ದರ್ಶನ್ 
ರಾಜ್ಯ

ಬೆಂಗಳೂರು: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ; ದರ್ಶನ್ ಹೊರಗಿಟ್ಟು ಚಾರ್ಜ್ ಶೀಟ್ ಸಲ್ಲಿಕೆಗೆ ಪೊಲೀಸರ ನಿರ್ಧಾರ?

ಮಹಿಳೆಗೆ ನಾಯಿ ಕಚ್ಚಿದ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಗೆ ಬಿಗ್ ರಿಲೀಫ್‌ ಸಿಗುವ ಸಾಧ್ಯತೆ ದಟ್ಟವಾಗಿದೆ. ಆರ್.ಆರ್ ನಗರ ಪೊಲೀಸರು ನಟ ದರ್ಶನ್‌ಗೆ ಕ್ಲೀನ್ ಚಿಟ್ ಕೊಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಬೆಂಗಳೂರು: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಗೆ ಬಿಗ್ ರಿಲೀಫ್‌ ಸಿಗುವ ಸಾಧ್ಯತೆ ದಟ್ಟವಾಗಿದೆ. ಆರ್.ಆರ್ ನಗರ ಪೊಲೀಸರು ನಟ ದರ್ಶನ್‌ಗೆ ಕ್ಲೀನ್ ಚಿಟ್ ಕೊಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ದರ್ಶನ್ ಮನೆಯ ನಾಯಿ ವೈದ್ಯೆ ಅಮಿತಾ ಜಿಂದಾಲ್ ಅವರಿಗೆ ಕಚ್ಚಿತ್ತು. ಈ ಸಂಬಂಧ ಮಹಿಳೆ ನಟ ದರ್ಶನ್ ಹಾಗೂ ಮನೆ ಕೆಲಸದವನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಪ್ರಕರಣದಲ್ಲಿ ಆರೋಪಿಗಳಾಗಿದ್ದ ದರ್ಶನ್ ಹಾಗೂ ಮನೆ ಕೆಲಸದವನಿಗೆ ನೋಟಿಸ್ ಕೊಟ್ಟು ವಿಚಾರಣೆ ಮಾಡಿ ಘಟನೆ ಬಗ್ಗೆ ಇಬ್ಬರ ಬಳಿ ಆರ್.ಆರ್ ನಗರ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದರು. ಈಗ ಚಾರ್ಜ್ ಶೀಟ್ ಸಲ್ಲಿಸಲು ಆರ್.ಆರ್ ನಗರ ಪೊಲೀಸರು ತಯಾರಿ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ದರ್ಶನ್ ಪಾತ್ರ ಕಂಡು ಬರದ ಹಿನ್ನೆಲೆಯಲ್ಲಿ ದರ್ಶನ್‌ ಹೆಸರು ಕೈಬಿಟ್ಟು ಚಾರ್ಜ್‌ಶೀಟ್‌ ಸಲ್ಲಿಸಲು ಪೊಲೀಸರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ನಡೆದಾಗ ನಟ ದರ್ಶನ್ ಘಟನಾ ಸ್ಥಳದಲ್ಲಿ ಇರಲಿಲ್ಲ. ನಾಯಿ ದಾಳಿಯ ದಿನ ದರ್ಶನ್ ಹೊರ ರಾಜ್ಯದಲ್ಲಿ ಶೂಟಿಂಗ್‌ನಲ್ಲಿ  ಭಾಗಿಯಾಗಿದ್ದರು. ದರ್ಶನ್‌ ಹೊರಗಡೆ ಇರುವುದನ್ನು ಟವರ್ ಲೋಕೇಷನ್ ಮೂಲಕ ಪೊಲೀಸರು ಖಾತ್ರಿ ಪಡಿಸಿಕೊಂಡಿದ್ದಾರೆ.

ದರ್ಶನ್ ನಾಯಿ ನೋಡಿಕೊಳ್ಳಲು ಕೆಲಸದವರನ್ನು ನೇಮಕ ಮಾಡಿದ್ದರು. ಮಹಿಳೆ ದರ್ಶನ್ ವಿರುದ್ಧ ಮಾಡಿರುವ ಆರೋಪಗಳಿಗೆ ಸೂಕ್ತ ಸಾಕ್ಷ್ಯಗಳಿಲ್ಲ. ಕೆಲಸದ ವ್ಯಕ್ತಿ ಮಾಡಿರುವ ತಪ್ಪಿಗೆ  ಮಾಲೀಕನನ್ನು ಆರೋಪಿ ಮಾಡುವುದು ಸರಿಯಲ್ಲ ಎಂಬ ಕಾರಣಕ್ಕೆ ದರ್ಶನ್‌ ಹೆಸರು ಕೈಬಿಟ್ಟು ಚಾರ್ಜ್‌ಶೀಟ್‌ ಸಲ್ಲಿಸಲು ಪೊಲೀಸರು ಮುಂದಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT