ದುಷ್ಕರ್ಮಿ ಮನೋರಂಜನ್ ತಂದೆ ದೇವರಾಜಗೌಡ 
ರಾಜ್ಯ

ಸಂಸತ್ ಭದ್ರತಾ ಲೋಪ: ನನ್ನ ಮಗ ಪ್ರಾಮಾಣಿಕ, ವಿವೇಕಾನಂದರ ಅನುಯಾಯಿ; ದುಷ್ಕರ್ಮಿ ಮನೋರಂಜನ್ ತಂದೆ

ಸಂಸತ್ ದಾಳಿಯ 22ನೇ ವಾರ್ಷಿಕೋತ್ಸವದಂದೆ ಲೋಕಸಭೆಯಲ್ಲಿ ಪ್ರಮುಖ ಭದ್ರತಾ ಲೋಪ ನಡೆದಿದ್ದು ಇಬ್ಬರು ದುಷ್ಕರ್ಮಿಗಳು ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಹಳದಿ ಬಣ್ಣದ ಸ್ಪೈಯನ್ನು ಸಿಂಪಡಿಸಿದ್ದು ಇದು ತೀವ್ರ ಆತಂಕಕ್ಕೆ ಕಾರಣವಾಗಿತ್ತು.

ನವದೆಹಲಿ: ಸಂಸತ್ ದಾಳಿಯ 22ನೇ ವಾರ್ಷಿಕೋತ್ಸವದಂದೆ ಲೋಕಸಭೆಯಲ್ಲಿ ಪ್ರಮುಖ ಭದ್ರತಾ ಲೋಪ ನಡೆದಿದ್ದು ಇಬ್ಬರು ದುಷ್ಕರ್ಮಿಗಳು ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಹಳದಿ ಬಣ್ಣದ ಸ್ಪೈಯನ್ನು ಸಿಂಪಡಿಸಿದ್ದು ಇದು ತೀವ್ರ ಆತಂಕಕ್ಕೆ ಕಾರಣವಾಗಿತ್ತು.

ಈ ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿ ಪೊಲೀಸರು ಪುರುಷ ಮತ್ತು ಮಹಿಳೆ ಇಬ್ಬರನ್ನೂ ಸಂಸತ್ ಭವನದ ಮುಂದೆ ಬಂಧಿಸಿದ್ದರೆ ಮತ್ತಿಬ್ಬರು ಸಂಸತ್ತಿನ ಒಳಗೆ ಬಂಧಿಸಲಾಗಿದೆ ಎಂದು ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ನವದೆಹಲಿ) ಪ್ರಣವ್ ತಾಯಲ್ ಖಚಿತಪಡಿಸಿದ್ದಾರೆ.

ಸಂಸತ್ತಿನ ಹೊರಗೆ ಬಂಧಿಸಿದವರನ್ನು ಸಂಸತ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಕರೆದೊಯ್ದ ವಿಚಾರಣೆ ನಡೆಸಿದ್ದು ಅವರು ಹರಿಯಾಣದ ಹಿಸಾರ್ ನಿವಾಸಿ ನೀಲಂ (42) ಮತ್ತು ಮಹಾರಾಷ್ಟ್ರದ ಲಾತೂರ್ ನಿವಾಸಿ ಅಮೋಲ್ ಶಿಂಧೆ (25) ಎಂದು ಗುರುತಿಸಲಾಗಿದೆ. ಮತ್ತಿಬ್ಬರನ್ನು ಸಾಗರ್ ಶರ್ಮಾ ಮತ್ತು ಮನೋರಂಜನ್ ಎಂದು ತಿಳಿದುಬಂದಿದೆ.

ಇನ್ನು ಸಂಸತ್ ಒಳಗೆ ದುಷ್ಕೃತ್ಯ ನಡೆಸಿದವರನ್ನು ಮೈಸೂರಿನವರು ಎಂದು ತಿಳಿದುಬಂದಿದೆ. ದುಷ್ಕರ್ಮಿಗಳು ಸಂಸದ ಪ್ರತಾಪ್ ಸಿಂಹ ಹೆಸರಲ್ಲಿ ಪಾಸ್ ಗಳನ್ನು ತೆಗೆದುಕೊಂಡು ಬಂದಿದ್ದರು. ಈ ಪೈಕಿ ಮನೋರಂಜನ್ ಎಂಬಾತನ ತಂದೆ ದೇವರಾಜೇಗೌಡ ಅವರು ಪ್ರತಿಕ್ರಿಯಿಸಿದ್ದು ನನ್ನ ಮಗ ಮೈಸೂರು ವಿಶ್ವವಿದ್ಯಾನಿಲಯದ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು ಆತ 'ಸಮಾಜದ ಕೆಡುಕುಗಳ' ವಿರುದ್ಧ ಹೋರಾಡಲು ಬಯಸಿದ್ದನು ಎಂದು ಹೇಳಿದ್ದಾರೆ.

ನನ್ನ ಮಗ ಒಳ್ಳೆಯ ಮತ್ತು ಪ್ರಾಮಾಣಿಕ ಹುಡುಗ. ಅವನು ಯಾವಾಗಲೂ ಸಮಾಜಕ್ಕಾಗಿ ಕೆಲಸ ಮಾಡಲು ಬಯಸುತ್ತಾನೆ. ಅವನು ಸ್ವಾಮಿ ವಿವೇಕಾನಂದರ ಪುಸ್ತಕಗಳನ್ನು ಓದುತ್ತಾನೆ. ಅದು ಅವನ ಕೃತ್ಯಕ್ಕೆ ಕಾರಣವಾಗಿರಬಹುದು ಎಂದು ದೇವರಾಜಗೌಡ ಹೇಳಿದರು.

ಇದೇ ವೇಳೆ ನನ್ನ ಮಗ ತಪ್ಪ ಮಾಡಿದ್ದರೆ ಆತನನ್ನು ಗಲ್ಲಿಗೇರಿಸಿ. ಮಕ್ಕಳ ಜೀವನ ಚೆನ್ನಾಗಿರಲಿ ಎಂದು ವಿದ್ಯಾಭ್ಯಾಸ ಕೊಡಿಸಿದ್ದೆ. ಆದರೆ ಮಗ ಈ ರೀತಿ ಮಾಡಿದ್ದಾನೆ ಎಂದು ದೇವರಾಜಗೌಡ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT