ಎಂಬಿ ಪಾಟೀಲ್ 
ರಾಜ್ಯ

ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳಿಗೆ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ ಹೆಸರಿಡಲು ಸರ್ಕಾರ ಚಿಂತನೆ

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಹೆಸರಿಡಬೇಕು ಎಂಬ ಬೇಡಿಕೆಗಳನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಸಚಿವ ಎಂಬಿ ಪಾಟೀಲ್ ಬುಧವಾರ ವಿಧಾನಸಭೆಗೆ ತಿಳಿಸಿದರು.

ಬೆಳಗಾವಿ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಹೆಸರಿಡಬೇಕು ಎಂಬ ಬೇಡಿಕೆಗಳನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಸಚಿವ ಎಂಬಿ ಪಾಟೀಲ್ ಬುಧವಾರ ವಿಧಾನಸಭೆಗೆ ತಿಳಿಸಿದರು.

ವಿಮಾನ ನಿಲ್ದಾಣಗಳ ಮರುನಾಮಕರಣದ ಕುರಿತು ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ನಿರ್ಣಯ ಅಂಗೀಕರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವರು ಹೇಳಿದರು.

ಶೂನ್ಯ ವೇಳೆಯಲ್ಲಿ ಕಾಂಗ್ರೆಸ್‌ ಶಾಸಕ ಎನ್‌ಎಚ್‌ ಕೋನರೆಡ್ಡಿ ಮತ್ತು ಶ್ರೀನಿವಾಸ್ ಮಾನೆ ಅವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ‘ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಹೆಸರಿಡಬೇಕು’ ಎಂದು ಹಲವು ದಿನಗಳಿಂದ ಬೇಡಿಕೆಯಿದ್ದು, ಸರ್ಕಾರಕ್ಕೆ ವಿವಿಧ ಸಂಘಟನೆಗಳಿಂದ ಮನವಿ ಸಲ್ಲಿಕೆಯಾಗಿದೆ’ ಎಂದರು.

ಯಾವ ನಗರದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗುವುದೋ ಆ ನಗರದ ಹೆಸರನ್ನು ಇಡುವುದು ಅಭ್ಯಾಸವಾಗಿದೆ. ಅಂತಹ ಹೆಸರನ್ನು ಬದಲಾಯಿಸುವುದು ಕೇಂದ್ರ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯದ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಹೇಳಿದರು.

ರಾಜ್ಯ ಸರ್ಕಾರವು ರಾಜ್ಯದ ಯಾವುದೇ ವಿಮಾನ ನಿಲ್ದಾಣವನ್ನು ಮರುನಾಮಕರಣ ಮಾಡಲು ಬಯಸಿದರೆ, ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಈ ಕುರಿತು ನಿರ್ಣಯವನ್ನು ಮಂಡಿಸಿ ಅಂಗೀಕರಿಸಬೇಕು ಮತ್ತು ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಬೇಕು ಎಂದು ಸಚಿವರು ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಹೆಸರಿಡಬೇಕೆಂಬ ಬೇಡಿಕೆ ಪರಿಶೀಲನೆಯಲ್ಲಿದ್ದು, ಈ ಕುರಿತು ವಿಧಾನಮಂಡಲದ ಉಭಯ ಸದನಗಳಲ್ಲಿ ಪ್ರಸ್ತಾವನೆ ಮಂಡಿಸಿ ಮುಂದಿನ ಕ್ರಮಕೈಗೊಳ್ಳುವ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸುತ್ತೇನೆ ಎಂದು ಅವರು ಹೇಳಿದರು.

ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಕೂಡ ವಿಮಾನ ನಿಲ್ದಾಣಗಳ ಮರುನಾಮಕರಣಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel