ದರ್ಶನ್ 
ರಾಜ್ಯ

ಬೆಂಗಳೂರು: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ; ದರ್ಶನ್ ಹೊರಗಿಟ್ಟು ಚಾರ್ಜ್ ಶೀಟ್ ಸಲ್ಲಿಕೆಗೆ ಪೊಲೀಸರ ನಿರ್ಧಾರ?

ಮಹಿಳೆಗೆ ನಾಯಿ ಕಚ್ಚಿದ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಗೆ ಬಿಗ್ ರಿಲೀಫ್‌ ಸಿಗುವ ಸಾಧ್ಯತೆ ದಟ್ಟವಾಗಿದೆ. ಆರ್.ಆರ್ ನಗರ ಪೊಲೀಸರು ನಟ ದರ್ಶನ್‌ಗೆ ಕ್ಲೀನ್ ಚಿಟ್ ಕೊಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಬೆಂಗಳೂರು: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಗೆ ಬಿಗ್ ರಿಲೀಫ್‌ ಸಿಗುವ ಸಾಧ್ಯತೆ ದಟ್ಟವಾಗಿದೆ. ಆರ್.ಆರ್ ನಗರ ಪೊಲೀಸರು ನಟ ದರ್ಶನ್‌ಗೆ ಕ್ಲೀನ್ ಚಿಟ್ ಕೊಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ದರ್ಶನ್ ಮನೆಯ ನಾಯಿ ವೈದ್ಯೆ ಅಮಿತಾ ಜಿಂದಾಲ್ ಅವರಿಗೆ ಕಚ್ಚಿತ್ತು. ಈ ಸಂಬಂಧ ಮಹಿಳೆ ನಟ ದರ್ಶನ್ ಹಾಗೂ ಮನೆ ಕೆಲಸದವನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಪ್ರಕರಣದಲ್ಲಿ ಆರೋಪಿಗಳಾಗಿದ್ದ ದರ್ಶನ್ ಹಾಗೂ ಮನೆ ಕೆಲಸದವನಿಗೆ ನೋಟಿಸ್ ಕೊಟ್ಟು ವಿಚಾರಣೆ ಮಾಡಿ ಘಟನೆ ಬಗ್ಗೆ ಇಬ್ಬರ ಬಳಿ ಆರ್.ಆರ್ ನಗರ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದರು. ಈಗ ಚಾರ್ಜ್ ಶೀಟ್ ಸಲ್ಲಿಸಲು ಆರ್.ಆರ್ ನಗರ ಪೊಲೀಸರು ತಯಾರಿ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ದರ್ಶನ್ ಪಾತ್ರ ಕಂಡು ಬರದ ಹಿನ್ನೆಲೆಯಲ್ಲಿ ದರ್ಶನ್‌ ಹೆಸರು ಕೈಬಿಟ್ಟು ಚಾರ್ಜ್‌ಶೀಟ್‌ ಸಲ್ಲಿಸಲು ಪೊಲೀಸರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ನಡೆದಾಗ ನಟ ದರ್ಶನ್ ಘಟನಾ ಸ್ಥಳದಲ್ಲಿ ಇರಲಿಲ್ಲ. ನಾಯಿ ದಾಳಿಯ ದಿನ ದರ್ಶನ್ ಹೊರ ರಾಜ್ಯದಲ್ಲಿ ಶೂಟಿಂಗ್‌ನಲ್ಲಿ  ಭಾಗಿಯಾಗಿದ್ದರು. ದರ್ಶನ್‌ ಹೊರಗಡೆ ಇರುವುದನ್ನು ಟವರ್ ಲೋಕೇಷನ್ ಮೂಲಕ ಪೊಲೀಸರು ಖಾತ್ರಿ ಪಡಿಸಿಕೊಂಡಿದ್ದಾರೆ.

ದರ್ಶನ್ ನಾಯಿ ನೋಡಿಕೊಳ್ಳಲು ಕೆಲಸದವರನ್ನು ನೇಮಕ ಮಾಡಿದ್ದರು. ಮಹಿಳೆ ದರ್ಶನ್ ವಿರುದ್ಧ ಮಾಡಿರುವ ಆರೋಪಗಳಿಗೆ ಸೂಕ್ತ ಸಾಕ್ಷ್ಯಗಳಿಲ್ಲ. ಕೆಲಸದ ವ್ಯಕ್ತಿ ಮಾಡಿರುವ ತಪ್ಪಿಗೆ  ಮಾಲೀಕನನ್ನು ಆರೋಪಿ ಮಾಡುವುದು ಸರಿಯಲ್ಲ ಎಂಬ ಕಾರಣಕ್ಕೆ ದರ್ಶನ್‌ ಹೆಸರು ಕೈಬಿಟ್ಟು ಚಾರ್ಜ್‌ಶೀಟ್‌ ಸಲ್ಲಿಸಲು ಪೊಲೀಸರು ಮುಂದಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT