ಸುವರ್ಣ ವಿಧಾನಸೌಧ 
ರಾಜ್ಯ

ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರ ಚಿಂತನೆ: ಡಿಕೆ ಶಿವಕುಮಾರ್

ರಾಜ್ಯಕ್ಕೆ ‘ಕರ್ನಾಟಕ’ ಎಂದು ಮರುನಾಮಕರಣಗೊಂಡು 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ಸೌಧದ ಆವರಣದಲ್ಲಿ ನಡೆದ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೆಳಗಾವಿಯ ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರ ಮುಂದಾಗಿದೆ ಎಂದರು.

ಬೆಳಗಾವಿ: ರಾಜ್ಯಕ್ಕೆ ‘ಕರ್ನಾಟಕ’ ಎಂದು ಮರುನಾಮಕರಣಗೊಂಡು 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ಸೌಧದ ಆವರಣದಲ್ಲಿ ನಡೆದ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೆಳಗಾವಿಯ ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರ ಮುಂದಾಗಿದೆ ಎಂದರು.

‘ವಾರಾಂತ್ಯದಲ್ಲಿ ಸುವರ್ಣ ವಿಧಾನ ಸೌಧವನ್ನು ಸಾರ್ವಜನಿಕರಿಗೆ ಮುಕ್ತವಾಗಿ ತೆರೆದು ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ’ ಎಂದು ಶಿವಕುಮಾರ್ ತಿಳಿಸಿದರು.

ಸುವರ್ಣ ಸೌಧದ ಪ್ರಮುಖ ಸ್ಥಳಗಳಲ್ಲಿ ಫೋಟೊಶೂಟ್ ಸ್ಥಳಗಳನ್ನು ನಿರ್ಮಾಣ ಮಾಡುವ ಮೂಲಕ ಪ್ರವಾಸಿಗರನ್ನು ಆಕರ್ಷಿಸಲಾಗುವುದು. ಈ ಬಗ್ಗೆ ಈಗಾಗಲೇ ವಿಧಾನಸಭೆ ಹಾಗೂ ಪರಿಷತ್ತಿನ ಮಾಜಿ ಸಭಾಪತಿಗಳು ಸಲಹೆಗಳನ್ನು ನೀಡಿದ್ದು, ಸರ್ಕಾರವೂ ಈ ಬಗ್ಗೆ ಚಿಂತನೆ ನಡೆಸಲಿದೆ ಎಂದು ತಿಳಿಸಿದರು.

'ನಾನು ಕರ್ನಾಟಕದ ಇತಿಹಾಸವನ್ನು ಓದುತ್ತಿದ್ದೆ. ಕೆಬಿ ಕೋಳಿವಾಡ್ (ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್) ಅವರು ಕೂಡ ಸುವರ್ಣ ವಿಧಾನ ಸೌಧವನ್ನು ಪ್ರವಾಸಿ ತಾಣವನ್ನಾಗಿ ಮಾಡುವ ಆಲೋಚನೆಯನ್ನು ಬೆಂಬಲಿಸಿದ್ದಾರೆ. ಇಂದು ಈ ಸುವರ್ಣ ಸಂಭ್ರಮದಲ್ಲಿ ಅವರನ್ನು ಗೌರವಿಸುವ ಭಾಗ್ಯವೂ ನಮಗೆ ಸಿಕ್ಕಿತು' ಎಂದರು.

ಶಿವಕುಮಾರ್ ಅವರು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ 50ನೇ ಕರ್ನಾಟಕ ಸುವರ್ಣ ಸಂಭ್ರಮ ಹಾಗೂ ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್ ಅವರಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿದ್ದರು.

ಇದಕ್ಕೂ ಮುನ್ನ ಬೆಳಗಾವಿಯ ಸುವರ್ಣಸೌಧಕ್ಕೆ ವಿಧಾನಸಭೆ ಅಧಿವೇಶನ ವೀಕ್ಷಿಸಲು ಆಗಮಿಸಿದ್ದ ಶಾಲಾ ಮಕ್ಕಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಾದ ನಡೆಸಿದರು. ಸರ್ಕಾರದ ಕಾರ್ಯವೈಖರಿ ಮತ್ತು ಅಭಿವೃದ್ಧಿ ಕಾಮಗಾರಿಗಳ ಕುರಿತು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.

ಕರ್ನಾಟಕ ವಿಧಾನಸಭೆಯ ಅಧಿವೇಶನವನ್ನು ನಡೆಸಲು ವರ್ಷಕ್ಕೊಮ್ಮೆ ಮಾತ್ರ ಈ ಕಟ್ಟಡವನ್ನು ಬಳಸಲಾಗುತ್ತಿರುವುದರಿಂದ ಈ ಕಟ್ಟಡವನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂಬ ಟೀಕೆಗೆ ಒಳಗಾಗಿದೆ. ಇದರ ಹೊರತಾಗಿಯೂ, ರಾಜ್ಯ ಸರ್ಕಾರವು ಈ ಯೋಜನೆಯನ್ನು ಸಮರ್ಥಿಸಿಕೊಂಡಿದೆ. ರಾಜ್ಯ ಸರ್ಕಾರದ ಸಮಿತಿ ಸಭೆಗಳು, ಪ್ರಾದೇಶಿಕ ಕೂಟಗಳು ಮತ್ತು ಅಧಿವೇಶನ ಇಲ್ಲದ ಸಮಯದಲ್ಲಿ ವಿದೇಶಿ ನಿಯೋಗಗಳೊಂದಿಗೆ ಸಮ್ಮೇಳನಗಳನ್ನು ಆಯೋಜಿಸುವಂತಹ ಹೆಚ್ಚುವರಿ ಬಳಕೆಯನ್ನು ಪ್ರಸ್ತಾಪಿಸಿದೆ.
ಈ ಕಟ್ಟಡವನ್ನು ಪ್ರವಾಸಿ ತಾಣವಾಗಿ ಪರಿವರ್ತಿಸುವುದು ಕಟ್ಟಡದ ಮತ್ತೊಂದು ಹೆಚ್ಚುವರಿ ಬಳಕೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT