222 ನಕಲಿ ಲಿಕ್ಕರ್ ಜಪ್ತಿ 
ರಾಜ್ಯ

ಮಂಗಳೂರು: ಅಕ್ರಮ ಮದ್ಯದ ಅಡ್ಡೆ ಮೇಲೆ ದಾಳಿ, 222 ನಕಲಿ ಲಿಕ್ಕರ್ ಜಪ್ತಿ

ಕೇರಳ-ಕರ್ನಾಟಕ ಗಡಿ ಭಾಗದ ತಲಪಾಡಿಯ ಕಿನ್ಯಾ ಗ್ರಾಮದ ಸಂತ್ಯಾಗುತ್ತು ಬಳಿ ಅಕ್ರಮ ಮದ್ಯದ ಅಡ್ಡೆಯ ಮೇಲೆ 25ಕ್ಕೂ ಹೆಚ್ಚು ಅಬಕಾರಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. 

ಮಂಗಳೂರು: ಕೇರಳ-ಕರ್ನಾಟಕ ಗಡಿ ಭಾಗದ ತಲಪಾಡಿಯ ಕಿನ್ಯಾ ಗ್ರಾಮದ ಸಂತ್ಯಾಗುತ್ತು ಬಳಿ ಅಕ್ರಮ ಮದ್ಯದ ಅಡ್ಡೆಯ ಮೇಲೆ 25ಕ್ಕೂ ಹೆಚ್ಚು ಅಬಕಾರಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. 

ಖಚಿತ ಮಾಹಿತಿ ಮೇರೆಗೆ, ಅಕ್ರಮವಾಗಿ ಸಾರಾಯಿ ತಯಾರಿಸುತ್ತಿದ್ದ ನಿತ್ಯಾನಂದ ಭಂಡಾರಿ ಎಂಬಾತನ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ಅಬಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 ದಾಳಿ ವೇಳೆ 2240 ಲೀಟರ್ ಸ್ಪಿರಿಟ್ ಹಾಗೂ 222 ಲೀಟರ್ ನಕಲಿ ಲಿಕ್ಕರ್ ಹಾಗೂ ಅದಕ್ಕೆ ಬಳಸಿದ್ದ ಯಂತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ ತಯಾರಿಸಿದ ದೇಶಿ ನಿರ್ಮಿತ ಮದ್ಯವನ್ನು ನೆರೆಯ ಕೇರಳಕ್ಕೆ ಸರಬರಾಜು ಮಾಡಲಾಗುತ್ತಿತ್ತು. ದಾಳಿ ವೇಳೆ ಆರೋಪಿ ಭಂಡಾರಿ ಪರಾರಿಯಾಗಿದ್ದಾನೆ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ. 

ಅಬಕಾರಿ ಇಲಾಖೆ ಮಂಗಳೂರು ವಿಭಾಗದ ಜಂಟಿ ನಿರ್ದೇಶಕ ನಾಗರಾಜಪ್ಪ ಟಿ ಮತ್ತು ಅಬಕಾರಿ ಉಪ ಆಯುಕ್ತ ಟಿ ಎಂ ಶ್ರೀನಿವಾಸ್ ಅವರ ನಿರ್ದೇಶನದಂತೆ ದಾಳಿ ನಡೆಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT