಳು ಕೂಡ ಕಳೆದಿಲ್ಲ, ಅಷ್ಟರೊಳಗೆ ಇದೇ ರೀತಿಯ ಮತ್ತೊಂದು ಬೆದರಿಕೆ ಕರೆ ಮುನ್ನೆಲೆಗೆ ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT