222 ನಕಲಿ ಲಿಕ್ಕರ್ ಜಪ್ತಿ 
ರಾಜ್ಯ

ಮಂಗಳೂರು: ಅಕ್ರಮ ಮದ್ಯದ ಅಡ್ಡೆ ಮೇಲೆ ದಾಳಿ, 222 ನಕಲಿ ಲಿಕ್ಕರ್ ಜಪ್ತಿ

ಕೇರಳ-ಕರ್ನಾಟಕ ಗಡಿ ಭಾಗದ ತಲಪಾಡಿಯ ಕಿನ್ಯಾ ಗ್ರಾಮದ ಸಂತ್ಯಾಗುತ್ತು ಬಳಿ ಅಕ್ರಮ ಮದ್ಯದ ಅಡ್ಡೆಯ ಮೇಲೆ 25ಕ್ಕೂ ಹೆಚ್ಚು ಅಬಕಾರಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. 

ಮಂಗಳೂರು: ಕೇರಳ-ಕರ್ನಾಟಕ ಗಡಿ ಭಾಗದ ತಲಪಾಡಿಯ ಕಿನ್ಯಾ ಗ್ರಾಮದ ಸಂತ್ಯಾಗುತ್ತು ಬಳಿ ಅಕ್ರಮ ಮದ್ಯದ ಅಡ್ಡೆಯ ಮೇಲೆ 25ಕ್ಕೂ ಹೆಚ್ಚು ಅಬಕಾರಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. 

ಖಚಿತ ಮಾಹಿತಿ ಮೇರೆಗೆ, ಅಕ್ರಮವಾಗಿ ಸಾರಾಯಿ ತಯಾರಿಸುತ್ತಿದ್ದ ನಿತ್ಯಾನಂದ ಭಂಡಾರಿ ಎಂಬಾತನ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ಅಬಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 ದಾಳಿ ವೇಳೆ 2240 ಲೀಟರ್ ಸ್ಪಿರಿಟ್ ಹಾಗೂ 222 ಲೀಟರ್ ನಕಲಿ ಲಿಕ್ಕರ್ ಹಾಗೂ ಅದಕ್ಕೆ ಬಳಸಿದ್ದ ಯಂತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ ತಯಾರಿಸಿದ ದೇಶಿ ನಿರ್ಮಿತ ಮದ್ಯವನ್ನು ನೆರೆಯ ಕೇರಳಕ್ಕೆ ಸರಬರಾಜು ಮಾಡಲಾಗುತ್ತಿತ್ತು. ದಾಳಿ ವೇಳೆ ಆರೋಪಿ ಭಂಡಾರಿ ಪರಾರಿಯಾಗಿದ್ದಾನೆ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ. 

ಅಬಕಾರಿ ಇಲಾಖೆ ಮಂಗಳೂರು ವಿಭಾಗದ ಜಂಟಿ ನಿರ್ದೇಶಕ ನಾಗರಾಜಪ್ಪ ಟಿ ಮತ್ತು ಅಬಕಾರಿ ಉಪ ಆಯುಕ್ತ ಟಿ ಎಂ ಶ್ರೀನಿವಾಸ್ ಅವರ ನಿರ್ದೇಶನದಂತೆ ದಾಳಿ ನಡೆಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT