ದುಷ್ಕರ್ಮಿ ಮನೋರಂಜನ್ ತಂದೆ ದೇವರಾಜಗೌಡ 
ರಾಜ್ಯ

ಸಂಸತ್ ಭದ್ರತಾ ಲೋಪ: ನನ್ನ ಮಗ ಪ್ರಾಮಾಣಿಕ, ವಿವೇಕಾನಂದರ ಅನುಯಾಯಿ; ದುಷ್ಕರ್ಮಿ ಮನೋರಂಜನ್ ತಂದೆ

ಸಂಸತ್ ದಾಳಿಯ 22ನೇ ವಾರ್ಷಿಕೋತ್ಸವದಂದೆ ಲೋಕಸಭೆಯಲ್ಲಿ ಪ್ರಮುಖ ಭದ್ರತಾ ಲೋಪ ನಡೆದಿದ್ದು ಇಬ್ಬರು ದುಷ್ಕರ್ಮಿಗಳು ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಹಳದಿ ಬಣ್ಣದ ಸ್ಪೈಯನ್ನು ಸಿಂಪಡಿಸಿದ್ದು ಇದು ತೀವ್ರ ಆತಂಕಕ್ಕೆ ಕಾರಣವಾಗಿತ್ತು.

ನವದೆಹಲಿ: ಸಂಸತ್ ದಾಳಿಯ 22ನೇ ವಾರ್ಷಿಕೋತ್ಸವದಂದೆ ಲೋಕಸಭೆಯಲ್ಲಿ ಪ್ರಮುಖ ಭದ್ರತಾ ಲೋಪ ನಡೆದಿದ್ದು ಇಬ್ಬರು ದುಷ್ಕರ್ಮಿಗಳು ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಹಳದಿ ಬಣ್ಣದ ಸ್ಪೈಯನ್ನು ಸಿಂಪಡಿಸಿದ್ದು ಇದು ತೀವ್ರ ಆತಂಕಕ್ಕೆ ಕಾರಣವಾಗಿತ್ತು.

ಈ ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿ ಪೊಲೀಸರು ಪುರುಷ ಮತ್ತು ಮಹಿಳೆ ಇಬ್ಬರನ್ನೂ ಸಂಸತ್ ಭವನದ ಮುಂದೆ ಬಂಧಿಸಿದ್ದರೆ ಮತ್ತಿಬ್ಬರು ಸಂಸತ್ತಿನ ಒಳಗೆ ಬಂಧಿಸಲಾಗಿದೆ ಎಂದು ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ನವದೆಹಲಿ) ಪ್ರಣವ್ ತಾಯಲ್ ಖಚಿತಪಡಿಸಿದ್ದಾರೆ.

ಸಂಸತ್ತಿನ ಹೊರಗೆ ಬಂಧಿಸಿದವರನ್ನು ಸಂಸತ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಕರೆದೊಯ್ದ ವಿಚಾರಣೆ ನಡೆಸಿದ್ದು ಅವರು ಹರಿಯಾಣದ ಹಿಸಾರ್ ನಿವಾಸಿ ನೀಲಂ (42) ಮತ್ತು ಮಹಾರಾಷ್ಟ್ರದ ಲಾತೂರ್ ನಿವಾಸಿ ಅಮೋಲ್ ಶಿಂಧೆ (25) ಎಂದು ಗುರುತಿಸಲಾಗಿದೆ. ಮತ್ತಿಬ್ಬರನ್ನು ಸಾಗರ್ ಶರ್ಮಾ ಮತ್ತು ಮನೋರಂಜನ್ ಎಂದು ತಿಳಿದುಬಂದಿದೆ.

ಇನ್ನು ಸಂಸತ್ ಒಳಗೆ ದುಷ್ಕೃತ್ಯ ನಡೆಸಿದವರನ್ನು ಮೈಸೂರಿನವರು ಎಂದು ತಿಳಿದುಬಂದಿದೆ. ದುಷ್ಕರ್ಮಿಗಳು ಸಂಸದ ಪ್ರತಾಪ್ ಸಿಂಹ ಹೆಸರಲ್ಲಿ ಪಾಸ್ ಗಳನ್ನು ತೆಗೆದುಕೊಂಡು ಬಂದಿದ್ದರು. ಈ ಪೈಕಿ ಮನೋರಂಜನ್ ಎಂಬಾತನ ತಂದೆ ದೇವರಾಜೇಗೌಡ ಅವರು ಪ್ರತಿಕ್ರಿಯಿಸಿದ್ದು ನನ್ನ ಮಗ ಮೈಸೂರು ವಿಶ್ವವಿದ್ಯಾನಿಲಯದ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು ಆತ 'ಸಮಾಜದ ಕೆಡುಕುಗಳ' ವಿರುದ್ಧ ಹೋರಾಡಲು ಬಯಸಿದ್ದನು ಎಂದು ಹೇಳಿದ್ದಾರೆ.

ನನ್ನ ಮಗ ಒಳ್ಳೆಯ ಮತ್ತು ಪ್ರಾಮಾಣಿಕ ಹುಡುಗ. ಅವನು ಯಾವಾಗಲೂ ಸಮಾಜಕ್ಕಾಗಿ ಕೆಲಸ ಮಾಡಲು ಬಯಸುತ್ತಾನೆ. ಅವನು ಸ್ವಾಮಿ ವಿವೇಕಾನಂದರ ಪುಸ್ತಕಗಳನ್ನು ಓದುತ್ತಾನೆ. ಅದು ಅವನ ಕೃತ್ಯಕ್ಕೆ ಕಾರಣವಾಗಿರಬಹುದು ಎಂದು ದೇವರಾಜಗೌಡ ಹೇಳಿದರು.

ಇದೇ ವೇಳೆ ನನ್ನ ಮಗ ತಪ್ಪ ಮಾಡಿದ್ದರೆ ಆತನನ್ನು ಗಲ್ಲಿಗೇರಿಸಿ. ಮಕ್ಕಳ ಜೀವನ ಚೆನ್ನಾಗಿರಲಿ ಎಂದು ವಿದ್ಯಾಭ್ಯಾಸ ಕೊಡಿಸಿದ್ದೆ. ಆದರೆ ಮಗ ಈ ರೀತಿ ಮಾಡಿದ್ದಾನೆ ಎಂದು ದೇವರಾಜಗೌಡ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT